ಕಾಂಗ್ರೆಸ್ ಗ್ಯಾರಂಟಿಗಳು ಗಮನದಲ್ಲಿಟ್ಟುಕೊಂಡು ಮತದಾನ ಮಾಡಿ: ಪ್ರಿಯಾಂಕ್ ಖರ್ಗೆ

0
3

ಕಲಬುರಗಿ: ಐದು ವರ್ಷದ ಅವಧಿಯಲ್ಲಿ ಸಂಸದ ಉಮೇಶ ಜಾಧವ ಅಭಿವೃದ್ದಿ ಮಾಡುವುದು ಒಂದು ಕಡೆ ಇರಲಿ ಒಂದು ಬುಟ್ಟಿ ಮಣ್ಣು ಕೂಡಾ ಹಾಕಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದರು.

ಚಿತ್ತಾಪುರ ಲಾಡ್ಲಾಪುರ ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ‌ ಅವರ ಪರ ಪ್ರಚಾರ ನಡೆಸಿ ಅವರು ಮಾತನಾಡುತ್ತಿದ್ದರು.

Contact Your\'s Advertisement; 9902492681

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ನೀವು ಕಾಂಗ್ರೆಸ್ ಗೆ ಮತ ನೀಡಿ ಎಂದು ಒತ್ತಿ ಹೇಳಿದ ಖರ್ಗೆ, ಎಲ್ಲಾ ಗ್ಯಾರಂಟಿಗಳನ್ನು ಬಂದ್ ಮಾಡುವಂತೆ ಬಿಜೆಪಿಯವರು ತಕರಾರು ತೆಗೆದಿದ್ದಾರೆ. ಅವರ ಪ್ರಕಾರ ಗ್ಯಾರಂಟಿ ಬಂದ್ ಮಾಡಿದರೆ, ಬಡವರಿಗೆ ತೊಂದರೆಯಾಗುತ್ತದೆ. ಅವರ ಮಾತು ಕೇಳಿ ನಾವು ಬಂದ್ ಮಾಡುವುದಿಲ್ಲ ಎಂದರು.

ಗ್ಯಾರಂಟಿಗಳಿಂದ ಬರುವ ಹಣ ಸದ್ಭಳಕೆಯಾಗುತ್ತಿದೆ. ಶಾಲಾ ಮಕ್ಕಳ ಫೀಸು, ಮನೆ ಸಂಸಾರಕ್ಕೆ ಬಳಕೆಯಾಗುತ್ತಿದೆ. ಇದರಿಂದಾಗಿ ಬಹಳಷ್ಟು ಕುಟುಂಬಗಳು ಸ್ವಾವಲಂಬಿಗಳಾಗಿ ಜೀವನ‌ ನಡೆಸುತ್ತಿದ್ದಾರೆ. ಇದು ನಮ್ಮ ಸರ್ಕಾರದ ಬದ್ದತೆಯಾಗಿದೆ. ಇದನ್ನು ಬಿಜೆಪಿಯವರು ಟೀಕಿಸುತ್ತಾರೆ. ಅವರ ಮಾತಿಗೆ ಬೆಲೆ ಕೊಡದೆ ಕಾಂಗ್ರೆಸ್ ಗೆ ಬೆಂಬಲಿಸಿ ಎಂದು ಖರ್ಗೆ ಮನವಿ ಮಾಡಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ಸಾಲಿ ಮಾತನಾಡಿ ಕೇಂದ್ರದ ಬಿಜೆಪಿ ಸರ್ಕಾರ ಬರೀ ಸುಳ್ಳುಗಳನ್ನು ಹೇಳಿಕೊಂಡು ಜನರಿಗೆ ಅನ್ಯಾಯ ಮಾಡಿದೆ. ಈಗ ಮತ್ತೆ ಚುನಾವಣೆ‌ ಬಂದಿದೆ. ಮತ್ತೆ ನಿಮ್ಮಂದ ಮತ ಕೇಳಲು ಬರುತ್ತಿದ್ದಾರೆ. ಅವರಿಗೆ ಮತ ಹಾಕಿದರೆ ಯಾವ ಅಭಿವೃದ್ದಿಯಾಗುವುದಿಲ್ಲ. ಕಾಂಗ್ರೆಸ್ ಅಭ್ಯರ್ಥಿ ಗೆ ಮತ ಹಾಕಿ ಎಂದು ಮನವಿ ಮಾಡಿದರು.

ವೇದಿಕೆಯ ಮೇಲೆ ಭೀಮಣ್ಣ ಸಾಲಿ, ಸಿದ್ದುಗೌಡ ಪಾಟೀಲ್ ಅಫಜಲ್ ಪುರಕರ್, ವೀರನಗೌಡ ಪರಸರೆಡ್ಡಿ ಸೇರಿದಂತೆ ಹಲವರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here