ಸೇಡಂ: ನಿನ್ನೆಯಷ್ಟೇ ಮಾಜಿ ಶಾಸಕರು, ಶಿಕ್ಷಣ ಪ್ರೇಮಿಗಳಾದ ಡಾ.ನಾಗರೆಡ್ಡಿ ಪಾಟೀಲರು ನಿಧನರಾಗಿದ್ದು, ಇಡೀ ಸೇಡಂ ತಾಲೂಕು ಶೋಕದಲ್ಲಿ ಮುಳುಗಿತ್ತು. ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಹ ಟ್ವಿಟ್ ಮಾಡುವ ಮೂಲಕ ಹಿರಿಯ ಚೇತನಕ್ಕೆ ಗೌರವ ಸಂತಾಪ ಸಲ್ಲಿಸಿದ್ದರು. ಸರಕಾರಿ ಗೌರವದೊಂದಿಗೆ ಗೌಡರ ಅಂತ್ಯಕ್ರಿಯೆ ನಡೆಯಿತು.
ನಿನ್ನೆಯ ನೋವನ್ನು ಹಾಗೂ ಇಂದಿನ ಲೋಕಸಭೆ ಚುನಾವಣೆಯ ಮತದಾನವನ್ನು ಎದೆಯಲ್ಲಿಟ್ಟುಕೊಂಡ ಇಡೀ ಕುಟುಂಬ, ಮತದಾನದ ಕರ್ತವ್ಯವನ್ನು ನಿರ್ಲಕ್ಷ್ಯಿಸದೆ, 20 ಜನರೂ ಸೇರಿ ಮತಗಟ್ಟೆಗೆ ಹೋಗಿ ಮತದಾನ ಮಾಡುವ ಮೂಲಕ ಇನ್ನಿತರರಿಗೆ ಮಾದರಿಯಾಗಿದ್ದಾರೆ.
ಇನ್ನೂ ಬಿಸಿಲಿದೆ, ನಡೆದುಕೊಂಡು ಹೋಗಬೇಕಾ, ನನ್ನ ದೊಂದು ವೋಟ್ ಏನಾಗುತ್ತೆ, ಸಂಜೆ ಹಾಕೋಣ ಹೀಗೆ ತಮ್ಮಷ್ಟಕ್ಕೆ ತಾವೇ ಮತವನ್ನು ಚಲಾಯಿಸಲು ಆಲಸ್ಯ ತೋರುತ್ತಿರುವವರ ನಡುವೆ, ಎದೆಯಲ್ಲಿ ದುಃಖದ ಮಡುವು ಇಟ್ಟುಕೊಂಡೂ ಗೌಡರ ಕುಟುಂಬ ಮತದಾನ ಮಾಡಿ ಹಕ್ಕು ಚಲಾಯಿಸಿದ್ದು ಮೆರಗು ತಂದಿದೆ.
ದಿ.ಡಾ.ನಾಗರೆಡ್ಡಿ ಪಾಟೀಲರ ಕುಟುಂಬ ನೋವಿನಲ್ಲೂ ‘ಮತದಾನ’ ಜವಬ್ದಾರಿ ನಿಭಾಯಿಸಿದ್ದಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…
ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…