ಕಲಬುರಗಿ: ನುಡಿದಂತೆ ನಡೆ, ನಡೆದಂತೆ ನುಡಿ ಎಂಬ ಕಾಯಕ ತತ್ವದ ಮೂಲಕ ವಿಶ್ವದೆಲ್ಲೆಡೆ ಕ್ರಾಂತಿ ಎಬ್ಬಿಸುವ ಬಸವಾದಿ ಶರಣರ ಚಿಂತನೆಗಳನ್ನು ಇಂದಿನ ಸಮಾಜಕ್ಕೆ ತಿಳಿಸಿಕೊಡುವ ದಿಸೆಯಲ್ಲಿ ಬಸವ ಜಯಂತಿ ನಿಮಿತ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮೇ 9 ರಂದು ಬೆಳಗ್ಗೆ 11.15 ಕ್ಕೆ ನಗರದ ಕನ್ನಡ ಭವನದ ಪ್ರಾಂಗಣದಲ್ಲಿ ವಚನ ಸಾಂಸ್ಕøತಿಕ ಸಂಭ್ರಮದ ಬಸವ ಉತ್ಸವ-2024 ನ್ನು ವಿಶಿಷ್ಟ ಮತ್ತು ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಸಮಾನತೆಯ ಬೀಜ ಬಿತ್ತಿದ, ಶೋಷಣೆ, ಮೂಢನಂಬಿಕೆಗಳ ವಿರುದ್ಧ ಹೋರಾಡಿದ ವಿಶ್ವಗುರು ಕರ್ನಾಟಕದ ಸಾಂಸ್ಕøತಿಕ ನಾಯಕ ಬಸವಣ್ಣ ನವರು ಹಾಕಿಕೊಟ್ಟ ಮಾರ್ಗದಲ್ಲಿ ಇಂದು ನಾವೆಲ್ಲರೂ ನಡೆಯಬೇಕಾಗಿದೆ.ಬಸವಾದಿ ಶರಣರು ತಮ್ಮ ವಚನಗಳ ಮೂಲಕವೇ ಕತ್ತಲೆಯಲ್ಲಿರುವ ನಮ್ಮ ಜನರ ಮ,ನಸ್ಥಿತಿಯನ್ನು ಬೆಳಕಿನೆಡೆಗೆ ತಂದ ಮಹಾನ್ ಪುರುಷ ಸರ್ವರೂ ಸಮಾನರು ಎಂದು ತೋರಿಸಿಕೊಟ್ಟಮಹಾನ್ ಚೇತನ ವಿಶ್ವಗುರು ಬಸವಣ್ಣನವರಾಗಿದ್ದಾರೆ.
ಹೀಗಾಗಿ ಬಸವಣ್ಣನವರ ತತ್ವ ಸಿದ್ಧಾಂತಗಳನ್ನು ಇಂಥ ಕಾರ್ಯಕ್ರಮದ ಮೂಲಕ ಪ್ರಚುರಪಡಿಸಲಾಗುತ್ತಿದೆ. ಶರಣರು ವಚನಗಳು ಸರಳ ಭಾಷೆಯಾದ ಕನ್ನಡದಲ್ಲಿ ರಚಿಸುವ ಮೂಲಕ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದ ಕೀರ್ತಿಯೂ ಸಹ ಬಸವಣ್ಣನವರು ಹಾಗೂ ಅವರ ಸಮಾಕಾಲೀನ ಶರಣರಿಗೆ ಸಲ್ಲುತ್ತದೆ ಎಂದು ಅವರು ವಿವರಿಸಿದ್ದಾರೆ.
ಹಿರಿಯ ಜನಪರ ಹೋರಾಟಗಾರ ಮರಿಯಪ್ಪ ಹಳ್ಳಿ ಸಮಾರಂಭ ಉದ್ಘಾಟಿಸಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಶರಣ ಲೇಖಕಿ ಡಾ. ಇಂದುಮತಿ ಪಾಟೀಲ ಅವರು ವೈಚಾರಿಕ ಚಿಂತನೆ ಕುರಿತು ಮಾತನಾಡಲಿದ್ದು, ವೈದ್ಯ ಡಾ. ಎಸ್ ಎಸ್ ಕಾರಬಾರಿ, ಶರಣ ಚಿಂತಕ ಬಸವರಾಜ ಮೊರಬದ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಜಿಲ್ಲೆಯ ವಿವಿಧ ಕ್ಷೇತ್ರದ ಪ್ರಮುಖರಾದ ವಿದ್ಯಾಸಾಗರ ದೇಶಮುಖ, ಡಾ. ಫಾರೂಕ್ ಮಣೂರ, ಅಣಿರುದ್ರಗೌಡ ಹೊನಗುಂಟಾ, ಮಹಾಲಿಂಗಪ್ಪಗೌಡ ಬಂಡೆಪ್ಪಗೌಡರ್, ಪ್ರಭುಲಿಂಗಯ್ಯಾ ಹಿರೇಮಠ ಕೊಂಡಗುಳಿ, ಶಂಕರ ಹಿಪ್ಪರಗಿ, ಶರಣಗೌಡ ಪಾಟೀಲ ಉದನೂರ, ಚೆನ್ನಣ್ಣ ಬಾಳಿ ರಾವೂರ, ವಿಜಯಲಕ್ಷ್ಮೀ ನೆಪೆರಿ, ನವಾಬ ಖಾನ್, ಡಾ. ನೀಲಲೋಹಿತ ಹಿರೇಮಠ ಗಂವ್ಹಾರ, ನಂದಿಕುಮಾರ ಪಾಟೀಲ ಪೋಲಕಪಳ್ಳಿ, ನಾಗಪ್ಪ ಕೋಟಗಾರ ವಾಡಿ, ಜಗನ್ನಾಥ ಸೂರ್ಯವಂಶಿ ಅವರನ್ನು ಬಸವ ಗೌರವ ಪುರಸ್ಕಾರವನ್ನು ನೀಡಲಾಗುವುದು.
ನಂತರ ನಡೆಯುವ ವಚನ ವೈಭವದಲ್ಲಿ ಕು. ದಾನೇಶ್ವರಿ ಹಿರೇಮಠ, ಕು. ಅವಂತಿಕಾ ಬಿ ಘಂಟೆ, ಬಾಬುರಾವ ಪಾಟೀಲ, ಎಂ.ಎನ್. ಸುಗಂಧಿ ಸೇರಿದಂತೆ ಅನೇಕ ಕಲಾವಿದರಿಂದ ವಚನಾಧರಿತ ವಿವಿಧ ಸಂಗೀತ ಕಾರ್ಯಕ್ರಮಗಳು ಜರುಗಲಿವೆ.
ಇಂದಿನ ಸಮಾಜದಲ್ಲಿ ವೈಚಾರಿಕ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ವಿಧವಾ ತಾಯಂದಿರಿಗೆ ಉಡಿ ತುಂಬುವ ವಿಶೇಷ ಕಾರ್ಯಕ್ರಮ ಕನ್ನಡ ಸಾಹಿತ್ಯ ಪರಿಷತ್ತಿನ ಅಡಿಯಲ್ಲಿ ಹಮ್ಮಿಕೊಂಡಿರುವುದು ಮತ್ತಷ್ಟು ವಿಶೇಷ ಕಾರ್ಯಕ್ರಮವಾಗಿದೆ ಎಂದು ಜಿಲ್ಲಾ ಕಸಾಪ ದ ಗೌರವ ಕಾರ್ಯದರ್ಶಿ ಧರ್ಮಣ್ಣ ಎಚ್ ಧನ್ನಿ ತಿಳಿಸಿದ್ದಾರೆ.
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…
ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…
ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…