ಪ್ರಜಾಪ್ರಭುತ್ವ ಉಳಿವಿಗೆ ಬಿಜೆಪಿ ಸೋಲಿಸಿ: ಮಾವಳ್ಳಿ ಶಂಕರ

ಕಲಬುರಗಿ: ಕೇಂದ್ರದಲ್ಲಿ ಅಧಿಕಾರದ ಗದ್ದುಗೆ ಹಿಡಿಯುವ ಮುನ್ನ ದೇಶದ ಜನತೆಗೆ ಪ್ರಧಾನಿ ಮೋದಿ ನೀಡಿದ್ದ ಎಲ್ಲ ಭರವಸೆಗಳು ಹುಸಿಯಾಗಿದ್ದು, ಸಂವಿಧಾನದ ಆಶಯಗಳಿಗೆ ಧಕ್ಕೆ ತರುತ್ತಿರುವ, ಸಂವಿಧಾನ ಬದಲಿಸುವ ಮಾತನಾಡುತ್ತಿರುವ ಬಿಜೆಪಿ ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವಂತೆ ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಮಾವಳ್ಳಿ ಶಂಕರ ಹಾಗೂ ಗುರುಪ್ರಸಾದ ಕೆರಗೋಡ ಹೇಳಿದರು.

ಮೋದಿ ನೀಡಿದ್ದ ಅಚ್ಛೆ ದಿನ್ ಭರವಸೆಗಳು ಈವರೆಗೆ ಈಡೇರಿರುವುದಿಲ್ಲ. ಮೇಲಾಗಿ ಸನಾತನ, ಮನುವಾದವನ್ನು ಪುನರ್ ಸ್ಥಾಪಿಸಲು ಪ್ರಯತ್ನಿಸುತ್ತಿರುವ ಆರ್.ಎಸ್.ಎಸ್. ಹಾಗೂ ಬಿಜೆಪಿಗೆ ಈ ಬಾರಿ ತಕ್ಕ ಪಾಠ ಕಲಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಅಂಬಾನಿ, ಅದಾನಿಯಂತಹ ಕೇವಲ ಕೆಲವೇ ಕೆಲವು ಉದ್ಯಮಿಗಳ ಸಂಪತ್ತನ್ನು ವೃದ್ಧಿಸಲು ಯೋಜನೆಗಳನ್ನು ಹಾಕಿದಷ್ಟು ಬಡವರ, ರೈತರ, ದೀನ ದಲಿತರ ಪರ ಯೋಜನೆ ಹಾಕಿಕೊಂಡಿದ್ದರೆ ಮೋದಿಯವರನ್ನು ನೆನಪಿಸಬುದಿತ್ತು. ಉದ್ಯೋಗ ಕಲ್ಪಿಸುವುದು, ವಿದೇಶದಲ್ಲಿನ ಕಪ್ಪು ಹಣ ವಾಪಸ್ ತರುವುದಾಗಿ ಮಾತು ಕೊಟ್ಟಿದ್ದ ಮೋದಿ ಜನರ ಬೇಕು ಬೇಡುಗಳಿಗೆ ಸ್ಪಂದಿಸದೆ, ರಾಮ ಮಂದಿರ, ಹಿಂದೂ-ಮುಸ್ಲಿಂ ವಿಷಯವಿಟ್ಟುಕೊಂಡು ಚುನಾವಣೆ ನಡೆಸುತ್ತಿದ್ದಾರೆ ಎಂದು ಆಪಾದಿಸಿದರು.

ವಿರೋಧ ಪಕ್ಷಗಳ ಮೇಲೆ ಐಟಿ, ಇಡಿ, ಚಿಬಿಐ ಮುಂತಾದ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗೆ ಕಲಬುರಗಿ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.

ಎಸ್.ಆರ್. ಕೊಲ್ಲೂರ, ಅರ್ಜುನ ಭದ್ರೆ, ಮರೆಪ್ಪ ಹಳ್ಳಿ, ಅರ್ಜುನ ಗೊಬ್ಬೂರ, ಮಲ್ಲಿಕಾರ್ಜುನ ಖನ್ನಾ, ಬಾಬು ಪಾಸ್ವಾನ್, ಸೂರ್ಯಕಾಂತ ಆಜಾದಪುರ, ವಿನೋದಕುಮಾರ ಇತರರಿದ್ದರು.

emedialine

Recent Posts

ಇಂದಿನಿಂದ ಸೂಗೂರ (ಕೆ ) ನವರಾತ್ರಿ ಬ್ರಹ್ಮೋತ್ಸವ

ಕಾಳಗಿ : ಕಲ್ಯಾಣ ಕರ್ನಾಟಕದ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಸುವರ್ಣ ಗಿರಿ ಕಾಳಗಿ ತಾಲೂಕಿನ ಸೂಗೂರ (ಕೆ )…

53 mins ago

ಕಾಳಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತರಿಗೆ ಕಾಳಗಿ ತಾಲೂಕು ಪ್ರವಾಸಿ ಮಂದಿರದಲ್ಲಿ ಹವ್ಯಾಸೀಕಲಾ ಬಳಗದ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಿವ್ಯ…

2 hours ago

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

15 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

18 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

22 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

23 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420