ಲೋಕಸಭೆ 3ನೇ ಹಂತದ ಮತದಾನ ಚುನಾವಣೆಗಾಗಿ ಒಟ್ಟು 11,162 ಸಿಬ್ಬಂದಿಗಳ ನೇಮಕ

ಕಲಬುರಗಿ:  ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರಕ್ಕೆ ಮಂಗಳವಾರ ಏಪ್ರಿಲ್ 23ರಂದು ಬೆಳಗಿನ 7 ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನಕ್ಕಾಗಿ ಕಲಬುರಗಿ ಜಿಲ್ಲೆಯಲ್ಲಿ ಒಟ್ಟು 2368 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನ ಪ್ರಕ್ರಿಯೇಯನ್ನು ಶಾಂತಿಯುತವಾಗಿ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲು ಜಿಲ್ಲೆಯಾದ್ಯಂತ ಒಟ್ಟು 11,162 ಸಿಬ್ಬಂದಿಗಳ ನೇಮಕ ಮಾಡಲಾಗಿದೆ ಎಂದು ಗುಲಬರ್ಗಾ (ಮೀಸಲು) ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿ ಆರ್. ವೆಂಕಟೇಶಕುಮಾರ ಅವರು ತಿಳಿಸಿದ್ದಾರೆ.


ಮತದಾನವು ಮುಕ್ತ, ನ್ಯಾಯಸಮ್ಮತ ಹಾಗೂ ಶಾಂತಿಯುತವಾಗಿ ಜರುಗಲು ಗುಲಬರ್ಗಾ ಕಲಬುರಗಿ ಜಿಲ್ಲೆಯಾದ್ಯಂತ 2737 ಪೊಲಿಂಗ್ ಪಾರ್ಟಿ ಹಾಗೂ ಹೆಚ್ಚುವರಿಯಾಗಿ 369 ಪೊಲಿಂಗ್ ಪಾರ್ಟಿ ರಚಿಸಲಾಗಿದೆ. ಒಟ್ಟು 2737 ಮತಗಟ್ಟೆ ಅಧ್ಯಕ್ಷಾಧಿಕಾರಿಗಳನ್ನು, 2737 ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿ ಹಾಗೂ 5474 ಮತದಾನಾಧಿಕಾರಿಗಳನ್ನು, 214 ಕಾಯ್ದಿರಿಸಿದ ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ಸೇರಿದಂತೆ ಒಟ್ಟು 11,162 ಸಿಬ್ಬಂದಿಗಳನ್ನು ನೇಮಕ ಮಾಡಲಾಗಿದೆ. ಚುನಾವಣೆಯಲ್ಲಿ 2775 ಬ್ಯಾಲೆಟ್ ಯೂನಿಟ್, 2775 ಕಂಟ್ರೋಲ್ ಯೂನಿಟ್ ಹಾಗೂ 3266 ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುತ್ತಿದೆ.


ಕಲಬುರಗಿ ಜಿಲ್ಲೆಯಾದ್ಯಂತ ಒಟ್ಟು 21,26,276 ಮತದಾರರಿದ್ದು, ಅದರಲ್ಲಿ 10,78,077 ಪುರುಷ ಮತದಾರರು, 10,47,835 ಮಹಿಳಾ ಮತದಾರರು ಹಾಗೂ 364 ಇತರೆ ಮತದಾರರು ಮತದಾನದ ದಿನದಂದು ತಮ್ಮ ಹಕ್ಕನ್ನು ಚಲಾಯಿಸಲಿದ್ದಾರೆ. ಚುನಾವಣೆಗಾಗಿ ಕೆ.ಎಸ್.ಆರ್.ಟಿ.ಸಿ. ಬಸ್‍ಗಳು-232, ಜೀಪಗಳು 40, ಕ್ರೂಜರ್-481 ಹಾಗೂ 86 ಮಿನಿಬಸ್‍ಗಳು ಸೇರಿದಂತೆ ಒಟ್ಟು 839 ವಾಹನಗಳನ್ನು ಬಳಸಿಕೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.


ಕಲಬುರಗಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿ ಮಹಿಳಾ ಮತದಾರರನ್ನು ಆಕರ್ಷಿಸಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ ಒಟ್ಟು 9 ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದಲ್ಲದೆ ವಿಧಾನಸಭಾವಾರು 9 ಮಾದರಿ ಮತಗಟ್ಟೆಗಳನ್ನು ಹಾಗೂ ವಿಧಾನಸಭಾ ಕ್ಷೇತ್ರಕ್ಕೆ ಒಂದರಂತೆ 9 ವಿಕಲಚೇತನರ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಬಾರಿ ಚುನಾವಣೆಯಲ್ಲಿ ವಿಕಲಚೇತನರಿಗೆ ವಿನೂತನ ವ್ಯವಸ್ಥೆಯನ್ನು ಚುನಾವಣಾ ಆಯೋಗ ಕೈಗೊಂಡಿದ್ದು, ವಿಕಲಚೇತನ ಮತದಾರರನ್ನು ಮನೆಯಿಂದ ಮತಗಟ್ಟೆಗೆ ಕರೆತರಲು ಚುನಾವಣಾ ಆಯೋಗದ ವತಿಯಿಂದ ವಾಹನದ ವ್ಯವಸ್ಥೆ ಮಾಡಲಾಗಿದೆ. ಮತಗಟ್ಟೆಗಳಲ್ಲಿ ರ್ಯಾಂಪ್ ವ್ಯವಸ್ಥೆ ಮಾಡಲಾಗಿದೆ. ದೃಷ್ಠಿ ದೋಷವುಳ್ಳವರಿಗೆ ಸಹಾಯವಾಗಲು ಬ್ರೈಲ್ ಬ್ಯಾಲೆಟ್ ಪೇಪರ್ ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.


ಮತದಾನ ದಿನದಂದು ಮತಗಟ್ಟೆಯಲ್ಲಿ ಮತದಾನದ ಗೌಪ್ಯತೆಯನ್ನು ಕಾಪಾಡುವ ದೃಷ್ಠಿಯಿಂದ ಮತದಾರರು ಮತಗಟ್ಟೆಗೆ ಮೊಬೈಲ್, ಕ್ಯಾಮೆರಾ ತರುವುದನ್ನು ನಿಷೇಧಿಸಲಾಗಿದೆ. ಜಿಲ್ಲೆಯ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದಾರೆ.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

9 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

12 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

12 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

12 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

12 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

12 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420