ಕಲಬುರಗಿ: ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪ್ರಚಾರಾರ್ಥ ಪಟ್ಟಣದ ಅಂಬೇಡ್ಕರ್ ಭವನದ ಹಿಂಭಾಗದಲ್ಲಿ ಮೇ 1ರಂದು (ಬುಧವಾರ) ಸಂಜೆ 5 ಗಂಟೆಗೆ ಹಮ್ಮಿಕೊಂಡಿರುವ ಸಮಾವೇಶಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಮತ್ತಿತರ ಮುಖಂಡರು ಆಗಮಿಸಲಿದ್ದಾರೆ ಎಂದು ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಶಾಸಕ ಡಾ. ಅಜಯಸಿಂಗ್ ತಿಳಿಸಿದರು.
ರಾಜ್ಯದ ಜನತೆಗೆ ತೆರಿಗೆ ಹಣ ಕೊಡದೆ, ಬೆಳೆ ಹರಿಹಾರ ನೀಡಿದ ಕೇಂದ್ರದ ಬಿಜೆಪಿ ಸರ್ಕಾರ ರೈತರು, ಬಡವರ ಜೀವನದ ಜೊತೆ ಚೆಲ್ಲಾಟ ನಡೆಸುತ್ತಿದ್ದು, ಪ್ರಧಾನಿ ಮೋದಿ ಅವರು ತಮ್ಮ 10 ವರ್ಷದ ಆಡಳಿತಾವಧಿಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಮಾಡಲಿಲ್ಲ. ಹೀಗಾಗಿ ಜನತೆಯ ವಿಶ್ವಾಸ ಕಳೆದುಕೊಂಡಿದ್ದು, ಈ ಬಾರಿಯ ಚುನಾವಣೆಯಲ್ಲಿ ಮೋದಿ ಹವಾ ನಡೆಯುವುದಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೆಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯ ಸೇರಿದಂತೆ ಜೇವರ್ಗಿ ಕ್ಷೇತ್ರದಲ್ಲೂ ಬಿಜೆಪಿಗೆ ಲೀಡ್ ಬಂದಿತ್ತು. ಆದರೆ ಜೇವರ್ಗಿ ಕ್ಷೇತ್ರದಲ್ಲಿ ಕಾಂಗ್ರೆಸ್ಗೆ ಈ ಬಾರಿ ಕನಿಷ್ಠ 10 ಸಾವಿರ ಲೀಡ್ ದೊರೆಯಲಿದೆ. ರಾಜ್ಯ ಸರ್ಕಾರದ ಗ್ಯಾರಂಟಿಗಳ ಜೊತೆಗೆ ಪಕ್ಷದ ಈ ಬಾರಿಯ ಪ್ರಣಾಳಿಕೆಗಳು ಜನರಿಗೆ ಭರವಸೆ ಮೂಡಿಸಿವೆ. ಹೀಗಾಗಿ ಕನಿಷ್ಠ 15-ರಿಂದ 20 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ನೀಲಕಂಠರಾವ ಮೂಲಗೆ, ಶರಣು ಭೂಸನೂರ, ಪರಮೇಶ್ವರ, ಶ್ಯಾಮ ನಾಟೀಕಾರ, ನೀಲಕಂಠರಾಯ ಅವಂಟಿ ಇತರರು ಸುದ್ದಿಗೋಷ್ಠಿಯಲ್ಲಿದ್ದರು.
ಕಲಬುರಗಿ: ಕಳೆದ ಅಕ್ಟೋಬರ್ 2 ರಂದು ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…
ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…