ಮತದಾನ ಕೇಂದ್ರಗಳಲ್ಲಿ ಮೈಕ್ರೋ ಅಬ್ಸರ್ವರ್‍ಗಳ ಕಾರ್ಯ ಮಹತ್ವದ್ದು: ದೀಪಾಂಕರ ಸಿನ್ಹಾ

ಕಲಬುರಗಿ: ಚುನಾವಣೆಯಲ್ಲಿ ಮೈಕ್ರೋ ಅಬ್ಸರ್ವರ್ ಕೆಲಸ ಮಹತ್ವದ್ದಾಗಿದ್ದು, ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಯ ಮತದಾನ ದಿನದಂದು ಬಹಳ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸುವಂತೆ ಚುನಾವಣೆಯ ಸಾಮಾನ್ಯ ವೀಕ್ಷಕರಾದ ದೀಪಾಂಕರ ಸಿನ್ಹಾ ಅವರು ಸೂಚಿಸಿದರು.

ಸೋಮವಾರದಂದು ನಗರದ ಡಾ. ಎಸ್.ಪಂಡಿತ್ ರಂಗಮಂದಿರದಲ್ಲಿ ಲೋಕಸಭಾ ಚುನಾವಣೆ ನಿಮಿತ್ತ ನಡೆದ ಮೈಕ್ರೋ ಅಬ್ಸರ್ವರ್‍ಗಳ ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಿಯೋಜಿತ ಮತಗಟ್ಟೆಗಳಲ್ಲಿ ಮತದಾನಕ್ಕೂ ಮುನ್ನ 90 ನಿಮಿಷ ಮುಂಚೆ ನಡೆಯುವ ಅಣಕು ಮತದಾನದಿಂದ ಹಿಡಿದು ಮತದಾನ ಪಕ್ರಿಯೆ ಮುಗಿಯುವ ವರೆಗೂ ತೀವ್ರ ನಿಗಾವಹಿಸಬೇಕು. ಈ ಎಲ್ಲಾ ಪಕ್ರಿಯೆಗಳ ಕುರಿತು ನನಗೆ ವರದಿ ಸಲ್ಲಿಸಬೇಕು ಎಂದು ಅವರು ತಿಳಿಸಿದರು.

ಇಲ್ಲಿ ನೀಡುವ ತರಬೇತಿಯಲ್ಲಿ ಚೆನ್ನಾಗಿ ತಿಳಿದುಕೊಳ್ಳಬೇಕು. ಯಾವುದೇ ಗೊಂದಲ/ಸಂಶಯಗಳಿದಲ್ಲಿ ಇಲ್ಲೇ ನಿವಾರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಅವರು, ಈ ಮೂಲಕ ಮತದಾನದ ದಿನದಂದು ನಿರೀಕ್ಷಿತ ಮಟ್ಟದಲ್ಲಿ ಕಾರ್ಯ ನಿರ್ವಹಿಸÀಬೇಕು ಎಂದು ಅವರು ಕರೆ ನೀಡಿದರು.

ಜಿಲ್ಲಾ ಚುನಾವಣಾಧಿಕಾರಿಗಳೂ ಅದ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಮಾತನಾಡಿ, ಮೈಕ್ರೋ ಅಬ್ಸರ್ವರ್‍ಗಳು ಮತದಾನಕ್ಕೂ ಮುನ್ನ ದಿನವಾದ ಮೇ 6 ರಂದು ಬೆಳಿಗ್ಗೆ 10 ಗಂಟೆಗೆ ಆಯಾ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕೇಂದ್ರಕ್ಕೆ ತೆರಳಿ ಸಹಾಯಕ ಚುನಾವಣಾಧಿಕಾರಿಗಳ ಮುಂದೆ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು. ತಪ್ಪಿದ್ದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಮತದಾನದ ದಿನದಂದು ಮತಗಟ್ಟೆಗಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಕಾರ್ಯಚಟುವಟಿಕೆಗಳ ತೀವ್ರ ನಿಗಾವಹಿಸುವುದರ ಜೊತೆಗೆ ಚುನಾವಣೆ ಆಯೋಗ ನೀಡಿರುವ ಮಾರ್ಗದರ್ಶನದಂತೆ ಎಲ್ಲಾ 18 ಅಂಶಗಳು ಪಾಲನೆಯಾಗುವಂತೆ ಎಚ್ಚರ ವಹಿಸಬೇಕು ಎಂದು ಅವರು ತಿಳಿಸಿದರು.

ಅಭ್ಯರ್ಥಿ/ಏಜೆಂಟರು ಎದುರಲ್ಲಿ ಅಣುಕು ಮತದಾನ ಮಾಡಬೇಕು. ಎಲ್ಲಾ ಅಭ್ಯರ್ಥಿಗಳು ಸಮಾನ ಮತಗಳನ್ನು ಚಲಾಯಿಸಬೇಕು. ಚಲಾಯಿತ ಮತಗಳ ಲೆಕ್ಕವಿಡಬೇಕು. ಮತದಾನದಲ್ಲಿ ಚಲಾಯಿಸಿದ ಮತಗಳನ್ನು ಸಿಯು ಮತ್ತು ವಿವಿಪ್ಯಾಟ್‍ನಿಂದ ಅಳಿಸಿ ಹಾಕಬೇಕು ಮುದ್ರಿತ ಚೀಟಿಗಳ ಹಿಂದೆ ಒಔಅಏ Pಔಐಐ SಐIP ಸೀಲ್ ಹಾಕಬೇಕು ಅವುಗಳನ್ನು ಕಪ್ಪು ಬಣ್ಣದ ಕವರಲ್ಲಿಟ್ಟು ಸೀಲ್ ಮಾಡಬೇಕು ಎಂದು ವಿವರಿಸಿದರು.

ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ ಶಂಕರ್ ಅವರು ಮಾತನಾಡಿ, ಮತದಾನ ದಿನದಂದು ಅತ್ಯಂತ ಸೂಕ್ಷ್ಮ ಮತ್ತು ಗಂಭೀರವಾಗಿ ಕಾರ್ಯನಿರ್ವಹಿಸಬೇಕಾಗಿರುತ್ತದೆ. ಯಾವುದೇ ರೀತಿ ಕರ್ತವ್ಯ ಲೋಪ ಆಗದಂತೆ ಎಚ್ಚರವಹಿಸಬೇಕು. ಈ ನಿಟ್ಟಿನಲ್ಲಿ ಹೆಚ್ಚು ಜಾಗ್ರತೆ ವಹಿಸಬೇಕೆಂದು ಸಲಹೆ ನೀಡಿದರು.

ನ್ಯಾಷನಲ್ ಲೇವಲ್ ಮಾಸ್ಟರ್ ಟ್ರೇನರ್ ಡಾ.ಶಶಿಶೇಖರರೆಡ್ಡಿ ಅವರು ಮೈಕ್ರೋ ಅಬ್ಸರ್ವರ್ ಗಳಿಗೆ ತರಬೇತಿ ನೀಡಿದರು. ಕಲಬುರಗಿ ಜಿಲ್ಲಾ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಸದಾಶಿವ ವೀ ರಾತ್ರಿಕರ್ ಅವರು ಹಾಜರಿದ್ದರು.

ಕೇಂದ್ರ ಸರ್ಕಾರದ ಸಿ ದರ್ಜೆಗಿಂತ ಮೇಲ್ಪಟ್ಟ ಅಧಿಕಾರಿಗಳು, ಬ್ಯಾಂಕ್, ಎಲ್‍ಐಸಿ ಮುಂತಾದ ಕೇಂದ್ರ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳನ್ನು ಮೈಕ್ರೋ ಅಬ್ಸರ್ವರ್ ಆಗಿ ನೇಮಕ ಮಾಡಲಾಗಿದ್ದು, ಎಲ್ಲರೂ ತರಬೇತಿಯಲ್ಲಿ ಹಾಜರಿದ್ದರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

8 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

8 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420