ಬಿಸಿ ಬಿಸಿ ಸುದ್ದಿ

ಕಲ್ಯಾಣ ಕರ್ನಾಟಕದ ನಿಜ ಸ್ವಾತಂತ್ಯ್ರವಿದು: ವಾರದ

ಕಲಬುರಗಿ: ಕಲ್ಯಾಣ ಕರ್ನಾಟಕದ ಸ್ವಾತಂತ್ಯ್ರದ ಜೊತೆಗೆ ನಿಜಾಮನ ಕಪಿಮುಷ್ಟಿಯಿಂದ ವಿಮೋಚನೆಗೊಂಡು ಭಾರತದ ಒಕ್ಕುಟಕ್ಕೆ ವಿಲಿನಗೊಂಡ ದಿನವೇ ಈ ಭಾಗದ ನಿಜಸ್ವಾತಂತ್ಯ್ರದ ದಿನ ಎಂದು ಸುರಪುರದ ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸೂಗುರೇಶ ವಾರದ ಹೇಳಿದರು.

ಸಗರನಾಡು ಸೇವಾ ಪ್ರತಿಷ್ಠಾನ ವತಿಯಿಂದ ರಂಗಂಪೇಟೆಯ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಇಂದು ಕಲ್ಯಾಣ ಕರ್ನಾಟಕ ಉತ್ಸವ ದಿನಾಚಾರಣೆ ನಿಮಿತ್ಯ ಆಯೋಜಿಸಿದ್ದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ ಹೈದರಬಾದ್ ಕರ್ನಾಟಕ ವಿಮೊಚನಾ ದಿನವನ್ನು ಸರಕಾರ ಈ ವರ್ಷದಿಂದ ಕಲ್ಯಾಣ ಕರ್ನಾಟಕ ಉತ್ಸವ ದಿನವನ್ನಾಗಿ ಆಚರಿಸುತ್ತಿರುವುದು ಹೆಮ್ಮೆ ಮತ್ತು ಅಭಿಮಾನದ ಸಂಕೇತವಾಗಿದ್ದು, ಈ ಭಾಗಕ್ಕೆ ನಿಜವಾದ ಸ್ವಾತಂತ್ಯ್ರದ ದಿನ ಇದಾಗಿದ್ದು, ಈ ವಿಮೊಚನಾ ಚಳುವಳಿಯಲ್ಲಿ ನಮ್ಮ ಭಾಗದ ಅನೇಕ ಜನ ಮಹಾನಿಯರು ದುಡಿದು ದೇಶಕ್ಕಾಗಿ ಈ ಭಾಗಕ್ಕಾಗಿ ತಮ್ಮ ಪ್ರಾಣವನ್ನೆ ಅರ್ಪಿಸಿದ್ದಾರೆ.

ರಜಾಕಾರರ ಹಾವಳಿಯಲ್ಲಿ ರಾಜನಕೊಳ್ಳುರಿನ ವಿರುಪಾಕ್ಷಾಪ್ಪ ಗೌಡರು ವಿಮೋಚನಾ ಹೋರಾಟದಲ್ಲಿ ವೀರ ಮರಣವನ್ನಪ್ಪಿದರು ಎಂದು ಹೆಳಿದರು ಜೊತೆಗೆ ಈ ಚಳುವಳಿಯ ಮುಖ್ಯ ಹೋರಾಟಗಾರರಾದ ಯಾದಗಿರಿಯ ಕೋಲುರು ಮಲ್ಲಪ್ಪ, ವಿಶ್ವನಾಥರೆಡ್ಡಿ ಮುದ್ನಾಳ, ವಿಧ್ಯಾಧರ ಗುರುಜಿ, ಅಚಾಪ್ಪಗೌಡ ಸುಬೇದರ ಸಗರ, ದುಮ್ಮದ್ರಿ ಶರಣಗೌಡ ಸೇರಿದಂತೆ ಸುರಪುರ ಸಂಸ್ಥಾನದ ಅರಸರ ಕೋಡುಗೆ ಕೋಡ ಈ ಚಳುವಳಿಗೆ ಮಹತ್ತರವಾಗಿದೆ ಎಂದು ಅಂಗಡಿ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ವಹಿಸಿ ವಿಮೋಚನ ಚಳುವಳಿ ಇತಿಹಾಸ ಕುರಿತು ಉಪನ್ಯಾಸ ನೀಡಿದರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ರೈತ ಸಂಘದ ಕಾರ್ಯಾಧ್ಯಕ್ಷ ದೇವಿಂದ್ರಪ್ಪ ಗೌಡ ಮಾಲಗತ್ತಿ, ಕರ್ನಾಟಕ ನವ ನಿರ್ಮಾಣ ವೇದಿಕೆಯ ಅಧ್ಯಕ್ಷ ಶಿವರಾಜ ಕಲಿಕೇರಿ, ಕಾಲೇಜಿನ ಪ್ರಾಂಶುಪಾಲರುಗಳಾದ ವಿರೇಶ ಹಳಿಮನಿ, ಶಾಂತು ನಾಯಕ, ಶಿವಶರಣಪ್ಪ ಹೆಡಿಗಿನಾಳ ವೇದಿಕೆಮೇಲಿದ್ದರು. ಕಾರ್ಯಕ್ರಮವನ್ನು ಬಿರೇಶ ಕುಮಾರ ದೇವತ್ಕಲ್ ನಿರೂಪಿಸಿದರು, ಬಲಭೀಮ ಪಾಟೀಲ್ ಸ್ವಾಗತಿಸಿದರು, ಶ್ರೀಮತಿ. ಭಾರತಿ ಪೂಜಾರಿ ಪ್ರಾರ್ಥಿಸಿದರು, ರುದ್ರಪ್ಪ ಕೆಂಭಾವಿ ವಂದಿಸಿದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

1 hour ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

1 hour ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

1 hour ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

2 hours ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

3 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

6 hours ago