ಅಭಿವೃದ್ದಿ ವಿಚಾರದಲ್ಲಿ ಜನರು ಕೇಳುವ ಪ್ರಶ್ನೆಗಳಿಗೆ ಜಾಧವ್ ಉತ್ತರಿಸಲಿ: ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹ

0
6

ಕಲಬುರಗಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ಮಾತನಾಡಿ, ಹಲವಾರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ವಿರುದ್ದ ಅವರದೇ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಗೋ ಬ್ಯಾಕ್ ಅಭಿಯಾನ ನಡೆಸಿದ್ದಾರೆ. ಹತ್ತು ವರ್ಷ ಮೋದಿ ಆಡಳಿತ ಹಾಗೂ ಐದು ವರ್ಷದ ಅವರ ಅವಧಿಯ ಅಭಿವೃದ್ದಿ ಲೆಕ್ಕ ಕೇಳಿದ್ದಾರೆ. ಮೊದಲು ಜಾಧವ್ ಜನರ ಪ್ರಶ್ನೆಗಳಿಗೆ ಉತ್ತರ ನೀಡಲಿ ಎಂದು ಆಗ್ರಹಿಸಿದರು.

ಜಿಲ್ಲೆಯಲ್ಲಿ ಗೃಹಜ್ಯೋತಿ ಯೋಜನೆಯಡಿಯಲ್ಲಿ- 5.28 ಲಕ್ಷ ಫಲಾನುಭವಿಗಳು, ಅನ್ನಭಾಗ್ಯ ಯೋಜನೆಯಡಿಯಲ್ಲಿ- 19.12 ಫಲಾನುಭವಿಗಳು ಲಾಭ ಪಡೆಯುತ್ತಿದ್ದಾರೆ, ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ 5.22 ಲಕ್ಷ ಕುಟುಂಬಗಳಿಗೆ ಆರ್ಥಿಕ‌ ನೆರವು ಸಿಗುತ್ತಿದೆ. ಯುವ ನಿಧಿ ಯೋಜನೆಯಡಿಯಲ್ಲಿ 20 ಸಾವಿರ ಯುವಕರಿಗೆ ಲಾಭ ಸಿಗುತ್ತಿದೆ. ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಲಕ್ಷಪ್ರತಿನಿತ್ಯ 65 ಲಕ್ಷ ಮಹಿಳೆಯರ ಉಚಿತ ಪ್ರಯಾಣ ಮಾಡುತ್ತಿದ್ದಾರೆ.

Contact Your\'s Advertisement; 9902492681

ಈ ಎಲ್ಲ ಯೋಜನೆಗಳಿಗೆ ವಾರ್ಷಿಕ 52, 000 ಕೋಟಿ ಬೇಕಾಗುತ್ತದೆ. ಈ ಯೋಜನೆಗಳನ್ನು ಬಿಜೆಪಿಗರು ಟೀಕಿಸಿ, ಮಹಿಳೆಯರು ದಾರಿ ತಪ್ಪುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಯಾಕೆ ಹೀಗೆ ಹೇಳುತ್ತಾರೆ ಎಂದು ಅವರನ್ನು ನೀವು ಪ್ರಶ್ನಿಸಿ. ಶಕ್ತಿ ಯೋಜನೆ ಲಾಭ ಪಡೆದ ಯುವತಿಯೊಬ್ಬಳು ಬಸ್ ಟಿಕೇಟ್ ಹಾರ ಹಾಕಿ ಕೃತಜ್ಞತೆ ಸಲ್ಲಿಸಿದ್ದಾರೆ ಎಂದರು.

ಈ ಹಿಂದಿನ ಎಲ್ಲ ಮೋದಿ ಗ್ಯಾರಂಟಿಗಳೆಲ್ಲ ಏನಾದವು? ಮೇಕ್ ಇನ್ ಇಂಡಿಯಾ, ವರ್ಷಕ್ಕೆ 2 ಕೋಟಿ ಉದ್ಯೋಗ ಸೇರಿದಂತೆ ಎಲ್ಲ ಘೋಷಿತ ಯೋಜನೆಗಳು ಜಾರಿಯಾಗಲಿಲ್ಲ. ಕಲಬುರಗಿ ಗೆ ಮಂಜೂರಾಗಿದ್ದ ರೇಲ್ವೆ ವಲಯ, ಜವಳಿ ಪಾರ್ಕ್, ನಿಮ್ಝ ನಂತಹ ಯೋಜನೆಗಳು ವಾಪಸ್ ಹೋಗಿವೆ. ಇದಕ್ಕೆ ಉತ್ತರ ಕೊಡಿ ಜಾಧವ್ ಎಂದು ಅಬ್ಬರಿಸಿದರು.

ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕದಲ್ಲಿ ನಿಜವಾದ ಕಲ್ಯಾಣ ಮಾಡುತ್ತೇವೆ ಎಂದು ಭರವಸೆ ನೀಡಿದ ಖರ್ಗೆ, ನೀವೆಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿದರು.

ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್ ಮಾತನಾಡಿ ಈ ಚುನಾವಣೆ ನ್ಯಾಯ ಅನ್ಯಾಯ, ಸತ್ಯ ಅಸತ್ಯದ ನಡುವೆ ನಡೆಯುವ ಚುನಾವಣೆಯಾಗಿದೆ‌. ಸಿಎಂ ಕಾಂಗ್ರೆಸ್ ಪಕ್ಷವನ್ನು ನಂಬಿ ಆಶೀರ್ವಾದ ಮಾಡಿದ್ದಾರೆ ಇದಕ್ಕೆ ಕಾರಣ‌ಈ ಹಿಂದೆ ನೀಡಿದ 161 ಭರವಸೆಗಳಲ್ಲಿ 159 ಭರವಸೆ ಈಡೇರಿಸಿದ್ದೇವೆ. ಈ ಸಲ ಅಧಿಕಾರಕ್ಕೆ ಬಂದಾಗ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ತಲುಪಿಸಿದ್ದೇವೆ. ಕಾಂಗ್ರೆಸ್ ಪಕ್ಷ ಯುವಕರಿಗೆ,ರೈತರಿಗೆ,‌ಮಹಿಳೆಯರಿಗೆ ಅನುಕೂಲವಾಗುವಂತೆ ಯೋಜನೆಗಳ ಭರವಸೆ ನೀಡಿದ್ದೇವೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ. ಹಾಗಾಗಿ ನೀವೆಲ್ಲ ಕಾಂಗ್ರೆಸ್ ಅಭ್ಯರ್ಥಿಗೆ ಗೆಲ್ಲಿಸಿ ಎಂದು ಮನವಿ ಮಾಡಿದರು.

ಶಾಸಕರಾದ ಅಲ್ಲಮಪ್ರಭು ಪಾಟೀಲ್ ಮಾತನಾಡಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಜನಪರವಾಗಿ ಕೆಲಸ ಮಾಡಲಿದೆ ಎಂದರು.

ಎಮ್ ಎಲ್ ಸಿ ತಿಪ್ಪಣ್ಣಪ್ಪ ಕಮನೂರು ಮಾತನಾಡಿ ಸಿಎಂ ಇಂದು ಕಲಬುರಗಿ ಗೆ ಬಂದಿದ್ದಾರೆ. ಅವರು ಎರಡನೆಯ ಬಸವಣ್ಣ ನವರಿದ್ದಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದಾರೆ, ರಾಧಾಕೃಷ್ಣ ಅವರು 1.50 ಲಕ್ಷ ಮತಗಳಿಂದ ಗೆಲ್ಲಿಸಿ ಎಂದು ನಿಮಗೆ ಮನವಿ ಮಾಡಲು ಬಂದಿದ್ದಾರೆ.

ವೇದಿಕೆಯ ಮೇಲೆ ಸಚಿವರಾದ ಪ್ರಿಯಾಂಕ್ ಖರ್ಗೆ, ಶರಣಪ್ರಕಾಶ ಪಾಟೀಲ, ರಹೀಂ ಖಾನ್, ಕೆಕೆಆರ್ ಡಿ ಬಿ ಅಧ್ಯಕ್ಷ ಅಜಯ್ ಸಿಂಗ್, ಶಾಸಕರಾದ ಕನೀಜ್, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಫಾತಿಮಾ, ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಖಾಜಾ‌ ಬಂದನವಾಜ್ ದರ್ಗಾದ ಪೀಠಾಧಿಪತಿ ಡಾ ಮುಸ್ತಫಾ ಅಲ್ ಹುಸೇನ್ ಖುಸ್ರೋ, ಮಜರ್ ಖಾನ್, ದೇವೆಂದ್ರಪ್ಪ ಮರತೂರು, ದೇವೆಂದ್ರಪ್ಪ ಮರತೂರು, ಭಾಗನಗೌಡ ಸಂಕನೂರು, ಶರಣು ಮೋದಿ, ಚಂದ್ರಿಕಾ ಪರಮೇಶ್ವರ, ಡಾ ಕಿರಣ್ ದೇಶಮುಖ್, ನೀಲಕಂಠರಾವ್ ಮೂಲಗೆ, ಡಿ.ಜಿ.ಸಾಗರ್, ಫಾರೂಖ್, ಪ್ರವೀಣ ಹರವಾಳ ಸೇರಿದಂತೆ ಮತ್ತಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here