ಕಲಬುರಗಿ: ಕಳೆದೆರಡುವರೆ ದಶಕದಿಂದ ಈ ಭಾಗದಲ್ಲಿ ಕನ್ನಡ ಕಟ್ಟುವ ಕಾಯಕದಲ್ಲಿ ನಿರತರಾಗಿರುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರನ್ನು ಶಹಾಬಾದ ತಾಲೂಕಿನ ತೊನಸನಹನಳ್ಳಿ (ಎಸ್.) ಶ್ರೀ ಅಲ್ಲಮಪ್ರಭು ಸಂಸ್ಥಾನ ಮಠದ ವತಿಯಿಂದ ಕೊಡಮಾಡುವ ಕಾಯಕ ರತ್ನ ಪ್ರಶಸ್ತಿಯನ್ನು ಶ್ರೀ ಡಾ. ಮಲ್ಲಣಪ್ಪ ಮಹಾಸ್ವಾಮಿಗಳವರು ನೀಡಿ ಗೌರವಿಸಿದರು.
ಎಲೆಮರೆಯ ಕಾಯಿಯಂತೆ ಅಲ್ಲಲ್ಲಿ ಅಡಗಿದ ಪ್ರತಿಭೆಗಳನ್ನು ಹುಡುಕಿ ಅವರಿಗೆ ವೇದಿಕೆ ನೀಡಿ, ಗೌರವಿಸಿ ಮುಖ್ಯ ವಾಹಿನಿಗೆ ಪರಿಚಯಿಸುವ ಕಾರ್ಯ ಸಂಘಟಕ ವಿಜಯಕುಮಾರ ತೇಗಲತಿಪ್ಪಿ ಕಳೆದ ಸುಮಾರು ವರ್ಷಗಳಿಂಡ ಮಾಡುತ್ತಾ ಬರುತ್ತಿದ್ದಾರೆ. ತೇಗಲತಿಪ್ಪಿ ಅವರ ಕಾರ್ಯಕ್ರಮಗಳ ಪ್ರವಾಹ ನಿತ್ಯ ನಿರಂತರವಾಗಿ ಹರಿಯುತ್ತಿರುವುದನ್ನು ಕಂಡ ಜಿಲ್ಲೆಯ ಜನತೆ ಇವರನ್ನು ಸದಾ ಪ್ರೋತ್ಸಾಹ ನೀಡುತ್ತಾ ಬರುತ್ತಿದ್ದಾರೆ. ಬತ್ತದ ಉತ್ಸಾಹ ಕನ್ನಡಕ್ಕಾಗಿ ದುಡಿಯಬೇಕೆಂಬ ಉತ್ಕಟ ಹಂಬಲಕ್ಕೆ ಜನರು ಬೆಂಬಲವಾತಿ ನಿಂತು ಕನ್ನಡ ಕಟ್ಟುವ ಕಾಯಕದಲ್ಲಿ ಜೊತೆಗಿದ್ದು ಸಹಕರಿಸುತ್ತಿದ್ದಾರೆ.
ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ಮೆಚ್ಚು ಮಾತುಗಳು ಮತ್ತು ಚುಚ್ಚು ಮಾತುಗಳಿಗೆ ಹೆಚ್ಚಿನ ಗಮನ ಹರಿಸದೆ ಕನ್ನಡ ಕಟ್ಟುವ ಕಾಯಕದಲ್ಲಿ ನಿರತರಾಗಿರುವ ಕಾರಣಕ್ಕಾಗಿ ಶ್ರೀಮಠದ ವತಿಯಿಂದ ಗುರುವಾರ ಶ್ರೀಮಠದ ಆವರಣದಲ್ಲಿ ನಡೆದ ಬೃಹತ್ ಸಮಾರಂಭದಲ್ಲಿ ತೇಗಲತಿಪ್ಪಿ ಅವರಿಗೆ `ಕಾಯಕ ರತ್ನ’ ಪ್ರಶಸ್ತಿಯನ್ನು ನೀಡಿ ಆಶೀರ್ವಾದಿಸಿದರು.
ಕಲಬುರಗಿ: ಬಿಜೆಪಿ ಹಿರಿಯ ಮುಖಂಡ ಧರ್ಮಣ್ಣ ಇಂದು ಬೆಳಗ್ಗೆ ವಾಕಿಂಗ್ ಹೋದಾಗ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಲಬುರಗಿ ನಗರದ ಜೇವರ್ಗಿ…
ಕಲಬುರಗಿ: ನೀರಿನ ಕನೆಕ್ಷನಗಾಗಿ ಹತ್ತು ಸಾವಿರ ಲಂಚಾಪಡೆಯುತ್ತಿದ್ದಾಗ ಜೇವರ್ಗಿ ಪುರಸಭೆಯ ಮಹಿಳಾ ಸಿಬ್ಬಂದಿ ಲಣೊಕಾಯುಕ್ತರ ಬಲೆಗೆ ಬಿದ್ದ ಘಟನೆ ಬುಧವಾರ…
ಬೆಂಗಳೂರು: ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 371 ಜೆ ಅಡಿ ಉದ್ಯೋಗ ನೇಮಕಾತಿ ಹಾಗೂ ಬಡ್ತಿ ಸಂಬಂಧದಲ್ಲಿ ಆಗಿರುವ ಗೊಂದಲಗಳನ್ನು ನಿವಾರಿಸಿ…
ಕಲಬುರಗಿ: ಆದಿಜಾಂಬವ ಸರ್ಕಾರಿ ಅರೆ ಸರ್ಕಾರಿ ನೌಕರರ ಪತ್ತಿನ ಸಹಕಾರ ಸಂಘದ ನಿಯೋಗ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಡಾ.ಮಲ್ಲಿಕಾರ್ಜುನ ಖರ್ಗೆ…
ಕಲಬುರಗಿ: ಮಾಜಿ ಸಚಿವರಾದ ಮಾಲಿಕೆಯ್ಯಾ ಗುತ್ತೇದಾರ್ ಅವರ ಅಪ್ಪಟ ಅಭಿಮಾನಿ ಹಾಗೂ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ…
ಕಲಬುರಗಿ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಪ್ರಶಾಂತ್ ಗೌಡ ಮಾಲಿಪಾಟೀಲ್ ಅವರ ನೇತೃತ್ವದಲ್ಲಿ ಜಿಲ್ಲಾ…