ಸ್ಟ್ರಾಂಗ್‌ ರೂಮ್ ಮತ್ತು ಮತ‌ ಎಣಿಕೆ‌ ಕೇಂದ್ರಕ್ಕೆ ಡಿ.ಸಿ ಭೇಟಿ: ಪೂರ್ವಸಿದ್ಧತೆ ಕಾರ್ಯ ಪರಿಶೀಲನೆ

ಕಲಬುರಗಿ: ಗುಲಬರ್ಗಾ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು‌ ಮತದಾನ ನಡೆಯಲಿದ್ದು, ಮತದಾನದ‌ ನಂತರ‌ ಮತಯಂತ್ರಗಳು ಇರಿಸಲಾಗುವ ಗುಲಬರ್ಗಾ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಕಟ್ಟಡಗಳ ಸ್ಟ್ರಾಂಗ್ ರೂಂ ಕೇಂದ್ರಕ್ಕೆ ಮಂಗಳವಾರ ಜಿಲ್ಲಾ ಚುನಾವಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭೇಟಿ ನೀಡಿ ಸಿದ್ಧತಾ ಕಾರ್ಯ ಪರಿಶೀಲಿಸಿದರು.

ಕಲಬುರಗಿ ನಗರ ಪೊಲೀಸ್ ಆಯುಕ್ತ ಆರ್.ಚೇತನಕುಮಾರ ಅವರೊಂದಿಗೆ ಭೇಟಿ‌ ನೀಡಿದ ಚುನಾವಣಾಧಿಕಾರಿಗಳು, ಗುಲಬರ್ಗಾ ಲೋಕಸಭಾ ಕ್ಷೇತ್ರದ 8 ಕ್ಷೇತ್ರಗಳ ಇ.ವಿ.ಎಂ ಮತಯಂತ್ರಗಳು ಇರಿಸಲಾಗುವ ಗುಲಬರ್ಗಾ ವಿ.ವಿ.ಯ ಪರೀಕ್ಷಾಂಗ, ಗಣಿತ, ಕನ್ನಡ ಅಧ್ಯಯನ, ಸಸ್ಯಶಾಸ್ತ್ರ ಹಾಗೂ ಇಂಡೋರ್ ಸ್ಟೇಡಿಯಂ ಕಟ್ಟಡ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಜೂನ್ 4 ರಂಡು‌ ನಡೆಯುವ‌ ಮತ ಎಣಿಕೆ ಸ್ಥಳ ಸಹ ಪರಿಶೀಲಿಸಿದರು.

ಮತದಾನ ನಂತರ ಇ.ವಿ.ಎಂ ಮತಯಂತ್ರಗಳು ಇಲ್ಲಿ ಇಡಲಾಗುತ್ತಿರುವುದರಿಂದ ಗರಿಷ್ಠ ಪೊಲೀಸ್ ಭದ್ರತೆ ಒದಗಿಸಬೇಕು. ಸ್ಟ್ರಾಂಗ್ ರೂಂ ಕಟ್ಟಡಕ್ಕೆ ಸಂಬಂಧಿಸಿದಂತೆ ಭದ್ರತೆ, ಅಗ್ನಿ, ಸಿವಿಲ್, ವಿದ್ಯುತ್ ಗೆ ಸಂಬಂಧಿಸಿದಂತೆ ಪೊಲೀಸ್, ಅಗ್ನಿಶಾಮಕ ಇಲಾಖೆ, ಲೋಕೋಪಯೋಗಿ ಇಲಾಖೆ, ಜೆಸ್ಕಾಂನವರು ಫಿಟನೆಸ್ ಪ್ರಮಾಣ ಪತ್ರ ಒದಗಿಸಬೇಕು. ಸ್ಟ್ರಾಂಗ್ ರೂಂ ಕೇಂದ್ರ ಸುತ್ತ ಬ್ಯಾರಿಕೇಡ್, ಸಿ.ಸಿ.ಟಿ.ವಿ. ಅಳವಡಿಸಬೇಕೆಂದು ಅಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ನಿರ್ದೇಶನ ನೀಡಿದರು.

ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್, ಲೋಕೋಪಯೋಗಿ ಇಲಾಖೆಯ ಇ.ಇ. ಸುಭಾಷ್, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಎ.ಸಿ.ಪಿ. ರಾಜಣ್ಣ, ಮಹಾನಗರ ಪಾಲಿಕೆಯ ಇ.ಇ. ಶಿವಣಗೌಡ ಪಾಟೀಲ, ಅಗ್ನಿಶಾಮಕ ಅಧಿಕಾರಿಗಳು ಇತರರು ಇದ್ದರು.

emedialine

Recent Posts

ಕಲಬುರಗಿ: ನೂತನ ಗ್ರಂಥಾಲಯ ಉದ್ಘಾಟನೆ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…

9 mins ago

ಬಸವ ಜಯಂತಿ ಆಚರಣೆ ಅಂಗವಾಗಿ ಹುಣಸಗಿಯಲ್ಲಿ ಪೂರ್ವಭಾವಿ ಸಭೆ

ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…

2 hours ago

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

2 hours ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

2 hours ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

3 hours ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

6 hours ago