ಕಲಬುರಗಿ: ಶಿಕ್ಷಣ ಪ್ರೇಮಿಗಳು, ಹಿರಿಯ ಮುತ್ಸದ್ದಿಗಳು ಹಾಗೂ ಮಾಜಿ ಶಾಸಕರಾದ ಡಾ.ನಾಗರೆಡ್ಡಿ ಪಾಟೀಲ್ ಅವರು ಮೇ 6 ರಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
1983 ರಲ್ಲಿ ಶಾಸಕರಾಗಿದ್ದರು. 1985 ವರೆಗೆ ಎರಡೂವರೆ ವರ್ಷ ಅವಧಿಗೆ ಶಾಸಕರಾಗಿದ್ದರು.ಕಳೆದ ಎರಡು ದಶಕಕ್ಕೂ ಹೆಚ್ಚು ವರ್ಷದಿಂದ ಕಾಂಗ್ರೆಸ್ ನಲ್ಲಿ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶಿವಶರಣರೆಡ್ಡಿ ಪಾಟೀಲ ಅವರ ತಂದೆ ಡಾ.ನಾಗರೆಡ್ಡಿ ಪಾಟೀಲರ 2020 ರಲ್ಲಿ ಅವರ ಕುರಿತಾದ “ರಾಜಗಂಭೀರ” ಗ್ರಂಥವನ್ನು ಹೊರತಂದು, ಅವರಿಗೆ 75 ವರ್ಷ ಸಂದ ಪ್ರಯುಕ್ತ ಅಮೃತ ಮಹೋತ್ಸವದಲ್ಲಿ ಮಹಿಪಾಲರೆಡ್ಡಿ ಮುನ್ನೂರ್ ಅವರು ಈ ಗ್ರಂಥದ ಅರ್ಪಿಸಿದರು.
ಅವರಿಗೆ 79 ವರ್ಷ ವಯಸ್ಸಾಗಿತ್ತು. ಸಹೋದರ ಹಾಗೂ ಸಹೋದರಿಯರು, ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮೇ 6 ರಂದು ಮಧ್ಯಾಹ್ನ 3.30 ಕ್ಕೆ ಸೇಡಂ ಪಟ್ಟಣದ ಆಶ್ರಯ ಕಾಲೋನಿ ಪಕ್ಕದಲ್ಲಿರುವ ಸ್ವಂತ ಹೊಲದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.