ವರ್ಗ ಸಂಘರ್ಷ ತೀವ್ರಗೊಳಿಸಿ: ಆರ್.ಮಾನಸಯ್ಯ

ರಾಯಚೂರು: ಕಾರ್ಮಿಕ ಚಳುವಳಿಗಳನ್ನು ಸಫಲಗೊಳಿಸಿಕೊಳ್ಳಲು ವರ್ಗ ಸಂಘರ್ಷವನ್ನು ತೀವ್ರಗೊಳಿಸಿಕೊಳ್ಳಲು ಮುಂದಾಗಬೇಕಿದೆ ಎಂದು ಟಿಯುಸಿಐ ಪ್ರಧಾನ ಕಾರ್ಯದರ್ಶಿ ಆರ್.ಮಾನಸಯ್ಯ ಕಾರ್ಯಕರ್ತರಿಗೆ ಕರೆ ನೀಡಿದರು.

ಅವರಿಂದು ರಾಯಚೂರು ಆಶಾಪೂರ ರಸ್ತೆಯ ವಿಜಯನಗರ ಕಾಲೋನಿಯಲ್ಲಿ ಆರಂಭಿಸಿದ ಟಿಯುಸಿಐ ರಾಜ್ಯ ಕಾರ್ಯಾಲಯ “ಮಾರ್ಕ್ಸ್ ಭವನ” ಉದ್ಘಾಟಿಸಿ ಮಾತನಾಡಿದರು. ರಾಜ್ಯ ಕಾರ್ಯಾಲಯವನ್ನು ನಿರಂತರಗೊಳಿಸಿಕೊಂಡು ಕ್ರೀಯಾಶೀಲತೆಯೊಂದಿಗೆ ಮುನ್ನಡೆಸಿ ಎಲ್ಲಾ ವೃತ್ತಿ ಸಂಘಗಳೊಂದಿಗೆ ಕಾರ್ಮಿಕ ವರ್ಗದ ಹೋರಾಟಗಳನ್ನು ಗಟ್ಟಿಗೊಳಿಸಿಕೊಳ್ಳಲು ಕರೆ ನೀಡಿದರು.

ರಾಜ್ಯ ಉಪಾಧ್ಯಕ್ಷರಾದ, ಎಂ.ಗಂಗಾಧರ ಮಾತನಾಡಿ ದುಡಿಯುವ ವರ್ಗದ ಸಿದ್ದಾಂತದ ಕೊಡುಗೆ ನೀಡಿದ ಕಾರ್ಲ್ ಮಾರ್ಕ್ಸ್ ರ ಹೆಸರನ್ನು ಇಟ್ಟುಕೊಂಡು ಆರಂಭಿಸಿದ ಮಾರ್ಕ್ಸ್ ಭವನದ ಮೂಲಕ ರಾಜ್ಯಾದ್ಯಂತ ಕಾರ್ಮಿಕ ಚಳುವಳಿಗಳನ್ನು ಮುನ್ನಡೆಸಲು ಸನ್ನದ್ದರಾಗೋಣ ಎಂದು ಕರೆ ನೀಡಿದರು.

ರಾಜ್ಯ ಖಜಾಂಚಿ ಡಿ.ಕೆ.ಲಿಂಗಸೂಗೂರು ಮಾತನಾಡಿ ಮಾರ್ಕ್ಸ್ ಭವನದ ನಿಯಮಗಳನ್ನು ಪಾಲಿಸುತ್ತಾ ಅಧ್ಯಯನಗಳೊಂದಿಗೆ ನಿರಂತರತೆಯನ್ನು ಕಾಯ್ದುಕೊಂಡು ವರ್ಗ ಚಳುವಳಿಗೆ ಹೆಗಲೊಡ್ಡೋಣ ಎಂದರು.

ರಾಜ್ಯ ಕಾರ್ಯದರ್ಶಿ ಚಿನ್ನಪ್ಪ ಕೊಟ್ರಿಕಿ ಪ್ರಾಸ್ತಾವಿಕ ನುಡಿಗಳೊಂದಿಗೆ ಸಮಾರೋಪವನ್ನು ನೇರವೇರಿಸಿದರು. ಜಿಲ್ಲಾಧ್ಯಕ್ಷರಾದ, ಜಿ.ಅಮರೇಶ, ರಾಜ್ಯ ಸಮಿತಿಯ ದೇವಮ್ಮ, ನಸ್ರೀನಾ ಬೇಗಂ, ತಿಪ್ಪರಾಜ, ಅಜೀಜ್ ಜಾಗೀರದಾರ, ನಿರಂಜನ, ಬಸವರಾಜ, ಎಚ್.ಆರ್.ಹೊಸಮನಿ, ಲಕ್ಷ್ಮಣ ಮುಂತಾದ ಮುಖಂಡರೊಂದಿಗೆ ಜಿಲ್ಲೆಯ ನೂರಾರು ಕಾರ್ಮಿಕರು ಮಾರ್ಕ್ಸ್ ಭವನ ಉದ್ಘಾಟನೆಯಲ್ಲಿ ಪಾಲ್ಗೊಂಡಿದ್ದರು. ಆರಂಭದಲ್ಲಿ ಟಿಯುಸಿಐ ಪ್ರಧಾನ ಕಾರ್ಯದರ್ಶಿ ಆರ್.ಮಾನಸಯ್ಯ ದ್ವಜಾರೋಹಣ  ನೆರವೇರಿಸಿದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

2 hours ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

2 hours ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

4 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

4 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

4 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420