ಬಿಸಿ ಬಿಸಿ ಸುದ್ದಿ

ಅಂಬಾನಿ-ಅಧಾನಿಗಳ ಸಾಲಾ ಮನ್ನಾ ಮಾಡಿದರೆ ದೇಶ ದಿವಾಳಿ ಆಗಲ್ವಾ: ಸಚಿವ ಪ್ರಿಯಾಂಕ್ ಖರ್ಗೆ

ವಾಡಿ: ನಾವು ಕೊಡುವ ಗ್ಯಾರಂಟಿ ಯೋಜನೆ ಬಿಟ್ಟಿ ಭಾಗ್ಯಾ ಅಲ್ಲ ನಿಮ್ಮ ತೆರಿಗೆ ಹಣ ನಿಮಗೆ‌ ಕೊಡುತ್ತಿದ್ದೇವೆ. ಆದರೆ ಬಿಜೆಪಿಯವರಿಗೆ ತೆಲೆಯಲ್ಲಿ ಮೆದುಳು ಇಲ್ಲ ಹಾಗಾಗಿ, ಬಡವರ ಭಾಗ್ಯಗಳನ್ನು ಬಿಟ್ಟಿ ಎಂದು ಬಿಂಬಿಸುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ/ಬಿಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಪಟ್ಟಣ ಸಮೀಪದದ ರಾವೂರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರ ಪ್ರಚಾರ ಸಭೆ ಉದ್ದೇಶಿಸಿ ಮಾತನಾಡುತ್ತ, ನಮ್ಮ ಸರ್ಕಾರ 52 ಸಾವಿರ ಕೋಟಿ ಬಡವರಿಗೆ ಖರ್ಚು ಮಾಡಿದರೆ, ದೇಶ ಆರ್ಥಿಕವಾಗಿ ದಿವಾಳಿಯಾಗುತ್ತಿದೆ ಎನ್ನುವ ಬಿಜೆಪಿಗರು, ಅಂಬಾನಿ-ಅಧಾನಿಗೆ ಲಕ್ಷಾಂತರ ಕೋಟಿ ಸಾಲಾ ಮನ್ನಾ ಮಾಡಿದರೆ ದೇಶ ದಿವಾಳಿ ಆಗಲ್ವಾ? ಎಂದು ಪ್ರಶ್ನಿಸಿದರು.

ಬಿಜೆಪಿಗರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಬಗ್ಗೆ ಟೀಕೆ ಮಾಡಲು ಕುಣಿಕುಣಿದು ಮಾತನಾಡುತ್ತಾರೆ. ಬರದ ಬಗ್ಗೆ, ನಿರುದ್ಯೋಗದ ಬಗ್ಗೆ, ಬೆಲೆ ಏರಿಕೆ ಬಗ್ಗೆ ಮಾತಾಡು ಅಂತ್ರೆ ಬಾಯಿಗೆ ಬೀಗ ಬೀಳುತ್ತೆ. ಇವರಿಗೆ ಬಡವರ ಬಗ್ಗೆ ಯೋಚಿಸಲು ಸಮಯವಿಲ್ಲ ಎಂದು ಟೀಕಿಸಿದರು.

ನಾವು ಕಟ್ಟಿದ ರೈಲ್ವೆ ಇಲಾಖೆಯಿಂದ ನಾವು ಮಾಡಿದ ರೈಲು ನಿಲ್ದಾಣದಿಂದ, ನಾವು ಹಾಕಿದ ಹಳಿಯ ಮೇಲೆ ಒಂದು ರೈಲು ಓಡಿಸಿ ಮಹಾನ್ ಸಾಧನೆ ಮಾಡಿದ ಹಾಗೆ ಬೀಗುತ್ತಿದ್ದಾರೆ. ಆದರೆ, 1700 ರಿಂದ 2700 ಬೆಲೆ ಟಿಕೆಟ್ ಇರುವ ಒಂದೇ ಭಾರತ ರೈಲು ಬಡವರಿಗಾಗಿ ಅಲ್ಲ. ಅದು ಶ್ರೀಮಂತರಿಗಾಗಿ ಮಾಡಿದ್ದಾರೆ ಎಂದರು.

ಮಾಜಿ ಸಚಿವರಾದ ಬಾಬುರಾವ ಚಿಂವನಸೂರ ಮಾತನಾಡಿ, ನನ್ನ ಕೋಲಿ ಸಮುದಾಯವನ್ನು ಎಸ್ಟಿ ಪಟ್ಟಿಯಲ್ಲಿ ಸೇರಿಸುತ್ತೇವೆ ಎಂದು ಭರವಸೆ ನೀಡಿ ಅಧಿಕಾರ ಹಿಡಿದ ಸಂಸದ ಡಾ. ಉಮೇಶ ಜಾಧವ ಐದು ವರ್ಷಗಳಲ್ಲಿ ಒಮ್ಮೆಯೂ ನಮ್ಮ ಕೋಲಿ ಸಮಾಜವನ್ನು ಎಸ್ಟಿ ಪಟ್ಟಿಗೆ ಸೇರಿಸುವ ಬಗ್ಗೆ ಸಂಸತ್ತಿನಲ್ಲಿ ಮಾತಾಡಿಲ್ಲ. ಆದರೆ ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಪ್ರಿಯಾಂಕ್ ಖರ್ಗೆ ಅವರು ಎರಡು ಸಲ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ‌ ಸಲ್ಲಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ವಿದಾನ ಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ‌ ಕಮಕನೂರ, ಚಂದ್ರಿಕಾ ಪರಮೇಶ್ವರಿ, ನಾಗರೆಡ್ಡಿ ಕರದಾಳ, ಮಹಮೂದ್ ಸಾಹೆಬ್, ಭಗಣಗೌಡ ಸಂಕನೂರ, ಟೋಪಣ್ಣ ಕೋಮಟೆ, ಡಾ ಜಾಹಿದಾ ಬೇಗಂ ಕೆಪಿಸಿಸಿ ಕಾರ್ಯದರ್ಶಿ, ಭೀಮಣ್ಣ ಸಾಲಿ,‌ ರಾಜಗೋಪಾಲ ರೆಡ್ಡಿ, ಶ್ರೀನಿವಾಸ ಸಗರ, ರಮೇಶ್ ಮರಗೋಳ, ಶಂಬುಲಿಂಗ ಗುಂಡಗುರ್ತಿ, ಗುರುನಾಥ ಗುದಗಲ್ ಸೇರಿದಂತೆ ಹಲವರಿದ್ದರು.

emedialine

Recent Posts

ಪ್ರಾಧ್ಯಾಪಕಿ ಡಾ.ಜಯಶ್ರೀ ಅಗರಖೇಡ್ ಗೆ ಪೆÇ್ರ.ಸತೀಶ್ ಧವನ್ ಪ್ರಶಸ್ತಿ

ಕಲಬುರಗಿ: ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಪೂಜ್ಯ ದೊಡ್ಡಪ್ಪ ಅಪ್ಪ ಇಂಜಿನಿಯರಿಂಗ ಕಾಲೇಜಿನ ಕಂಪ್ಯೂಟರ್ ಸಾಯಿನ್ಸ್ ಇಂಜಿನಿಯರಿಂಗ (ಸಿಎಸ್‍ಇ) ವಿಭಾಗದ…

1 hour ago

ರಾಜ್ಯಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಎರಡು ಪದಕಗೆದ್ದ ಲೋಕೇಶ್ ಪೂಜಾರ್

ಕಲಬುರಗಿ: ರಾಜ್ಯಮಟ್ಟದ ಸರ್ಕಾರಿ ನೌಕರರಕ್ರೀಡಾಕೂಟದಈಜು ಸ್ಪರ್ಧೆಯಲ್ಲಿ ಕಲಬುರಗಿಯ ವಿಭಾಗೀಯಆಹಾರ ಪ್ರಯೋಗಾಲಯದ ಹಿರಿಯಆಹಾರ ವಿಶ್ಲೇಷಣಅಧಿಕಾರಿ ಲೋಕೇಶ್ ಪೂಜಾರ್‍ಅವರುಉತ್ತಮ ಪ್ರದರ್ಶನ ನೀಡಿಒಂದು ಬಂಗಾರ…

1 hour ago

ತೊಗರಿ ಬೆಳೆಯಲ್ಲಿ ಗೊಣ್ಣೆ ಹುಳದ ಭಾದೆ ಹತೋಟಿಗೆ ಡಾ. ಮಲ್ಲಪ್ಪ ಅವರಿಂದ ಸಲಹೆ

ಕಲಬುರಗಿ: ತಾಲೂಕಿನಲ್ಲಿ ತೊಗರಿ ಬೆಳೆಗೆ ಅಲ್ಲಲ್ಲಿ ಗೊಣ್ಣೆ ಹುಳದ ಭಾದೆ ಕಂಡು ಬಂದಿದ್ದು ರೈತಾಪಿ ಜನರು ಹತೋಟಿಗೆ ಕೃಷಿ ವಿಜ್ಞಾನ…

2 hours ago

ನಾಗಾವಿ, ಕಾಳಗಿ ಸ್ಮಾರಕಗಳ ಸಂರಕ್ಷಣೆಗೆ ಕ್ರಮ; ಪ್ರವಾಸಿಗಳಿಗೆ ಸೌಲಭ್ಯ | ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ; ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವದರೊಂದಿಗೆ ಈ ಎರಡು ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸಲು…

2 hours ago

ಸಂಗೊಳ್ಳಿ ರಾಯಣ್ಣನಿಗೆ ಅವಮಾನ – ಕಿಡಿಗೇಡಿಗಳ ಬಂಧನಕ್ಕೆ ತಿಪ್ಪಣ್ಣ ಕ್ಯಾತನಾಳ ಆಗ್ರಹ

ಶಹಪುರ: ದೇಶಾಭಿಮಾನಿ,ಸ್ವಾಭಿಮಾನಿ, ಕೆಚ್ಚೆದೆಯ ವೀರ ಸಂಗೊಳ್ಳಿ ರಾಯಣ್ಣನಿಗೆ ಅವಮಾನಿಸಿದ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಶ್ರೀ ಕನಕದಾಸ ಶಿಕ್ಷಣ ಮತ್ತು…

3 hours ago

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಚುನಾವಣೆ 25ರಂದು

ಕಲಬುರಗಿ: ಆ. 25 ರಂದು ನಡೆಯಲಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಘಟಕದ 27 ಸ್ಥಾನಗಳಿಗೆ (…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420