ಕಲಬುರಗಿ; ಹುಬ್ಬಳ್ಳಿಯಲ್ಲಿ ಬರ್ಬರವಾಗಿ ಹತ್ಯೆಯಾದ ಸಹೋದರಿ ನೇಹಾ ಹಿರೇಮಠ ಕುಟುಂಬಕ್ಕೆ ತಮ್ಮ ತೀವ್ರ ಸಂತಾಪಗಳನ್ನು ತಿಳಿಸಿರುವ ಕೆಕೆಆರ್ಡಿಬಿ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕರಾದ ಡಾ. ಅಜಯ್ ಸಿಂಗ್ ಅವರು ಈ ಅಮಾನುಷವಾದಂತಹ ಕೊಲೆ ಘಟನೆಯನ್ನು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ ನೀಡಿರುವ ಅವರು ಅಪರಾಧಿಯನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ, ನಿಷ್ಪಕ್ಷಪಾತವಾಗಿ ಸದರಿ ಪ್ರಕರಣದ ತನಿಖೆ ನಡೆಯುತ್ತದೆ, ಕಾನೂನಿನ ಪ್ರಕ್ರಿಯೆ ನಡೆದು ಕೊಲೆಗಡುಕನನ್ನು ಉಗ್ರವಾದ ಶಿಕ್ಷೆಗೆ ಒಳಪಡಿಸಲಾಗುತ್ತದೆ, ನೊಂದ ಕುಟುಂಬಕ್ಕೆ ನ್ಯಾಯ ಸಿಗಲು ಏನೆಲ್ಲಾ ಕ್ರಮ ಕೈಗೊಳ್ಳಬೇಕೋ ಅವನನೆಲ್ಲ ಸರಕಾರ ಕೈಗೊಳ್ಳಲಿದೆ, ಕಾಂಗ್ರೆಸ್ ಸರ್ಕಾರ ಇಂತಹ ಘಟನೆಗಳಿಗೆ ಎಂದಿಗೂ ಪುಷ್ಟಿ ಕೊಡೋದಿಲ್ಲವೆಂದು ಡಾ. ಅಜಯ್ ಸಿಂಗ್ ಹೇಳಿದ್ದಾರೆ.
ಈ ಘಟನೆ ಹಾಗೂ ನಂತರದಲ್ಲಿ ನಡೆದಿರುವ ಬೆಳವಣಿಗೆಗಳ ಕುರಿತಂತೆ ಸ್ಪಂದಿಸಿರುವ ಡಾ. ಅಜಯ್ ಸಿಂಗ್, ಯಾವುದೇ ರಾಜಕೀಯ ಪಕ್ಷಗಳು ಇಂತಹ ಘಟನೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು, ಬಿಜೆಪಿಯವರು ಇದನ್ನೇ ಮುಂದಿಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ, ಇದು ಸರಿಯಲ್ಲ.ನೋವಾಗಿರುವ ಕುಟುಂಬದವರ ಕಣ್ಣೀರು ಒರೆಸೋಣ, ಅದನ್ನು ಬಿಟ್ಟು ಘಟನೆಯ ದಿಕ್ಕು ತಪ್ಪಿಸುವುದು ಬೇಡವೆಂದು ಡಾ. ಅಜಯ್ ಸಿಂಗ್ ಹೇಳಿದ್ದಾರೆ.
ಮಾನವೀಯತೆಗೇ ಸವಾಲು ಎಂಬಂತೆ ಸಮಾಜದಲ್ಲಿ ಎದುರಾಗುವ ಇಂತಹ ಘಟನೆಗಳಿಗೆ ಧರ್ಮ ಜಾತಿ, ಪಕ್ಷಗಳ ರಾಜಕಾರಣದ ಬಣ್ಣ ಬಳೆಯದೆ, ಸದರಿ ಘಟನೆಯನ್ನು ಹೀನ ಅಪರಾಧವೆಂದೇ ಪರಿಗಣಿಸಿ ಹಂತಕನಿಗೆ ಕೊಲೆಗಡುಕನಿಗೆ ತಕ್ಷಣವೇ ಉಗ್ರವಾದ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುತ್ತದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿಯೇ ಇದೆ. ಈ ವಿಚಾರದಲ್ಲಿ ಬಿಜೆಪಿಯವರು ವಿನಾಕಾರಣ ರಾಜಕೀಯ ಬೆರೆಸೋದನ್ನ ಬಿಟ್ಟುಬಿಡಬೇಕು ಎಂದು ಡಾ. ಅಜಯ್ ಸಿಂಗ್ ಹೇಳಿದ್ದಾರೆ.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…