ಬಿಸಿ ಬಿಸಿ ಸುದ್ದಿ

ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣನವರು

ಶಹಾಬಾದ: ಕಾಯಕವೇ ಕೈಲಾಸ ತತ್ವದಡಿ ಎಲ್ಲರೂ ಸಮಾನರು. ಯಾವುದೇ ಕೆಲಸದಲ್ಲಿ ಮೇಲು–ಕೀಳಿಲ್ಲ ಎಂದು ಸಾರಿದ ಬಸವಣ್ಣ ಅವರು ಸಾಮಾಜಿಕ ಕ್ರಾಂತಿಯ ಹರಿಕಾರರು ಎಂದು ಬಿಜೆಪಿ ಮುಖಂಡ ಬಸವರಾಜ ಮದ್ರಿಕಿ ಹೇಳಿದರು.

ಅವರು ಶುಕ್ರವಾರ ನಗರದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ ಬಸವ ಜಯಂತಿಯನ್ನು ಕಾರ್ಯಕ್ರಮದಲ್ಲಿ ಮಾತನಾಡಿದರು.

12ನೇ ಶತಮಾನದ ಅಂದಿನ ಸಮಾಜ ತಾರತಮ್ಯದಿಂದ ಕೂಡಿತ್ತು. ಶೋಷಿತರು, ದೀನದಲಿತರು ಹಾಗೂ ಮಹಿಳೆಯರು ಅಭಿವ್ಯಕ್ತಿ ಸ್ವಾತಂತ್ರ್ಯ ವಿಲ್ಲದೆ ತಮ್ಮ ದನಿಯನ್ನೇ ಕಳೆದುಕೊಂಡಿದ್ದರು. ಅಂತಹ ಸಂದರ್ಭದಲ್ಲಿ ಬಸವಣ್ಣನವರು ಅನುಭವ ಮಂಟಪದ ಮೂಲಕ ಸಮಾಜದ ಕಟ್ಟಕಡೆ ಯವರನ್ನು ಒಂದೆಡೆ ಕಲೆಹಾಕಿ ತಮ್ಮ ಸರಳ ವಚನ ಸಾಹಿತ್ಯದ ಮೂಲಕ ಎಲ್ಲರನ್ನು ಜಾಗೃತ ಗೊಳಿಸಿದರು. ಅ ಮೂಲಕ ಸಮಾನತೆಯ ತತ್ವ ವಿಚಾರಗಳಿಗೆ ಮುನ್ನುಡಿ ಬರೆದ ಬಸವಣ್ಣ ಅವರು ಶ್ರೇಷ್ಠ ಸಮಾಜ ಸುಧಾರಕರಾದರು ಎಂದು ಹೇಳಿದರು.

ಮುಖಂಡರಾದ ಚಂದ್ರಕಾಂತ ಗೊಬ್ಬೂರಕರ್ ಮಾತನಾಡಿ, ಬಸವಣ್ಣನವರು ತಮ್ಮ ಶ್ರೇಷ್ಠ ಚಿಂತನೆಗಳ ಮೂಲಕ ಶೋಷಿತರು, ಮಹಿಳೆಯರು ಸಮಾಜದ ಮುಖ್ಯವಾಹಿನಿಗೆ ಬರಲು ಕಾರಣರಾದರು. ಅವರು ಅಂದು ಸ್ಥಾಪಿ ಸಿದ ಅನುಭವ ಮಂಟಪದ ಮಾದರಿಯೇ ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆ. ಅವರ ತತ್ವ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ಎಂದರು.

ಬಿಜೆಪಿ ಅಧ್ಯಕ್ಷ ನಿಂಗಣ್ಣ ಹುಳಗೋಳಕರ್ ಮಾತನಾಡಿ, ವಿಶ್ವದ ಪ್ರಥಮ ಪ್ರಜಾಸತ್ತಾತ್ಮಕ ಸಂಸ್ಥೆಯೆಂದೇ ಕರೆಯಲ್ಪಡುವ ಅನುಭವ ಮಂಟಪದ ಪರಿಕಲ್ಪನೆಯನ್ನು ಸಾಕಾರಗೊಳಿಸಿದವರು ಬಸವಣ್ಣನವರು ಎಂದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ದೀನೆಶ ಗೌಳಿ, ದೇವದಾಸ ಜಾಧವ, ಉಪಾಧ್ಯಕ್ಷರಾದ ಮಹದೇವ ಗೊಬ್ಬೂರಕರ, ಸಿದ್ರಾಮ ಕಂಸಾಳೆ, ಸದಾನಂದ ಕುಂಬಾರ, ಶಶಿಕಲಾ ಸಜ್ಜನ, ಜಯಶ್ರೀ ಸೂಡಿ, ಪಾರ್ವತಿ ಪವಾರ, ಪದ್ಮಾ ಕಟಕೆ, ಅರುಣ ಪಟ್ಟಣಕರ, ಸೂರ್ಯಕಾಂತ ವಾರದ, ಅನೀಲ ಬೋರಗಾಂವಕರ, ಬಸವರಾಜ ಬಿರಾದಾರ, ಸೈಬಣ್ಣ ಬೆಳಗುಂಪಿ, ತಿಮ್ಮಣ್ಣ ಕುರ್ಡೆಕರ, ಶ್ರೀಧರ ಜೋಶಿ, ಸಂಜಯ ಕೋರೆ, ಸಂತೋಷ ಪಾಟೀಲ, ನಾಗರಾಜ ಮೆಲಗಿರಿ, ಅಪ್ಪಾರಾವ ನಾಗಶೆಟ್ಟಿ, ಯಲ್ಲಪ್ಪ ದಂಡಗುಲಕರ, ಜಗದೇವ ಸುಬೆದಾರ, ಶ್ರೀನಿವಾಸ ದಂಡಗುಲಕರ, ತಿಪ್ಪಣ್ಣ ನಾಟಿಕಾರ, ದತ್ತಾತ್ರೇಯ ಗಂಟಿ, ಶಂಕರ ಭಗಾಡೆ, ನಾಗರಾಜ ಮುದ್ನಾಳ, ಮೊಹನ ಹಳ್ಳಿ, ರೇವಣಸಿದ್ದ ಮತ್ತಿಮಡು, ಅಂಬರೀಷ ಕಲ್ಯಾಣಿ, ವಿನೋದ ಕಟ್ಟಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ದೇವದಾಸ ಜಾಧವ ಸ್ವಾಗತಿಸಿ ನಿರೂಪಿಸಿದರು. ದಿನೇಶ ಗೌಳಿ ವಂದಿಸಿದರು.

emedialine

Recent Posts

ಕಲಬುರಗಿ: ನೂತನ ಗ್ರಂಥಾಲಯ ಉದ್ಘಾಟನೆ

ಕಲಬುರಗಿ: ಕಲ್ಯಾಣ ಕರ್ನಾಟಕ ವಿಭಾಗದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾದ ಮಾರ್ಗದರ್ಶಿ ತರಬೇತಿ ಕೇಂದ್ರ ಕಲಬುರಗಿಯಲ್ಲಿ ನೂತನ ಗ್ರಂಥಾಲಯವನ್ನು…

1 hour ago

ಬಸವ ಜಯಂತಿ ಆಚರಣೆ ಅಂಗವಾಗಿ ಹುಣಸಗಿಯಲ್ಲಿ ಪೂರ್ವಭಾವಿ ಸಭೆ

ಸುರಪುರ: ಕಳೆದ ಒಂದುವರೆ ತಿಂಗಳಿನಿಂದ ರಾಜ್ಯದಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಲ್ಲಿರುವ ಕಾರಣ ಸರಕಾರ ದಿಂದ ಸಾಂಸ್ಕøತಿಕ ನಾಯಕ ವಿಶ್ವಗುರು ಬಸವಣ್ಣನವರ…

3 hours ago

ಹುಣಸಿಹೊಳೆ: ಕಣ್ವಮಠದಲ್ಲಿ ಯತಿತ್ರಯರ ಆರಾಧನೆ ಜೂನ್ 22 ರಿಂದ ಜುಲೈ 3ರ ವರೆಗೆ

ಸುರಪುರ: ಕಣ್ವಮಠದ ಯತಿಗಳಾದ ವಿದ್ಯಾ ತಪೋನಿಧಿ ತೀರ್ಥರ ಆರಾಧನೆ ಜೂನ್ 22 ರಿಂದ 24 ರವರೆಗೆ, ವಿದ್ಯಾಮನೋಹರ ತೀರ್ಥರ ಆರಾಧನೆ…

3 hours ago

ಆರ್ಟ್ ಆಫ್ ಲಿವಿಂಗ್ ಮಕ್ಕಳಿಗಾಗಿ ಯೋಗ ತರಬೇತಿ 23ಕ್ಕೆ

ಸುರಪುರ: ಶ್ರೀ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಯಾದಗಿರಿ ಜಿಲ್ಲೆ ವತಿಯಿಂದ ಬೇಸಿಗೆ ಸಂದರ್ಭದಲ್ಲಿ ಮಕ್ಕಳಿಗಾಗಿ ಯೋಗ…

3 hours ago

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

4 hours ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

7 hours ago