ಶರಣ ಸಂಸ್ಕøತಿ ಮೈಗೂಡಿಸಿಕೊಂಡರೆ ಬದುಕು ಅರ್ಥಪೂರ್ಣ

0
208

ಕಲಬುರಗಿ: ಬಸವಣ್ಣನವರು ಶ್ರೇಷ್ಠ ಸಮಾಜ ಸುಧಾರಕರು, ತತ್ವಜ್ಞಾನಿಗಳು, ಸಮಾಜಶಾಸ್ತ್ರಜ್ಞರು, ರಾಜಕೀಯ ಚಿಂತಕರು, ಅರ್ಥಶಾಸ್ತ್ರಜ್ಞರು, ಲಿಂಗಾಯತ ಧರ್ಮಗುರುವಾಗಿ, ವಿಶ್ವಕ್ಕೆ ಮಾದರಿಯಾದಂತಹ ಕಾರ್ಯವನ್ನು ಮಾಡಿ ವಿಶ್ವಗುರುವಾಗಿದ್ದಾರೆ. ಸಕಲ ಜೀವ ರಾಶಿಗಳಿಗೆ ಲೇಸನ್ನೇ ಬಯಸುವ ಶರಣ ಸಂಸ್ಕøತಿ ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಅರ್ಥಪೂರ್ಣವಾಗಲು ಸಾಧ್ಯವಿದೆ ಎಂದು ಜಿಲ್ಲಾ ವೀರಶೈವ-ಲಿಂಗಾಯತ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರಪ್ಪ ಗಣಮುಖಿ ಹೇಳಿದರು.

ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ‘ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ 891ನೇ ಬಸವ ಜಯಂತಿ ಪ್ರಯುಕ್ತ ಗುರುವಾರ ಏರ್ಪಡಿಸಲಾಗಿದ್ದ ಮಕ್ಕಳಿಗಾಗಿ ಬಸವಣ್ಣನವರ ವೇಷಭೂಷಣ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ನಿವೃತ್ತ ಮುಖ್ಯ ಶಿಕ್ಷಕ ಬಸಯ್ಯಸ್ವಾಮಿ ಹೊದಲೂರ ಮಾತನಾಡಿ, ಬಸವೇಶ್ವರರು ಶಿವನನ್ನು ಪೂಜಿಸಿ, ಶಿವನೇ ತಾವಾಗಿದ್ದಾರೆ. ಅವರು ಒಬ್ಬ ವ್ಯಕ್ತಿಯಲ್ಲ, ಬದಲಿಗೆ ಅವರು ಅದ್ಭುತವಾದ ಅನಂತ ಶಕ್ತಿಯಾಗಿದ್ದಾರೆ. ಸರ್ವರ ಏಳಿಗೆಗಾಗಿ ತಮ್ಮ ಜೀವನದುದ್ದಕ್ಕೂ ನಿರಂತರವಾಗಿ ಹೋರಾಟ ಮಾಡಿದ್ದಾರೆ. ಬಾಲ್ಯದಿಂದಲೇ ಬಸವಾದಿ ಶರಣರ ಸಂಸ್ಕøತಿ, ಪರಂಪರೆಯನ್ನು ಬೆಳೆಸುವ ಕಾರ್ಯ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಬಳಗದ ಅಧ್ಯಕ್ಷ ಎಚ್.ಬಿ.ಪಾಟೀಲ, ಕಸಾಪ ಉತ್ತರ ವಲಯದ ಗೌರವ ಅಧ್ಯಕ್ಷ ಹಾಗೂ ಶರಣ ಚಿಂತಕ ಶಿವಯೋಗೆಪ್ಪಾ ಎಸ್.ಬಿರಾದಾರ, ಸಂಸ್ಥೆಯ ಮುಖ್ಯಸ್ಥ ಅಮರ ಜಿ.ಬಂಗರಗಿ, ಮುಖ್ಯ ಶಿಕ್ಷಕಿ ಚಂಪಾಕಲಾ ಬಿರಾದಾರ, ಶಿಕ್ಷಕಿ ನಿಂಗಮ್ಮ ಬಿರಾದಾರ, ಪ್ರಮುಖರಾದ ಗೀತಾ ಬಿರಾದಾರ, ಲತಾ ಬಿರಾದಾರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿಗಳಾದ ಅಥರ್ವ, ಆಯುಷ್ ಎಸ್, ಆಯುಷ್ ಎನ್, ಆಯುಷ್ ಎಂ, ಸಮರ್ಥ, ಹರ್ಷಲ್ ಎಸ್ ಬಸವಣ್ಣನವರ ವೇಷಭೂಷಣ ಧರಿಸಿ, ವಚನಗಳನ್ನು ಪಠಿಸಿ, ಸಂಭ್ರಮಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here