ಬಿಜೆಪಿ ಪಕ್ಷಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ; ಸಚಿವ ಪ್ರಿಯಾಂಕ್ ಖರ್ಗೆ ಕಿಡಿ

0
23

ಚಿತ್ತಾಪುರ; ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿವೆ. ಜನಸಾಮಾನ್ಯರು ಕಷ್ಟದಲ್ಲಿದ್ದಾರೆ. ಅವರಿಗೆ ಹಣಕಾಸಿನ ಸಹಾಯವಾಗಲಿ ಎಂದು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ನೆರವಿಗೆ ಧಾವಿಸಿದ್ದರೇ, ಬಿಜೆಪಿ ಅದನ್ನು ವಿರೋಧಿಸುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅಪಾದಿಸಿದರು‌.

ಸನ್ನತಿ ಗ್ರಾಮದಲ್ಲಿ ನಡೆದ‌ ಚುನಾವಣೆ ಪ್ರಚಾರ ಸಭೆಯಲ್ಲಿ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಬಿಜೆಪಿ ಪಕ್ಷಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ. ಸರ್ಕಾರದಲ್ಲಿದ್ದಾಗ ಜನರ ತೆರಿಗೆ ದುಡ್ಡನ್ನು ತಮ್ಮ ಜೇಬಿಗಿಳಿಸಿಕೊಂಡಿದ್ದರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಮೂಲಕ ಜನರ ತೆರಿಗೆ ದುಡ್ಡನ್ನು ಜನರಿಗೆ ವಾಪಸ್ ನೀಡಿದ್ದರೆ ಸಹಿಸಿಕೊಳ್ಳದೆ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ನಡೆಸುವುದು ಅಲ್ಲದೇ ಚುನಾವಣೆ ಆಯೋಗಕ್ಕೆ ದೂರು ನೀಡಿದ್ದಾರೆ. ನಿಮ್ಮ ಸಂಕಷ್ಟಗಳಿಗೆ ಮಿಡಿಯದ ನಿಮ್ಮನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡುವ ಬಿಜೆಪಿಗೆ ನೀವು ಹಾಕಬಾರದು ಬದಲಿಗೆ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರಿಗೆ ಮತನೀಡಿ ಎಂದು ಮನವಿ ಮಾಡಿದರು.

ಮಾಜಿ ಜಿಪಂ ವಿರೋಧ ಪಕ್ಷದ ನಾಯಕರಾದ ಶಿವಾನಂದ ಪಾಟೀಲ ಮಾತನಾಡಿ ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗದ ಜನರಿಗೆ ತಲುಪಿಸಲಾಗಿದೆ. ನಮ್ಮ ಸರ್ಕಾರದ ಸಾಧನೆಗಳ ಮೇಲೆ ಮತಯಾಚನೆ ಮಾಡುತ್ತಿದ್ದೇವೆ. ನೀವು ನಮಗೆ ಶಕ್ತಿ ತುಂಬಿ ನಿಮ್ಮ ಸೇವೆ ಮಾಡಲು ಅವಕಾಶ ನೀಡಬೇಕು ಎಂದರು.

ವೇದಿಕೆಯ ಮೇಲೆ ಮಹೇಮೂದ್ ಸೇಠ್, ವೀರನಗೌಡ ಪರಸರೆಡ್ಡಿ, ಮಲ್ಲಿನಾಥ ಪಾಟೀಲ ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here