ಮೋದಿಗೆ ನಡುಕ ಶುರುವಾಗಿದೆ: ಯೋಗೇಂದ್ರ ಯಾದವ

ಕಲಬುರಗಿ: ಲೋಕಸಭಾ ಚುನಾವಣಾ ನಿಮಿತ್ತ ದೇಶದ ರಾಜಸ್ತಾನ, ಹರಿಯಾಣ, ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ ರಾಜ್ಯಗಳನ್ನು ಸುತ್ತಾಡಿದ್ದು, ಬಿಜೆಪಿ ಹಾಗೂ ಮೋದಿ ಗಾಳಿ ಕಂಡು ಬರುತ್ತಿಲ್ಲ ಎಂದು ರಾಷ್ಟ್ರೀಯ ರೈತ ನಾಯಕ ಯೋಗೇಂದ್ರ ಯಾದವ ತಿಳಿಸಿದರು.

ಹರಿಯಾಣದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗ್ರಾಮಗಳಲ್ಲಿ ಕೂಡ ಬಿಟ್ಟುಕೊಳ್ಳುತ್ತಿಲ್ಲ. ಉತ್ತರಪ್ರದೇಶದಲ್ಲಿ ಬಿಜೆಪಿಗೆ ಮೊದಲಿಗಿಂತ ಕಮ್ಮಿ ಸ್ಥಾನಗಳು ಲಭಿಸಲಿದ್ದು, ಕರ್ನಾಟಕ ಸೇರಿದಂತೆ ಉಳಿದ ರಾಜ್ಯಗಳಲ್ಲಿ ತೀವ್ರ ಪೈಪೋಟಿಯಿದ್ದು, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ನೆಲಕಚ್ಚುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಚುನಾವಣೆ ವೇಳೆ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸದೆ ಮುಸ್ಲಿಂರ ವಿರುದ್ಧ ಹಿಂದುಗಳನ್ನು ಎತ್ತಿಕಟ್ಟಿ ರಾಜಕೀಯ ಲಾಭ ಪಡೆಯುವ ಕೀಳು ಮಟ್ಟಕ್ಕಿಳಿದಿರುವ ಬಿಜೆಪಿಗೆ ಜನರ ಮನಸ್ಸನ್ನು ಬೇರೆಡೆ ಸೆಳೆಯಲು ಇಂತಹ ಕುತಂತ್ರ ಮಾಡುತ್ತಿದೆ ಎಂದು ಆರೋಪಿಸಿದರು. ಮೊದಲ ಹಂತದ ಮತದಾನದ ಸಮೀಕ್ಷೆಯ ಬಳಿಕ ಪ್ರಧಾನಿ ಮೋದಯವರ ಮಾತಿ ದಾಟಿಯೇ ಬದಲಾಗಿದ್ದು, ಹಿಂದುಗಳ ತಾಳಿ ಕಿತ್ತು ಮುಸ್ಲಿಂರಿಗೆ ಹಣ ಕೊಡುತ್ತಾರೆ ಎಂಬಂತಹ ಹತಾಶೆಯ ಮಾತುಗಳನ್ನಾಡುತ್ತಿದ್ದಾರೆ ಎಂದರು.

ಅಬ್ ಕಿ ಬಾರ್ ಚಾರ್ ಸೌ ಪಾರ್ ಅನ್ನುವುದು ಬೂಟಾಟಿಕೆ ಹೊರತು, ಆತ್ಮವಿಶ್ವಾಸವಲ್ಲ. ಇದು 420 ಜನರು ಮಾಡುವ ಸಣ್ಣತನದ ಕೆಲಸ ಎಂದು ಮೂದಲಿಸಿದರು. ನನ್ನ ಬದುಕಿನುದ್ದಕ್ಕೂ ಕಾಂಗ್ರೆಸ್ ವಿರೋಧಿಸುತ್ತ ಬಂದಿದ್ದರೂ ದೇಶ ಹಾಗೂ ಸಂವಿಧಾನ ರಕ್ಷಣೆಗಾಗಿ ಕಾಂಗ್ರೆಸ್ ಗೆ ಬೆಂಬಲಿಸುವಂತೆ ಅವರು ಮನವಿ ಮಾಡಿದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

9 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

12 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

16 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

17 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

19 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420