ಕಲಬುರಗಿ: ಇದೇ ಮೇ 7 ರಂದು ಲೋಕಸಭೆ ಚುನಾವಣೆ ಹಿನ್ನೆಯಲ್ಲಿ ಮತದಾರ ಪಟ್ಟಿಯಲ್ಲಿ ಹೆಸರು ಇರುವ ಪ್ರತಿಯೊಬ್ಬರು ಕಡ್ಡಾಯವಾಗಿ ಮತದಾನ ಮಾಡಬೇಕೆಂದು ಯುವ ಜಾಗೃತಿ ವೇದಿಕೆ ಹಾಗೂ ನ್ಯೂ ಲೈಫ್ ಮಹಿಳಾ ಅಂಗವಿಕಲಕರ ಸಂಘದ ಅಧ್ಯಕ್ಷರಾದ ಮಹೆಬೂಬ್ ಬಿ ಅವರು ಮನವಿ ಮಾಡಿದ್ದಾರು.
ಇಲ್ಲಿನ ಮಿಲ್ಲತ್ ನಗರ ಬಡಾವಣೆಯಲ್ಲಿ ಮತದಾನ ಸಂಘದ ವತಿಯಿಂದ ಮತದಾನ ಜಾಗೃತಿ ನಿಮಿತ್ತ ಸಮುದಾಯದ ಜನರೊಂದಿಗೆ ಸಭೆ ನಡೆಸಿ ದೇಶದಲ್ಲಿ ಮತದಾನ ಹಕ್ಕು ಅತಿ ಉನ್ನತ ಹಕ್ಕಾಗಿದ್ದು, ಪ್ರತಿಯೊಬ್ಬರು ಮತದಾನ ಹಕ್ಕನ್ನು ಚಲಾಯಿಸುವ ಮೂಲಕ 7 ರಂದು ಹಬ್ಬದ ದಿನವಾಗಿ ಆಚರಿಸಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿದ್ದಾರು.
ನಂತರ ಸಭೆಯಲ್ಲಿ ನ್ಯೂ ಲೈಫ್ ಮಹಿಳಾ ಅಂಗವಿಕಲಕರ ಸಂಘದ ಕಾರ್ಯದರ್ಶಿಯಾಗಿರುವ ಶಕೀಲಾ ಅವರು ಮತದಾನ ಕೇಂದ್ರದಲ್ಲಿ ಅಂಗವಿಕಲ ಮಹಿಳೆಯರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ವಿಶೇಷ ಸೌಲಭ್ಯಗಳ ವ್ಯವಸ್ಥೆ ಮಾಡಲಾಗುತ್ತದೆ. ಆತಂಕಕ್ಕೆ ಒಳಗಾಗದೆ ಮತದಾನಕ್ಕೆ ಕೇಂದ್ರಕ್ಕೆ ತೆರಳಿ ಮತಚಲಾಯಿಸಬೇಕೆಂದು ಅಂಗವಿಕಲ ಮತದಾರರಿಗೆ ಮನವಿ ಮಾಡಿದ್ದರು.
ಈ ಸಂದರ್ಭದಲ್ಲಿ ಸಮುದಾಯದ ಮಹಿಳೆಯರು ಸೇರಿದಂತೆ ಹಲವರು ಇದ್ದರು.
ಕಲಬುರಗಿ: ಬುದ್ಧ, ಬಸವ, ಅಂಬೇಡ್ಕರ್ ಜಯಂತಿಯನ್ನು ಕೇವಲ ಮೆರವಣಿಗೆಗೆ ಸೀಮಿತಗೊಳಿಸದೆ, ಅವರ ಬದುಕು ಬೋಧನೆಯನ್ನು ಅನುಸರಿಸಬೇಕು ಎಂದು ಕನ್ನಡ ಅಭಿವೃದ್ಧಿ…
ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ವಿದ್ಯಾರ್ಥಿ ಸಿದ್ದಪ್ಪ ಹೊಸಮನಿ ಅವರು " ಡಾ. ಕೆ. ಆರ್.…
ಕಲಬುರಗಿ; ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ಇಲ್ಲಿನ ಪ್ರಾದೇಶಿಕ ಆಯುಕ್ತರ ಕಚೇರಿ ಸಭಾಂಗಣದಲ್ಲಿ ಕ್ಷೇತ್ರದ ವ್ಯಾಪ್ತಿಗೆ…
ಸುರಪುರ: ನಗರದಲ್ಲಿ ವಾಸವಿ ಜಯಂತಿ ಆಚರಣೆ ಅಂಗವಾಗಿ ಅದ್ಧೂರಿ ಮೆರವಣಿಗೆ ನಡೆಸಲಾಗಿದೆ.ಮೊದಲಿಗೆ ನಗರದ ಹಳೆ ಬಸ್ ನಿಲ್ದಾಣದ ಬಳಿಯಲ್ಲಿನ ಕನ್ನಿಕಾ…
ಸುರಪುರ: ತಾಲೂಕಿನಲ್ಲಿ ಮುಂಗಾರು ಆರಂಭಗೊಂಡು ಕೃಷಿ ಚಟುವಟಿಕೆಗಳು ಆರಂಭಗೊಂಡಿದ್ದರಿಂದ ಕೃಷಿ ಬೀಜ ಗೊಬ್ಬರ ಮಾರಾಟ ಅಂಗಡಿಗಳಿಗೆ ತಾಲೂಕು ಸಹಾಯಕ ಕೃಷಿ…
ಕಲಬುರಗಿ: ನಗರದ ಪುಟಾಣಿ ಗಲ್ಲಿಯಲ್ಲಿ ಶ್ರೀ ನಗರೇಶ್ವರ ದೇವ ಸ್ಥಾನದಲ್ಲಿ ಆರ್ಯ ವೈಶ್ಯ ಸಮಾಜ ವತಿಯಿಂದ ಶ್ರೀ ವಾಸವಿ ಜಯಂತಿ…