ಸುರಪುರ: ಹುಬ್ಬಳ್ಳಿ ಬಿವಿಬಿ ಕಾಲೇಜ್ ಬಳಿ ವಿದ್ಯಾರ್ಥಿನಿ ನೇಹಾಳನ್ನು ಹತ್ಯೆ ಮಾಡಿದ ಪ್ರಕರಣದ ಆರೋಪಿಗೆ ಪೊಲೀಸರು ಎನ್ಕೌಂಟರ್ ಮಾಡುವಂತೆ ಒತ್ತಾಯಿಸಿ ಭೀಮ್ ಆರ್ಮಿ ಕರ್ನಾಟಕ ಏಕತಾ ಮಿಷನ್ ಸಂಘಟನೆಯ ತಾಲೂಕು ಘಟಕದ ಮುಖಂಡರು ಒತ್ತಾಯಿಸಿದ್ದಾರೆ.
ನಗರದಲ್ಲಿ ತಹಸಿಲ್ದಾರ್ಗೆ ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು,ಫಯಾಜ್ ಒಬ್ಬ ಜಿಹಾದಿ ಮನಸ್ಸಿನವನು ನೇಹಾಳಿಗೆ ಪ್ರೀತಿಸುವಂತೆ ಪೀಡಿಸುತ್ತಿದ್ದ ನಿರಾಕರಿಸಿದ್ದಕ್ಕೆ ಕೊಲೆ ಮಾಡಿದ್ದಾನೆ,ಇಂತಹ ಘಟನೆ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿನಿಯರಲ್ಲಿ ಭಯ ಹುಟ್ಟಿಸಿದೆ,ಆದ್ದರಿಂದ ಕೂಡಲೇ ಇಂತಹ ಘಟನೆ ಮತ್ತೆ ನಡೆಯಬಾರದು ಎಂದರೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕು ಅಥವಾ ಹೈದರಾಬಾದ್ನಲ್ಲಿ ನಡೆದಂತೆ ಫಯಾಜ್ನನ್ನು ಎನ್ಕೌಂಟರ್ ಮಾಡಿದಾಗ ಬೇರೆಯವರಿಗೆ ಎಚ್ಚರಿಕೆಯಾಗಲಿದೆ.ಅಲ್ಲದೆ ರಾಜ್ಯಾಧ್ಯಂತ ಶಾಲಾ ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರಿಗೆ ಭದ್ರತೆ ನೀಡಬೇಕು,ಪೊಲೀಸರನ್ನು ಮಫ್ತಿಯಲ್ಲಿ ನಿಯೋಜಿಸಿ ವಿದ್ಯಾರ್ಥಿನಿಯರಿಗೆ ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ನಂತರ ಗೃಹ ಸಚಿವರಿಗೆ ಬರೆದ ಮನವಿಯನ್ನು ತಹಸಿಲ್ದಾರ್ ನಾಗಮ್ಮ ಕಟ್ಟಿಮನಿ ಅವರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆ ತಾಲೂಕು ಅಧ್ಯಕ್ಷ ಶರಣಪ್ಪ ಹೊಸ್ಮನಿ,ಉಪಾಧ್ಯಕ್ಷ ಸುರೇಶ ರುಕ್ಮಾಪುರ,ಕಾರ್ಯದರ್ಶಿ ಬಲಭೀಮ ಅಚಕೇರಿ ಸೇರಿದಂತೆ ಇತರರಿದ್ದರು.
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…