ಬಿಸಿ ಬಿಸಿ ಸುದ್ದಿ

ಜೇವರ್ಗಿ ಪಂಚಾಯ್ತಿ ಹಂತದಲ್ಲಿ ಸರಣಿ ಸಭೆ ನಡೆಸಿ ಡಾ. ಅಜಯ್ ಸಿಂಗ್‌

ಕಲಬುರಗಿ; ಜೇವರ್ಗಿ ತಾಲ್ಲೂಕಿನಲ್ಲಿ ಬರುವ ರಂಜಣಗಿ, ಹುಲ್ಲೂರ್‌, ಇಟಗಾ, ಅಂಕಲಗಾ ಸೇರಿದಂತೆ ಅನೇಕ ಪಂಚಾಯ್ತಿಗಳಲ್ಲಿ ಸರಣಿ ಸಬೆಗಳನ್ನು ನಡೆಸಿದ ಶಾಸಕ, ಕೆಕೆಆರ್‌ಡಿಬಿ ಅಧ್ಯಕ್ಷರಾದ ಡಾ. ಅಜಯ್‌ ಸಿಂಗ್‌ ಕಾಂಗ್ರೆಸ್‌ ಪರ ಮತ ಯಾಚಿಸಿದರು.

ರಂಜಣಗಿ ಪಂಚಾಯ್ತಿ ವ್ಯಾಪ್ತಿಯ ದೇಸಣಗಿ, ಬದನಿಹಾಳ, ಹುಲ್ಲೂರ ಗ್ರಾಪಂ ವ್ಯಾಪ್ತಿಯ ಹುಲ್ಲೂರ, ಹರನಾಳ ಕೆ ,ನಾರಾಯಣಪುರ, ಅಂಕಲಗಾ ಗ್ರಾಮ ಪಂಚಾಯ್ತಿ ಹಂತದಲ್ಲಿರುವ ಹಂಚಿನಾಳ ಎಸ್ಎನ್, ಮೂಗನ ಇಟಗಾ ಪಂಚಾಯ್ತಿ ಅಡಿಯಲ್ಲಿರುವ ಗ್ರಾಮಗಳ ಮುಖಂಡರು, ಕಾರ್ಯಕರ್ತರ ಸಬೆ ನಡೆಸಿ ಕಾಂಗ್ರೆಸ್‌ನ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಪರವಾಗಿ ಮತ ಯಾಚಿಸಿದರು.

ಈ ಪಂಚಾಯ್ತಿ ಹಂತದಲ್ಲಿ ನಡೆದ ಸಭೆಗಳಲ್ಲೇ ಅನೇಕ ಮುಖಂಡರು ಬಿಜೆಪಿ, ಜೆಡಿಎಸ್, ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶರಣಬಸಪ್ಪ ಜೋಗುರ್,ವಿಜಯ್ ಕೇದಾರಲಿಂಗಯ್ಯ, ಖಾಜಾ ಪಟೇಲ್ ರಂಜಣಗಿ, ಪಂಡಿತ್ ಪವಾರ್ ರಂಜಣಗಿ, ದತ್ತಪ್ಪ ರಂಜಣಗಿ, ನಬಿ ಸಾಬ್ ದೇಸಣಗಿ, ಭೀಮಾಶಂಕರ್ ವಿಭೂತಿ, ಬೈಲಪ್ಪ ನೆಲೊಗಿ,ಅಪ್ಪಸಾಬ ಹೊಸಮನಿ , ಸಂಗಣ್ಣ ಇಟಗಾ ,ಶರಣಬಸಪ್ಪ ಜೋಗುರ್, ಶಿವ ಸಾಹು ಬಾಸಗಿ , ಚಂದ್ರಶೇಖರ್ ಮಲ್ಲಾಬಾದ್, ಶಿವ ಸಾಹು ಬಾಸಗಿ , ಚಂದ್ರಶೇಖರ್ ಮಲ್ಲಾಬಾದ್ ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.

emedialine

Recent Posts

ಶರಣ ಮಾರ್ಗಕ್ಕೆ ನಿಮ್ಮೆಲ್ಲರ ಸಹಾಯ ಸಹಕಾರ ಅಗತ್ಯ: 10ನೇ ವರ್ಷದ ಹೊಸ್ತಿಲಲ್ಲಿ ನಿಂತು ನಿಮ್ಮೊಂದಿಗಿಷ್ಟು

ಈ ಜೂನ್ - ಜುಲೈ ತಿಂಗಳು ಬಂದಿತೆಂದರೆ ಸಾಕು ನಮ್ಮ ಇಡೀ ಕುಟುಂಬದ ಬಂಧು ಬಾಂಧವರಿಗೆ ಒಂದೆಡೆ ದುಃಖ, ತಳವಳ,…

33 mins ago

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

14 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

14 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

16 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

16 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

16 hours ago