ಬಿಸಿ ಬಿಸಿ ಸುದ್ದಿ

ಜಗತ್ತಿನ ಸರ್ವರನ್ನೂ ಸಮಾನವಾಗಿ ಕಾಣುವ ತತ್ವ ಬೋಧಿಸಿದವರು ಬಸವಣ್ಣ

ಶಹಾಬಾದ: ಜಗತ್ತಿನ ಸರ್ವರನ್ನೂ ಸಮಾನವಾಗಿ ಕಾಣುವ ಮೂಲಕ ವಿಶ್ವ ಭಾತೃತ್ವವನ್ನು ಪ್ರತಿಪಾದಿಸಿದವರು ಬಸವಣ್ಣನವರು ಎಂದು ಶಹಾಬಾದ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಕುಂಬಾರ ಹೇಳಿದರು.

ಅವರು ಶುಕ್ರವಾರ ನಗರದ ಶಹಾಬಾದ ಪತ್ತಿನ ಸಹಕಾರ ಸಂಘದಲ್ಲಿ ಶುಕ್ರವಾರ ಆಯೋಜಿಸಲಾದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.

12 ನೇ ಶತಮಾನ ಅದೊಂದು ಸುವರ್ಣಯುಗ. ಅಕ್ಷರ ಜ್ಞಾನವಿರದ ಎಷ್ಟೋ ಜನರಿಗೆ ಅಕ್ಷರ ಕಲಿಸಿ ವಚನಗಳನ್ನು ಬರೆಯಿಸಿದವನು ಬಸವಣ್ಣ. ಸಮಾಜದ ತಿರಸ್ಕಾರಕ್ಕೆ ಒಳಗಾದ ಹನ್ನೇರಡು ಸಾವಿರ ಸೂಳೆಯರನ್ನು ತಿಳಿ ಹೇಳಿ ಅವರನ್ನು ಶರಣೆಯರನ್ನಾಗಿ ಮಾಡಿದ ಕೀರ್ತಿ ಬಸವಣ್ಣನಿಗೆ ಸಲ್ಲುತ್ತದೆ.ಹೊಟ್ಟೆಗೆ ಊಟ ಎಷ್ಟು ಮುಖ್ಯವೋ, ಅಷ್ಟೇ ನೆತ್ತಿಗೂ ಜ್ಞಾನ ಮುಖ್ಯ.ಅಂತಹ ಜ್ಞಾನ ಕಣಜವಾಗಿರುವ ವಚನ ಸಾಹಿತ್ಯವನ್ನು ನಾವು ತಿಳಿದುಕೊಂಡು ನಡೆದರೇ ಸಮಾಜದಲ್ಲಿ ಪ್ರೀತಿ, ದಯೆ, ಕರುಣೆ ಉಂಟಾಗಿ ಎಲ್ಲರೂ ಒಂದಾಗಿ ಬಾಳಬಹುದು.ಆದರೆ ಇಂದು ಜಾತಿಗಳ ಮಧ್ಯೆ ದ್ವೇಷ ಬಿತ್ತುವ ಕಾರ್ಯ ನಡೆದಿದ್ದು, ಅದರಿಂದ ಹೊರಬರಬೇಕಾದರೆ ಬಸವಣ್ಣನವರ ವಿಚಾರಗಳು ನೆತ್ತಿಯೊಳಗೆ ಪ್ರವೇಶಮಾಡಬೇಕಿದೆ ಎಂದರು.

ಕಾರ್ಯದರ್ಶಿ ಶರಣಬಸಪ್ಪ ತುಂಗಳ ಮಾತನಾಡಿ, ವಚನಗಳು ನಮ್ಮ ಬದುಕಿಗೆ ದಾರಿ ದೀಪ. ಶರಣರು ನೀಡಿದ ವಚನ ಸಾಹಿತ್ಯವನ್ನು ನಾವು ತಿಳಿದುಕೊಂಡು, ಮತ್ತೊಬ್ಬರಿಗೆ ತಿಳಿಸುವ ಮೂಲಕ ಸಮಾಜದಲ್ಲಿ ಅಂಧಕಾರವನ್ನು ಹೋಗಲಾಡಿಸಲು ಪ್ರಯತ್ನಪಡೋಣ ಎಂದು ಹೇಳಿದರು.
ನಾಗಣ್ಣ.ಬಿ.ಪಾಟೀಲ, ಶರಣು ಜೋಗೂರ್,ಶಿವಾನಂದ ಪಾಟೀಲ, ಶರಣು ವಸ್ತ್ರದ್ ಇತರರು ಇದ್ದರು.

emedialine

Recent Posts

ಕಲಬುರಗಿ: ನೂತನ ಗ್ರಂಥಾಲಯ ಉದ್ಘಾಟನೆ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…

1 hour ago

ಬಸವ ಜಯಂತಿ ಆಚರಣೆ ಅಂಗವಾಗಿ ಹುಣಸಗಿಯಲ್ಲಿ ಪೂರ್ವಭಾವಿ ಸಭೆ

ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…

3 hours ago

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

3 hours ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

3 hours ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

4 hours ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

7 hours ago