ಶಹಾಬಾದ: ಎತ್ತಿನ ಬಂಡಿಗಳ ಮೂಲಕ ಮತದಾನದ ಜಾಗೃತಿ

ಶಹಾಬಾದ :ಕಲಬುರಗಿ ಜಿಲ್ಲಾಡಳಿತ ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಶಹಾಬಾದ ಮುಖ್ಯ ರಸ್ತೆಗಳಲ್ಲಿ “ಎತ್ತಿನ ಬಂಡಿ”ಗಳ ಮೂಲಕ ಹಮ್ಮಿಕೊಳ್ಳಲಾದ ಮತದಾರರ ಜಾಗೃತಿ ಜಾಥದ ಅಭಿಯಾನಕ್ಕೆ ತಾಲೂಕ ಪಂಚಾಯಿತಿ ಕಚೇರಿಯ ಆವರಣದಲ್ಲಿ ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ತಾಲೂಕ ಪಂಚಾಯಿತ ಇ. ಒ. ಮಲ್ಲಿನಾಥ ರಾವೂರ ಅವರು ರವಿವಾರ ಚಾಲನೆ ನೀಡಿದರು.

ಪೌರಾಯುಕ್ತ ಡಾ.ಕೆ.ಗುರುಲಿಂಗಪ್ಪ ಮಾತನಾಡಿ, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬರುವ ಮೇ 7 ರಂದು ಪ್ರತಿಯೊಬ್ಬ ಮತದಾರರು ಮತಗಟ್ಟೆಗಳಿಗೆ ತೆರಳಿ ತಪ್ಪದೇ ಮತದಾನ ಮಾಡಬೇಕು, ವಿವೇಚನೆಯಿಂದ ಹಾಕಿದ ಮತ ದೇಶಕ್ಕೆ ಹಿತ, ಮತದಾನ ನಮ್ಮ ಹಕ್ಕಾಗಿದೆ, ಅದನ್ನು ನಾವು ಸ್ವ-ಇಚ್ಛೆಯಿಂದ ಚಲಾಯಿಸಬೇಕು ಎಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.

ಶಹಾಬಾದ ತಾಲೂಕಿನ ಎಂಸಿಸಿ ನೋಡಲ್ ಅಧಿಕಾರಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಿನಾಥ ರಾವೂರ ಅವರು ಎಲ್ಲರಿಗೂ ಮತದಾನ ಜಾಗೃತಿ ಮತ್ತು ಮತದಾನ ಅಭಿಯಾನದ ಪ್ರತಿಜ್ಞಾ ವಿಧಿ ಭೋದಿಸಿದರು.

ತಾಲೂಕ ಪಂಚಾಯಿತ ಮತ್ತು ನಗರ ಸಭೆ ಆವರಣದಲ್ಲಿ ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ಸ್ವಸಹಾಯ ಮಹಿಳಾ ಗುಂಪುಗಳಿಂದ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಂದ ಬಣ್ಣ, ಬಣ್ಣದ ರಂಗೋಲಿ ಹಾಕಲಾಗಿತ್ತು.

ಮೆರವಣಿಗೆಯಲ್ಲಿ ಗ್ರಾಮಗಳಿಂದ ಬಂದ ಎತ್ತಿನ ಬಂಡಿಗಳು ಪಾಲ್ಗೊಂಡು, ಎತ್ತುಗಳನ್ನು ಸಿಂಗರಿಸಿ, ಬಂಡಿಯಲ್ಲಿ ನಾನಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ, ರೈತರು ಮತದಾನದ ಮಹತ್ವ ಸಾರುವ ಸಂದೇಶಗಳುಳ್ಳ ಬಿತ್ತಿಪತ್ರಗಳನ್ನು ಹಿಡಿದು ಜಾಗೃತಿ ಮೂಡಿಸಿದರು.

ತಾ.ಪಂ.ಈರಣ್ಣ ಸಾತ್‍ಖೇಡ್, ಅನಿಲ ಕುಮಾರ ಮಾನ್ಪಡೆ, ಶಿವರಾಜ ಇರಳ್ಳಿ, ಸಂತೋಷ, ನಗರ ಸಭೆಯ ವ್ಯವಸ್ಥಾಪಕ ಶರಣಗೌಡ, ರಘುನಾಥ ನರಸಾಳೆ, ಶಿವರಾಜಕುಮಾರ, ಮಹ್ಮದ ಮೈಹಿನೋದ್ದಿನ, ಸಿಡಿಪಿಓ ಡಾ. ವಿಜಯಲಕ್ಷ್ಮಿ ಹೇರೂರು, ಕಂದಾಯ ಇಲಾಖೆಯ ಗಂಗಾಧರ ಸೇರಿದಂತೆ ತಾ. ಪಂ, ನಗರ ಸಭೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

7 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

9 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

10 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

10 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

10 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

10 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420