ಕಸಾಪ ಸಂಸ್ಥಾಪನಾ ದಿನಾಚರಣೆ: ಕನ್ನಡ ಬಳಸಿದಷ್ಟು ಉಳಿಯಲು ಸಾಧ್ಯ| ಟಿ.ವಿ. ಶಿವಾನಂದನ್

0
91

ಪುಸ್ತಕ ಪ್ರದರ್ಶನ:ಕಸಾಪ ಹಿರಿಯ ಸದಸ್ಯರಿಗೆ ಸತ್ಕಾರ

ಕಲಬುರಗಿ: ಕನ್ನಡ ಸಾಹಿತ್ಯಕ್ಕೆ ಬಹು ದೊಡ್ಡ ಪರಂಪರೆ ಇದೆ. ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯದಲ್ಲಿ ಕನ್ನಡ ಭಾಷೆ ಉಳಿಸಿ ಬೆಳೆಸಲು ನಿರಂತರ ಪ್ರಯತ್ನಿಸುತ್ತಾ ಬಂದಿದೆ. ಕನ್ನಡದ ಅಸ್ತಿತ್ವ ಹೇಗಿದೆ, ಕನ್ನಡ ಉಳಿಸಿಕೊಳ್ಳಲು ಹೋರಾಟ ಮಾಡುವ ಅನಿವಾರ್ಯತೆ ಯಾಕೆ ಬಂದಿದೆ ಎಂದು ಆತ್ಮಾವಲೋಕನ ಮಾಡುವುದು ಅಗತ್ಯವಿದೆ. ನೆರೆ ರಾಜ್ಯಗಳಾದ ತಮಿಳು ನಾಡು, ಕೇರಳ, ಆಂಧ್ರ ಪ್ರದೇಶ, ಮಹಾರಾಷ್ಟ್ರಗಳ ರಾಜ್ಯಗಳಲ್ಲಿ ಮಾತೃಭಾಷೆಗಳಿಗೆ ಪ್ರಥಮಾದ್ಯತೆ ನೀಡುತ್ತವೆ. ಆದರೆ ನಮ್ಮ ರಾಜ್ಯದಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಮಮಹತ್ವ ನೀಡುತ್ತಿಲ್ಲ. ಪ್ರತಿಯೊಬ್ಬರೂ ಕನ್ನಡ ಬಳಸಿದರೆ ಉಳಿಸಲು ಸಾಧ್ಯ ಇದೆ ಎಂದು ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಟಿ.ವಿ. ಶಿವಾನಂದನ್ ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಭಾನುವಾರ ನಗರದ ಕನ್ನಡ ಭವನದ ಆವರಣದಲ್ಲಿ ಜರುಗಿದ ಕಸಾಪ ದ 110 ನೇ ಸಂಸ್ಥಾಪನಾ ದಿನಾಚರಣೆಯ ವಿಶೇಷ ಮತ್ತು ವೈವಿದ್ಯಮಯ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

Contact Your\'s Advertisement; 9902492681

ಆಕಾಶವಾಣಿ ಕೇಂದ್ರದ ವಿಶ್ರಾಂತ ಕಾರ್ಯಕ್ರಮ ನಿರ್ವಾಹಕ ಡಾ. ಸದಾನಂದ ಪೆರ್ಲ ಮಾತನಾಡಿ, ಭಾಷಾ ಕೀಳರಿಮೆಯಿಂದ ಕನ್ನಡ ಮಾತನಾಡಲು ಹಿಂದೇಟು ಹಾಕುತ್ತಿರುವ ಕನ್ನಡಿಗರಿಂದ ಅಪಾಯವಿದೆ. ಕನ್ನಡವನ್ನು ನಿತ್ಯ ಬಳಕೆ ಮಾಡುವುದರಿಂದ ಕನ್ನಡ ಪತ್ರಿಕೆ, ಪುಸ್ತಕಗಳನ್ನು ಓದುವುದರಿಂದ ಕನ್ನಡವನ್ನು ಬೆಳೆಸುವ ಕೆಲಸ ಮಾಡಬೇಕಾಗಿದೆ. ಕನ್ನಡ ಶಾಲೆಗಳಲ್ಲಿ ಓದಿಸುವುದು ಹಾಗೂ ಕನ್ನಡ ಪರಿಸರವನ್ನು ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡು ಕರ್ನಾಟಕದಲ್ಲಿ ಕನ್ನಡವನ್ನು ಬೆಳೆಸುವ ಕೆಲಸ ಮಾಡಬೇಕಾಗಿದೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಜಾಗತಿಕ ಒತ್ತಡದ ಜೀವನ ಶೈಲಿಯಲ್ಲಿ ಪರಭಾಷೆ ವ್ಯಾಮೋಹ ಇದ್ದರೂ ನಮ್ಮ ಮಾತೃ ಭಾಷೆ ಹೃದಯದ ಭಾಷೆಯನ್ನಾಗಿ ಬೆಳೆಸಬೇಕಾಗಿದೆ. ಇಂದು ಎಲ್ಲಾ ಕ್ಷೇತ್ರಗಳಲ್ಲಿ ಕನ್ನಡ ಉಳಿಸಿ ಬೆಳೆಸಬೇಕಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ನೆಲ, ಜಲ ಭಾಷೆ ಸಂರಕ್ಷನೆಗಾಗಿ ನಿರಂತರ ಸೇವೆ ಮಾಡುತ್ತಿದೆ. ಕಲಬುರಗಿ ಜಿಲ್ಲೆಯನ್ನು ಸಾಂಸ್ಕøತಿಕ ಜಿಲ್ಲೆಯನ್ನಾಗಿ ಮಾಡುವ ಸಂಕಲ್ಪ ತೊಡಲಾಗಿದೆ ಎಂದರು.

ಎಸ್ ಎಸ್ ಎಲ್ ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ. ಸವಿತಾ ಗಿರಿ, ಗುಲಬರ್ಗ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿ ಡಾ. ಶೀಲಾದೇವಿ ಎಸ್ ಬಿರಾದಾರ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ದರ್ಮಣ್ಣ ಎಚ್ ಧನ್ನಿ, ಸಂಘಟನಾ ಕಾರ್ಯದರ್ಶಿ ಸಿದ್ಧಲಿಂಗ ಬಾಳಿ ಮಾತನಾಡಿದರು. ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ 110 ಜನ ಜಿಲ್ಲೆಯ ಲೇಖಕರ ಪುಸ್ತಕ ಪ್ರದರ್ಶನ ಪ್ರೇಕ್ಷಕರ ವಿಶೇಷ ಗಮನ ಸೆಳೆಯಿತು. ಪರಿಷತ್ತಿನ ಹಿರಿಯ ಸದಸ್ಯರನ್ನು ವಿಶೇಷವಾಗಿ ಸತ್ಕರಿಸಲಾಯಿತು.

ಪ್ರಮುಖರಾದ ಮುಡುಬಿ ಗುಂಡೇರಾವ, ರವೀಂದ್ರಕುಮಾರ ಭಂಟನಳ್ಳಿ, ಎಂ ಎನ್ ಸುಗಂಧಿ, ರಾಜೇಂದ್ರ ಮಾಡಬೂಳ, ವಿಶ್ವನಾಥ ತೊಟ್ನಳ್ಳಿ, ಮಂಜುನಾಥ ಕಂಬಾಳಿಮಠ, ನಾಗಪ್ಪ ಎಂ ಸಜ್ಜನ್, ಸುರೇಶ ದೇಶಪಾಂಡೆ, ಪ್ರಭುಲಿಂಗ ಮೂಲಗೆ, ಶಾಮಸುಂದರ ಕುಲಕರ್ಣಿ, ಶಿಲ್ಪಾ ಜೋಶಿ, ಜ್ಯೋತಿ ಕೋಟನೂರ, ಭೀಮರಾಯ ಹೇಮನೂರ, ಸಿ ಎಸ್ ಮಾಲಿಪಾಟೀಲ, ಬಾಬುರಾವ ಪಾಟೀಲ, ರಮೇಶ ಡಿ ಬಡಿಗೇರ, ಧರ್ಮರಾಜ ಜವಳಿ, ರೇವಣಸಿದ್ದಪ್ಪ ಜೀವಣಗಿ, ಎಸ್ ಕೆ ಬಿರಾದಾರ, ಸಂತೋಷ ಕುಡಳ್ಳಿ, ನವಬ್ ಖಾನ್, ಅನೀಲಕುಮಾರ ಪಾಟೀಲ ತೇಗಲತಿಪ್ಪಿ, ನಾಗರಾಜ ಜಮದರಖಾನಿ, ಮಹೇಶ ಚಿಂತನಪಳ್ಳಿ, ಸಂತೋಷಕುಮಾರ ಕರಹರಿ, ಡಾ. ಕೆ.ಎಸ್ ಬಂಧು, ಶಿವಶರಣ ಹಡಪದ, ಶಿವಶಂಕರ ವರ್ಮಾ, ಎಚ್ ಎಸ್ ಬರಗಾಲಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here