ಬಿಸಿ ಬಿಸಿ ಸುದ್ದಿ

ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಸುರೇಶ ಸಜ್ಜನಗೆ ಬಿಜೆಪಿ ಟಿಕೆಟ್ ನೀಡಲು ಸುರೇಶ ನೇದಲಗಿ ಆಗ್ರಹ

ಕಲಬುರಗಿ: ಈಶಾನ್ಯ ಪದವೀಧರ ಕ್ಷೇತ್ರಕ್ಕೇ ಜೂನ್ 03 ರಂದು ಚುನಾವಣೆ ಘೋಷಣೆ ಆಗಿದ್ದು, ಬಿಜೆಪಿಯ ಹಿರಿಯ ಮುಖಂಡ , ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ‌‌ ಹಾಗೂ ಸಮಾಜ ಸೇವಕ ಸುರೇಶ ಸಜ್ಜನ ರವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್ ನೀಡಿದರೆ ಗೆಲುವ ನಿಶ್ಚಿತ ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚ ಉಪಾಧ್ಯಕ್ಷ ಹಾಗೂ ಬಿಎಸ್ಎನ್ಎಲ್ ಸಲಹಾ ಸಮಿತಿ ವಿಭಾಗ ನಾಮನಿರ್ದೇಶತ ಸದಸ್ಯರಾದ ಸುರೇಶ್ ಪಾಟೀಲ್ ನೇದಲಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಈಗಾಗಲೇ ಚುನಾವಣೆ ತಯಾರಿಯ ಭಾಗವಾಗಿ ಸತತ ಮೂರು ವರ್ಷದಿಂದ ಕಲ್ಯಾಣ ಕರ್ನಾಟಕ ಶಿಕ್ಷಕರ ಹಾಗೂ ಪದವೀಧರರ ಕಲ್ಯಾಣ ಅಭಿವೃದ್ಧಿ ಸಂಘವನ್ನು ರಚನೆ ಮಾಡಿಕೊಂಡು ಮತಕ್ಷೇತ್ರ ವ್ಯಾಪ್ತಿಯ ಏಳು ಜಿಲ್ಲೆಗಳ ಪ್ರವಾಸ ಮಾಡಿ ನಾಲ್ಕು ಜಿಲ್ಲೆಗಳಲ್ಲಿ ಸಂಘದ ಕಚೇರಿ ತೆಗೆಯೋ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಪದವೀಧರರ ನೋಂದಣಿಗೆ ಪ್ರಯತ್ನ ಮಾಡಿ ಸುಮಾರು 25,000 ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪದವೀಧರರ ನೋಂದಣಿ ಮಾಡಿಸಿದ್ದಾರೆ.

ಶಿಕ್ಷಕರಿಗಾಗಿ ಜ್ಯೋತಿ ಸಂಜೀವಿನಿ ಸ್ಮಾರ್ಟ್ ಕಾರ್ಡನ್ನು ಕಲಬುರಗಿ , ಬೀದರ್ ಯಾದಗಿರ್ , ಹಾಗೂ ಕೊಪ್ಪಳ ಜಿಲ್ಲೆಗಳಲ್ಲಿ ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಪ್ರತಿ ಹಂತದಲ್ಲಿ ಕಾರ್ಯಕ್ರಮಗಳನ್ನು ಮಾಡು ಮೂಲಕ 20,000ಕ್ಕೂ ಹೆಚ್ಚಿನ ಶಿಕ್ಷಕರಿಗೆ ಜ್ಯೋತಿ ಸಂಜೀವಿನಿ ಆರೋಗ್ಯ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಿದ್ದಲ್ಲದೆ
ಪದವೀಧರರ ಹಾಗೂ ಶಿಕ್ಷಕರ ವಿಚಾರವಾಗಿ ಉಪನ್ಯಾಸ ಕಾರ್ಯಕ್ರಮಗಳು , ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೇರಿದಂತೆ 2024 ನೇ ಸಾಲಿನ ಕ್ಯಾಲೆಂಡರ್ ಗಳನ್ನು ವಿತರಿಸಿ
ಎಲ್ಲಾ ಶಿಕ್ಷಕರ ಸಂಘಗಳ ಸಹಭಾಗಿತ್ವವನ್ನು ಪಡೆದುಕೊಂಡು ಎಲ್ಲಾ ಜಿಲ್ಲಾ ಘಟಕ ಹಾಗೂ ತಾಲೂಕ ಘಟಕಗಳಿಗೆ ಭೇಟಿ ನೀಡಿ ಶಿಕ್ಷಕರ ಹಾಗೂ ಪದವೀಧರರ ಸಮಸ್ಯೆಗಳಿಗೆ ಸ್ಪಂದನೆ ನೀಡಿದ್ದು ಸುರೇಶ್ ಸಜ್ಜನ ಅವರಿಗೆ ವರದಾನವಾಗಲಿದೆ ಎಂದರು.

ಎಲ್ಲಾ ಸಮಾಜಗಳೊಡನೆ ನಿಕಟ ಸಂಪರ್ಕ ಹೊಂದಿರುವ ವಿಶೇಷವಾಗಿ ಪದವೀಧರರ ಕ್ಷೇತ್ರಕ್ಕೆ ಮೂರ್ನಾಲ್ಕು ವರ್ಷಗಳಿಂದ ತಯಾರಿ ನಡೆಸಿರುವ ಎಲ್ಲಾ ವಾಸ್ತವ ಅಂಶಗಳನ್ನು ಪರಿಗಣಿಸಿ ಭಾರತೀಯ ಜನತಾ ಪಕ್ಷ ಟಿಕೆಟ್ ನೀಡಿದ್ದೆ ಆದಲ್ಲಿ ಗೆಲವು ನಿಶ್ಚಿತವಾಗಲಿದ್ದು, ಸಜ್ಜನವರಿಗೆ ಟಿಕೆಟ್ ನೀಡಬೇಕೆಂದು ಮನವಿ ಮಾಡಿದ್ದಾರೆ.

emedialine

View Comments

Recent Posts

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

2 hours ago

ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಸಂಸ್ಕಾರ ಶಿಬಿರದ ಸಮರೂಪ 21ಕ್ಕೆ

ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…

5 hours ago

ತುರ್ತಾಗಿ ಬರ ಪರಿಹಾರ ಒದಗಿಸಲು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಒತ್ತಾಯ

ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…

5 hours ago

ಜಂಗಮಶೆಟ್ಟಿ ರಾಜ್ಯ ಮಟ್ಟದ ರಂಗಪ್ರಶಸ್ತಿಗೆ ಆಹ್ವಾನ

ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆಯು ಕೊಡಮಾಡುವ ಎಸ್.ಬಿ.ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ರಂಗ ಸಾಧಕರಿಂದ ಅರ್ಜಿ…

5 hours ago

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಸಾವು

ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದಿದ್ದು, ಘಟನಾ ಸ್ಥಳಕ್ಕೆ…

5 hours ago

ಹುಬ್ಬಳ್ಳಿಯ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಚಿತ್ತಾಪುರ: ಹುಬ್ಬಳ್ಳಿಯಲ್ಲಿ ನಡೆದ ಅಂಜಲಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಕೋಲಿ ಸಮಾಜದ ತಾಲೂಕು ಅಧ್ಯಕ್ಷ ರಾಮಲಿಂಗ ಬಾನಾರ್…

6 hours ago