ಕಲಬುರಗಿ; ಕಳೆದ ಲೋಕಸಭೆ ಚುನಾವಣೆಯಲ್ಲಿ ಹಿರಿಯ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆಯವರ ಸೋಲು ಈ ಭಾಗದ ಪ್ರಗತಿಗೆ ಪೆಟ್ಟು ನೀಡಿದೆ ಎಂದಿರುವ ಕೆಕೆಆರ್ ಡಿಬಿ ಅಧ್ಯಕ್ಷ ಅಜಯ್ ಸಿಂಗ್ ಕಳೆದ ಬಾರಿಯ ತಪ್ಪು ಈ ಬಾರಿ ಮಾಡದೆ ಈ ಸಲ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು, ಅಭಿವೃದ್ಧಿಗೆ ಬೆಂಬಲಿಸಬೇಕೆಂದರು.
ಮಾರವಾಡಿ ಹಾಗೂ ಜೈನ್ ಸಮಾಜದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡುತ್ತ, ದಿವಂಗತ ಧರಂಸಿಂಗ್ ಹಾಗೂ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ 50 ವರ್ಷಗಳ ಸಾರ್ವಜನಿಕರ ಸೇವೆ ನೆನಪಿಸಿಕೊಂಡರು.
ಸಂಸದರಾಗಿ ಹೋದ ಡಾ. ಉಮೇಶ್ ಜಾಧವ ಮಲ್ಲಿಕಾರ್ಜುನ ಖರ್ಗೆ ಅವರು ಮಾಡಿದ ಕೆಲಸದಲ್ಲಿ ಶೇ. 0.1 ಕೆಲಸ ಸಹ ಮಾಡಿಲ್ಲ. ಕಳೆದ ಬಾರಿಯ ಖರ್ಗೆಯವರ ಸೋಲಿನಿಂದಾಗಿ ನಮ್ಮ ಭಾಗದ ಅಭಿವೃದ್ದಿ ಮೇಲೆ ಹೊಡೆತ ಬಿದ್ದಿದೆ ಎಂದರು. ಈ ಬಾರಿ ತಪ್ಪಿನ ಪುನರಾವರ್ತನೆ ಆಗದಂತೆ ಎಚ್ಚರದಿಂದ ಇದ್ದು ಮತಗಟ್ಟೆಗೆ ಹೋದ ನಂತರ ಕಾಂಗ್ರೆಸ್ಗೆ ಮತ ಹಾಕುವಂತೆ ಕೋರಿದರು.
ಸಭೆಯಲ್ಲಿ ಮತ ಯಾಚಿಸಿದ ರಾಧಾಕೃಷ್ಣ ದೊಡ್ಮನಿ, ತಮ್ಮನ್ನು ಕಲಬುರಗಿ ಸಂಸದರನ್ನಾಗಿ ಆಯ್ಕೆ ಮಾಡಿ ಕಳಿಸಿದರೆ ನಗರ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಯತ್ನಿಸೋದಾಗಿ ಹೇಳಿದರು.
ಸಚಿವ ಶರಣಪ್ರಕಾಶ ಪಾಟೀಲ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಈ ಸಲದ ಚುನಾವಣೆಯಲ್ಲಿ ಭಾವನಾತ್ಮಕವಾಗಿ ಯೋಚನೆ ಮಾಡದೇ ವಾಸ್ತವದ ಸಂಗತಿ ಹಾಗೂ ಅಭಿವೃದ್ದಿ ಆಧಾರದ ಮೇಲೆ ಯೋಚಿಸಿ ಮತದಾನ ಮಾಡಿರೆಂದರು.
ಮಾರವಾಡಿ ಹಾಗೂ ಜೈನ್ ಸಮಾಜಕ್ಕೆ ರಾಜಕೀಯ ಸ್ಥಾನಮಾನ ಹಾಗೂ ಪದ್ಮಾವತಿ ದೇವಾಲಯ ನಿರ್ಮಾಣ, ದಿಗಂಬರ್ ಮಂದಿರ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಜತೆಗೆ ಜೈನ್ ಭವನ್ ನಿರ್ಮಾಣ ಕುರಿತಂತೆ ಪ್ರಸ್ತಾಪ ಸರ್ಕಾರದ ಮುಂದಿದ್ದು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.
ಹರ್ಯಾಣದ ಅಂಬಾಲ ಮೂಲದ ಅಶೋಕ ಜೈನ್, ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಕಲಬುರಗಿ ಉತ್ತರ ಶಾಸಕಿ ಕನೀಜ್ ಫಾತೀಮಾ, ಜಿಡಿಎ ಅಧ್ಯಕ್ಷ ಮಜರ್ ಖಾನ್, ಮಾರವಾಡಿ ಸಮಾಜದ ಅಧ್ಯಕ್ಷ ಲಕ್ಷ್ಮೀ ರಮಣ್ ಇದ್ದರು.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…