ಕಲಬುರಗಿ: ಕಲ್ಯಾಣ ಕರ್ನಾಟಕದ ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಹೊಸಳ್ಳಿ (ಎಚ್) ಗ್ರಾಮದ ಶ್ರೀ ನಂದಿ ಬಸವೇಶ್ವರ 74ನೇ ಜಾತ್ರಾ ಮಹೋತ್ಸವವನ್ನು ಮೇ 4ರ ಶನಿವಾರದಂದು ಆಯೋಜಿಸಲಾಗಿದೆ ಎಂದು ಗ್ರಾಮದ ಶ್ರೀ ನಂದಿಬಸವೇಶ್ವರ ಸೇವಾ ಸಮಿತಿ ಹಾಗೂ ಸಕಲ ಸದ್ಭಕ್ತಮಂಡಳಿ ವತಿಯಿಂದ ಹೊರಡಿಸಿದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೊಸಳ್ಳಿ (ಎಚ್) ಗ್ರಾಮದ ಸಂಸ್ಥಾನ ಹೀರೆಮಠದ ಶ್ರೀ ಷ. ಬ್ರ. ಸಿದ್ದಲಿಂಗ ಶಿವಾಚಾರ್ಯರ ನೇತೃತ್ವದಲ್ಲಿ ದಿನಾಂಕ 29 ರಿಂದ 2ರ ವರೆಗೆ ಪ್ರತಿದಿನ ರಾತ್ರಿ 08 ರಿಂದ 11.30ರ ವರೆಗೆ ಪಲ್ಲಕ್ಕಿ ಮಹೋತ್ಸವ ಜರುಗುವುದು.
3 ರಂದು ಸಾಯಂಕಾಲ 5 ಗಂಟೆಗೆ ಅಗ್ನಿ ಕುಂಡಕ್ಕೆ ನೀರು ಎರೆಯಲಾಗುವುದು. 4 ರಂದು ಬೆಳಿಗ್ಗೆ 03 ಗಂಟೆಯಿಂದ 6 ಗಂಟೆಯವರೆಗೆ ಪಲ್ಲಕ್ಕಿ ಮಹೋತ್ಸವ ಮತ್ತು ಪುರವಂತರಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ತದನಂತರ ಅಗ್ನಿ ಪ್ರವೇಶ ಮಾಡಲಾಗುವುದು.
ಅದೇ ದಿನ ಸಾಯಂಕಾಲ 6ಗಂಟೆಗೆ ಕುಂಭ, ನಂದಿಕೋಲು, ಭಜನೆ ಹಾಗೂ ಮೆರವಣಿಗೆಯೊಂದಿಗೆ ನಂದಿಬಸವೇಶ್ವರರ 74ನೇ ಜಾತ್ರಾಮಹೋತ್ಸವದ ರಥೋತ್ಸವವನ್ನು ವಿಜೃಂಭಣೆಯಿಂದ ಜರುಗುವುದು. 5 ರಂದು ಬೆಳಿಗ್ಗೆ 08ಗಂಟೆಯಿಂದ ಜಂಗಿ ಪೈಲ್ವಾನರ ಕುಸ್ತಿ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯಲ್ಲಿ ಶಿಕ್ಷಕರ ದಿನಾಚರಣೆಯ ನಿಮಿತ್ತವಾಗಿ ಬುಧವಾರ ಗೆಳೆಯರ ಬಳಗದ ವತಿಯಿಂದ…
ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ( ಸಮಾಜ ಕಲ್ಯಾಣ ಇಲಾಖೆ…
ಶಹಾಬಾದ :ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮ ಹಮ್ಮಿಕೊಳ್ಳುವ ಕುರಿತು ತಾಲೂಕಿನ ಪ್ರೌಢಶಾಲಾ ಮುಖ್ಯ…
ಕಲಬುರಗಿ: ಹೈದ್ರಾಬಾದ್ ಕರ್ನಾಟಕದಲ್ಲಿ ಸೆಪ್ಟೆಂಬರ್ 17 ರಂದು ಆಚರಿಸಲಾಗುತ್ತಿರುವ ವಿಮೋಚನಾ ದಿನವಲ್ಲ, ಅದು ವಿಲೀನಿಕರಣದ ಅಥವಾ ಪ್ರಜಾಸತ್ತಾತ್ಮಕ ದಿನವಾಗಿದ್ದು, ವಿಮೋಚನಾ…
ಕಲಬುರಗಿ; ಕಲಬುರಗಿಯಲ್ಲಿ ಇದೇ ಸೆ.17 ರಂದು ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದ್ದರಿಂದ ಸಭೆ ಯಶಸ್ಸಿಗೆ ರಚಿಸಲಾಗಿರುವ ವಿವಿಧ ಸಮಿತಿಗಳ…
ಕಲಬುರಗಿ: ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸಮುದಾಯದ ಫಲಾನುಭವಿಗಳಿಗೆ ವಿತರಿಸಬೇಕಾಗಿರುವ ಸಾಮಗ್ರಿಗಳಾದ ಕ್ರಿಕೆಟ್ ಸೈಟ್ ಗಳಾದ, ಬ್ಯಾಂಡ್ ಸೆಟ್ಗಳು ಮತ್ತು…