ಶರಣರ ಕಲ್ಯಾಣ ರಾಜ್ಯದ ಕನಸು ನನಸಾಗಲಿ: ಎಂ. ಬೆಣ್ಣೆಶಿರೂರ 

0
74

ಆಳಂದ: ೧೨ನೇ ಶತಮಾನದಲ್ಲಿ ಬಸವಾದಿ ಶರಣರು ಸ್ಥಾಪಿಸಿದ ಅನುಭವ ಮಂಟಪದ ಮೂಲಕ ಕಲ್ಯಾಣ ರಾಜ್ಯದ ಕಂಡ ಕನಸು ನನಸಾಗಿಸಲು ಸಾಮೂಹಿಕ ಪ್ರಯತ್ನ ಅಗತ್ಯವಾಗಿದೆ ಎಂದು ತಹಸೀಲ್ದಾರ ಬಸವರಾಜ ಎಂ. ಬೆಣ್ಣೆಶಿರೂರ ಅವರು ಇಂದಿಲ್ಲಿ ಹೇಳಿದರು.

ಪಟ್ಟಣದ ತಹಸೀಲ್ದಾರ ಕಚೇರಿಯಲ್ಲಿ ಮಂಗಳವಾರ ತಾಲೂಕು ಆಡಳಿತ ಹಮ್ಮಿಕೊಂಡ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹೈ.ಕ.ಹಿಂದುಳಿದ ಪ್ರದೇಶವೆಂಬ ಹಣೆಪಟ್ಟಿ ಅಳಸಿಹಾಕಿ ಕಲ್ಯಾಣ ಕರ್ನಾಟಕ ಎಂಬ ನಾಮಕರಣ ಆಗಿರುವುದು ಈ ಭಾಗದಲ್ಲಿ ಶರಣರು ಕೈಗೊಂಡ ಸಾಂಸ್ಕೃತಿಕ ಮತ್ತು ಸಾಮಾಜಿಕ ಕ್ರಾಂತಿಗೆ ಸಂದಗೌರವ. ಅವರ ಆಶಯಗಳನ್ನು ಈಡೇರಿಸುವ ಕಾರ್ಯ ನಡೆಯಬೇಕು. ನಾವೂ ಕೂಡ ಇಂದು ಎಲ್ಲಾ ರಂಗದಲ್ಲಿ ಪ್ರಗತಿ ಪಥದತ್ತ ಸಾಗಿ ಕಲ್ಯಾಣದ ಅರ್ಥವನ್ನು ಸಾರ್ಥಕ ಪಡಿಸಲು ಛಲತೊಡಬೇಕಾಗಿದೆ ಎಂದು ಸಲಹೆ ನೀಡಿದರು.

Contact Your\'s Advertisement; 9902492681

ಉಪನ್ಯಾಸಕ ಸಂಜಯ ಪಾಟೀಲ ಕಲ್ಯಾಣ ಕರ್ನಾಟಕ ಕುರಿತು ಉಪನ್ಯಾಸ ನೀಡಿದರು. ಗ್ರೇಡ್-೨ ತಹಸೀಲ್ದಾರ ಬಿ.ಜಿ. ಕುದರಿ, ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಡಾ| ಸಂಜಯ ರೆಡ್ಡಿ, ಜಿಪಂ ಎಇಇ ಮಲ್ಲಿಕಾರ್ಜುನ ಕಾರಬಾರಿ, ಸಿಡಿಪಿಒ ಶ್ರೀಕಾಂತ ಮೇಂಗಜಿ, ಸಮಾಜ ಕಲ್ಯಾಣಾಧಿಕಾರಿ ವಿಜಯಕುಮಾರ ಫುಲಾರ ಉಪಸ್ಥಿತರಿದ್ದರು.  ಪುರಸಭೆ ಸದಸ್ಯ ಶಿವುಪುತ್ರ ನಡಗೇರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರಕಾಶ ಮಾನೆ, ಮುಖಂಡ ದಯಾನಂದ ಶೇರಿಕಾರ, ದತ್ತಪ್ಪ ಹೊನ್ನಳಿ, ಅರಣ್ಯ ಇಲಾಖೆಯ ರಾಘವೇಂದ್ರ, ಅರವಿಂದ ಜಾಪಳ, ನ್ಯಾಯವಾದಿ ಸಂಜಯ ನಾಯಕ, ವಿ.ಎ ರಮೇಶ ಮಾಳಿ ಅನೇಕರು ಭಾಗವಹಿಸಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡರಂಗಪ್ಪ ಸ್ವಾಗತಿಸಿದರು. ಶಿಕ್ಷಕ ಕಲ್ಯಾಣಪ್ಪ ಬಿಜ್ಜರಗಿ ನಿರೂಪಿಸಿದರು. ಶಿರಸ್ತೆದಾರ ರಾಕೇಶ ಶೀಲವಂತ ವಂದಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here