ಗ್ಯಾರಂಟಿ ಯೋಜನೆಗಳು ಎಲ್ಲ ವರ್ಗದ ಜನರಿಗೆ ಅನುಕೂಲವಾಗಿವೆ

0
6

ಶಹಾಬಾದ: ರಾಜ್ಯದ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದಾಗಿ ಎಲ್ಲ ವರ್ಗದ ಜನರಿಗೆ ಅನುಕೂಲವಾಗಿದೆ.ಆದ್ದರಿಂದ ಕಾಂಗ್ರೆಸ್ ಮತ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಪೂಜಪ್ಪ ಮೇತ್ರೆ ಹೇಳಿದರು.

ಅವರು ತಾಲೂಕಿನ ವಡ್ಡರವಾಡಿಯಲ್ಲಿ ಗ್ರಾಮದಲ್ಲಿ ಲೋಕಸಭಾ ಚುನಾವಣೆಯ ನಿಮಿತ್ತ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಪರವಾಗಿ ಮತಯಾಚಿಸಿ ಮತದಾರರಲ್ಲಿ ಮನವಿ ಮಾಡಿದರು.

Contact Your\'s Advertisement; 9902492681

ಕಾಂಗ್ರೆಸ್ ಪಕ್ಷ ಬದುಕು ಕಟ್ಟುವ ವಿಚಾರಗಳಿಗೆ ಒತ್ತು ಕೊಡುತ್ತಿದೆ ಹೊರತು ಧರ್ಮದ ಆಧಾರದ ವಿಚಾರಗಳಿಗೆ ಅಲ್ಲ. ಗ್ಯಾರಂಟಿ ಯೋಜನೆಗಳು ಎಲ್ಲ ಧರ್ಮದ ಜನರಿಗೆ ಅನುಕೂಲವಾಗಿದೆ.

ಉಚಿತ ಬಸ್ ಪ್ರಯಾಣದಿಂದ ಮಹಿಳೆಯರು ದೇವಾಲಯಗಳಿಗೆ ಹೋಗಿ ದರ್ಶನ ತೆಗೆದುಕೊಳ್ಳುತ್ತಿದ್ದಾರೆ. ಧರ್ಮಸ್ಥಳಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಹೋಗಿದ್ದರಿಂದ ಆದಾಯ ಹೆಚ್ಚಿಗೆ ಬರುತ್ತಿದೆ ಎಂದು ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿ ಮೋದಿ ತಮ್ಮ ಗ್ಯಾರಂಟಿ ಎಂದು ಬರೆಯುತ್ತಿದ್ದಾರೆ ಎಚ್ಚರವಿರಲಿ. ಅವರ ಗ್ಯಾರಂಟಿ ಸುಳ್ಳಿನಲ್ಲಿ, ನಮ್ಮ ಗ್ಯಾರಂಟಿಗಳು ಜನರಿಗೆ ಎಂದು ಹೇಳಿದರು.ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿ ಎಂದು ಮನವಿ ಮಾಡಿದ ಅವರು ಕೇಂದ್ರದಲ್ಲಿ ಬಡವರ ಪರ ಸರ್ಕಾರ ಬರಲು ಆಶೀರ್ವಾದ ಮಾಡಿ ಎಂದರು.

ಹಿರಿಯ ಮುಖಂಡ ಭೀಮುಗೌಡ ಖೇಣಿ ಮಾತನಾಡಿ, ಕಳೆದ ಹತ್ತು ವರ್ಷದ ಅವಧಿಯಲ್ಲಿ ಜನರ ಮುಂದೇ ಮಾಡಿದ ಭಾಷಣದ ವಿಡಿಯೋಗಳನ್ನು ಮತ್ತೊಮ್ಮೆ ಮೆಲುಕು ಹಾಕಿ ನೋಡಿಕೊಳ್ಳಲಿ.ಅಂದು ನೀಡಿದ ಭರವಸೆಗಳು ಈಡೇರಿವೆ ಎಂದು ಆತ್ಮಾವಲೋಕನ ಮಾಡಿಕೊಂಡರೇ ಸಾಕು.ಅವರು ನೀಡಿದ ಭರವಸೆಗಳು ಶೂನ್ಯ ಎಂದು ಗೊತ್ತಾಗುತ್ತದೆ.ಕೇವಲ ಹತ್ತು ವರ್ಷಗಳಲ್ಲಿ ಧರ್ಮದ ನಡುವೆ ದ್ವೇಷ ಬಿತ್ತುವ ಹಾಗೂ ಸುಳ್ಳು ಹೇಳುವ ರಿಕಾರ್ಡ ಮಾಡಿದ್ದಾರೆ.ಆದರೆ ಕಾಂಗ್ರೆಸ್ ಸರಕಾರ ನುಡಿದಂತೆ ನಡೆದಿದೆ.

ಕರ್ನಾಟಕ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್,ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ರೂ. ನೀಡಿದ್ದೆವೆ ಅಥವಾ ಇಲ್ಲ ಎಂಬುದನ್ನು ಜನರಿಗೆ ಹೋಗಿ ಕೇಳಿ? ಅವರೇ ಉತ್ತರಿಸುತ್ತಾರೆ.ಆದ್ದರಿಂದ ನುಡಿದಂತ ನಡೆದ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಲ್ಕಪ್ಪ ಮುದ್ದಾ, ಅಂಬ್ರೇಶ ಮಾವನೂರ್ ಸೇರಿದಂತೆ ಅನೇಕರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here