ಬಿಸಿ ಬಿಸಿ ಸುದ್ದಿ

ಮುಂಗಾರು ಹಂಗಾಮಿನ ಕೃಷಿಗಾಗಿ ಪೂರ್ವಸಿದ್ದತೆಗಳು

ಕಲಬುರಗಿ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಮಳೆಗಳು ವಾಡಿಕೆಯಂತೆ ಆಗುತ್ತವೆ ಎಂಬುವುದು ಹವಾಮಾನ ತಜ್ಞರ ಅಭಿಪ್ರಾಯ.

ಆದ್ದರಿಂದ ರೈತರು ಸ್ಥಳೀಯ ಪರಿಸ್ಥಿತಿಗಳನ್ನು ಅವಲೋಕಿಸಿ ಮುಂಗಾರು ಬೆಳೆಗಳ ಯೋಜನೆಯನ್ನು ಹಮ್ಮಿಕೊಳ್ಳುವುದು ಸೂಕ್ತ. ಈಗಾಗಲೇ ಅನೇಕ ಕಡೆ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ರೈತರು ತಮ್ಮ ಜಮೀನುಗಳಲ್ಲಿ ಕುಂಟೆ-ರಂಟೆಗಳನ್ನು ಹೊಡೆದು ಮಣ್ಣು ಮತ್ತು ನೀರು ಸಂರಕ್ಷಣೆಗಾಗಿ ಚೌಕ ಮಡಿಗಳನ್ನು ಮತ್ತು ದಿಂಡು ಸಾಲುಗಳನ್ನು ಇಳಿಜಾರಿಗೆ ಅಡ್ಡಲಾಗಿ ನಿರ್ಮಿಸುವುದರಿಂದ, ಬಂದ ಮಳೆ ನೀರು ಮಡಿಗಳಲ್ಲಿ ಮತ್ತು ಬೋದುಗಳಲ್ಲಿ ನಿಲ್ಲುವುದರಿಂದ ಮಣ್ಣಿನ ತೇವಾಂಶ ಹೆಚ್ಚು ಸಂಗ್ರಹವಾಗಿ ಮುಂದೆ ಮುಂಗಾರಿನಲ್ಲಿ ಬೆಳೆಯುವ ಬೆಳೆಗಳಿಗೆ ಸಹಕಾರಿಯಾಗುತ್ತದೆ. ಬೆಳೆ ಪರಿವರ್ತನೆ, ಸಾವಯವ ಗೊಬ್ಬರ ಬಳಕೆ, ಸ್ವಚ್ಛ ಸಾಗುವಳಿ ಮತ್ತು ಮಾಗಿ ಉಳುಮೆಯನ್ನು ನೇಗಿಲು ಅಥವಾ ಟ್ರ್ಯಾಕ್ಟರ್ ಸಹಾಯದಿಂದ ಇಳಿಜಾರಿಗೆ ಅಡ್ಡಲಾಗಿ ಉಳುಮೆ ಮಾಡುವುದರಿಂದ ಮಣ್ಣಿನ ಸವಕಳಿ ತಡೆಗಟ್ಟಿ ಸಂರಕ್ಷಿಸಬಹುದು. ಮಣ್ಣು ಮತ್ತು ನೀರು ಪರೀಕ್ಷೆ ಮಾಡಿಸುವ ಮೂಲಕ ಜಮೀನಿನ ಪೋಷಕಾಂಶಗಳ ಮಟ್ಟವನ್ನು ತಿಳಿಯಬಹುದು.

ಸಮಸ್ಯಾತ್ಮಾಕ ಮಣ್ಣುಗಳನ್ನು ಸುಧಾರಿಸಲು ಬಸಿಗಾಲುವೆಗಳನ್ನು ನಿರ್ಮಿಸಿ ಮಣ್ಣಿನ ಗುಣಮಟ್ಟವನ್ನು ಕಾಪಾಡಬಹುದು. ಸತತವಾಗಿ ಕೃಷಿ ವ್ಯವಸ್ಥೆಯಲ್ಲಿ ಉತ್ಪಾದಿಸಲಾಗುತ್ತಿರುವ ಸಸ್ಯಾವಶೇಷಗಳನ್ನು ಭೂಮಿಗೆ ಮರುಕಳಿಸುವುದರಿಂದ ಅಥವಾ ಹೊದಿಕೆ ಮಾಡುವುದರಿಂದ ಮಣ್ಣಿನ ತೇವಾಂಶ ಫಲವತ್ತತೆ ಹಾಗೂ ಉತ್ಪಾದಕತೆಯನ್ನು ಕಾಪಾಡಿಕೊಂಡು ಬರುವುದು. ಮಣ್ಣು ಪರೀಕ್ಷೆ ವರದಿ ಆಧಾರದ ಮೇಲೆ ರೈತರು ಬೆಳೆಗಳಿಗೆ ಸಮತೋಲನ ರಸಗೊಬ್ಬರಗಳನ್ನು ಬಳಸುವುದರಿಂದ ಭೂಮಿಯ ಫಲವತ್ತತೆ ಹಾಗೂ ಉತ್ಪಾದಕತೆಯನ್ನು ಅಂದರೆ ಮಣ್ಣಿನ ಆರೋಗ್ಯವನ್ನು ನಿರಂತರವಾಗಿ ಕಾಪಾಡಿಕೊಂಡು ಹೋಗಲು ಸಾಧ್ಯವಾಗುತ್ತದೆ.

ಮಳೆ ನೀರು ಕೊಯ್ಲು ಮಾಡುವುದು, ಜಮೀನನ್ನು ಸಮತಲಗೊಳಿಸಿ ಹದಗೊಳಿಸುವುದು, ಕೃಷಿಗೆ ಬೇಕಾದ ಸಾಮಗ್ರಿಗಳನ್ನು ಮುಂಚಿತವಾಗಿ ಸಂಗ್ರಹಿಸುವುದು, ಯಂತ್ರೋಪಕರಣಗಳನ್ನು ಬಳಸಲು ಸಿದ್ದತೆ ಮಾಡಿಕೊಳ್ಳುವುದು, ಜಾನುವಾರುಗಳ ಪಾಲನೆ ಮಾಡಲು ಸಿದ್ದತೆ ಕೈಗೊಳ್ಳುವುದು ಬಿತ್ತನೆ ಮತ್ತು ಮೇವಿನ ಬೀಜಗಳ ಲಭ್ಯತೆ, ಕಳೆ, ರೋಗ, ಕೀಟ ಮತ್ತು ನೀರಿನ ನಿರ್ವಹಣೆಗಾಗಿ ಮುಂಜಾಗ್ರತಾ ಕ್ರಮಗಳನ್ನು ವಹಿಸುವುದು.

ಕೃಷಿ ವಿಶ್ವವಿದ್ಯಾಲಯಗಳಿಂದ ಲಭ್ಯವಿರುವ ವಿವಿಧ ಬೆಳೆಗಳ ತಂತ್ರಜ್ಞಾನಗಳನ್ನು ವಿಜ್ಞಾನಿಗಳೊಂದಿಗೆ ಚರ್ಚಿಸಿ ಸೂಕ್ತವಾದ ಮಾಹಿತಿಗಳನ್ನು ಸಮರ್ಪಕವಾಗಿ ಬಳಸಿಕೊಂಡು ವೈಜ್ಞಾನಿಕವಾಗಿ ಮತ್ತು ವ್ಯವಸ್ಥಿತವಾಗಿ ಬೇಸಾಯ ಕ್ರಮಗಳನ್ನು ಕೈಗೊಳ್ಳುವುದರಿಂದ ಕಡಿಮೆ ಖರ್ಚು ಮತ್ತು ಹೆಚ್ಚಿನ ಹಾನಿಯಾಗದಂತೆ ಉತ್ತಮ ವ್ಯವಸಾಯ ಕೈಗೊಳ್ಳಬಹುದು.

ಸಾವಯವ ಕೃಷಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಸಾವಯವ ಗೊಬ್ಬರ ತಯಾರಿಸಿಕೊಳ್ಳುವುದು ಒಂದು ಸವಾಲಿನ ಕೆಲಸ. ಸಾಮಾನ್ಯವಾಗಿ ಸಾವಯವ ವಸ್ತುಗಳು ಸ್ವಾಭಾವಿಕವಾಗಿ ಕಳಿತು ಗೊಬ್ಬರವಾಗಲು ಬಹಳ 100 ರಿಂದ 120 ದಿನಗಳು ಬೇಕು. ಆದರೆ ವೇಸ್ಟ್ ಡಿಕಂಪೋಸರ್ ಬಳಸುವುದರಿಂದ ಕಡಿಮೆ ಅವಧಿಯಲ್ಲಿ ಗೊಬ್ಬರ ತಯಾರಿಸಬಹುದು. ಇದರಿಂದ ಮಣ್ಣಿನಲ್ಲಿ ಸೂಕ್ಷ್ಮಾಣುಜೀವಿಗಳ ಪ್ರಮಾಣ ವೃದ್ಧಿಯಾಗಿ ಮಣ್ಣು ಫಲವತ್ತಾಗುತ್ತದೆ ಜೊತೆಗೆ ಇಳುವರಿ ಹೆಚ್ಚಾಗುತ್ತದೆ.

ಭೂಮಿಯನ್ನು ಚೆನ್ನಾಗಿ ಹದ ಮಾಡಿದ ನಂತರ ಬಿತ್ತನೆಗೆ 10-15 ದಿವಸಗಳ ಪೂರ್ವದಲ್ಲಿ ಕಾಂಪೋಸ್ಟ್ ಅಥವಾ ಕೊಟ್ಟಿಗೆ ಗೊಬ್ಬರ ಮತ್ತು ಹಸಿರೆಲೆ ಗೊಬ್ಬರಗಳನ್ನು ಭೂಮಿಗೆ ಸೇರಿಸಬೇಕು. ಎರಹುಳು ಗೊಬ್ಬರವನ್ನು ಉಪಯೋಗಿಸುವುದಿದ್ದಲ್ಲಿ ಬಿತ್ತನೆಯ ಸಮಯದಲ್ಲಿ ಸಾಲುಗಳಲ್ಲಿ ಹಾಕಿ ವಿವಿಧ ಪ್ರಮಾಣದಲ್ಲಿ ಸಾವಯವ ಗೊಬ್ಬರಗಳನ್ನು ಬಳಸುವುದರಿಂದ ಪೋಷಕಾಂಶಗಳ ಉಪಯೋಗದ ದಕ್ಷತೆಯು ಹೆಚ್ಚಾಗಿ ಬೆಳೆಯು ಸಮೃದ್ಧಿಯಾಗಿ ಬೆಳೆಯಲು ಅನುಕೂಲವಾಗುವುದರ ಜೊತೆಗೆ ಮಣ್ಣಿನ ಆರೋಗ್ಯವನ್ನೂ ಸಹ ಕಾಪಾಡಿಕೊಳ್ಳಬಹುದು.

ಡಾ. ಶ್ರೀನಿವಾಸ, ಬಿ. ವಿ, ಡಾ. ರಾಜು ಜಿ. ತೆಗ್ಗೆಳ್ಳಿ, ಡಾ. ಯುಸುಫ್‍ಅಲಿ ನಿಂಬರಗಿ ಮತ್ತು ಡಾ. ಜಹೀರ್ ಅಹೆಮದ್, ವಿಜ್ಞಾನಿಗಳು, ಐಸಿಎಆರ್-ಕೃಷಿ ವಿಜ್ಞಾನ ಕೇಂದ್ರ, ಕಲಬುರಗಿ

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

4 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

4 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

6 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

6 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

6 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

7 hours ago