ಬಿಸಿ ಬಿಸಿ ಸುದ್ದಿ

ಬಸವಣ್ಣನವರ ತತ್ವ ಸಿದ್ದಾಂತ ಪಾಲನೆಯಿಂದ ಬದುಕು ಸಾರ್ಥಕ

ಚಿತ್ತಾಪುರ: ಅಸಂಖ್ಯಾತ ಬಸವ ಅಭಿಮಾನಿಗಳು ಎತ್ತುಗಳ ಮೆರವಣಿಗೆ ಮಾಡುವ ಮೂಲಕ ಅದ್ದೂರಿಯಾಗಿ ಬಸವ ಜಯಂತಿಯನ್ನು ಆಚರಣೆ ಆಚರಿಸಲಾಯಿತು.

ತಾಲೂಕಿನ ಕರದಳ್ಳಿ ಗ್ರಾಮದಲ್ಲಿ 12ನೇ ಶತಮಾನದ ಕಾಯಕಯೋಗಿ, ಜಗಜ್ಯೋತಿ ಬಸವೇಶ್ವರರ 891ನೇ ಜಯಂತೋತ್ಸವ ಅಂಗವಾಗಿ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಬಸವ ಜಯಂತೋತ್ಸವ ಸಮಿತಿಯಿಂದ ಮತ್ತು ಗ್ರಾಮದ ಮುಖಂಡರಿಂದ ಪೂಜೆ ಸಲ್ಲಿಸಿ ಮತ್ತು ಎತ್ತುಗಳಿಗೆ ಪೂಜೆ ಸಲ್ಲಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ದೂರಿಯಾಗಿ ಮೆರವಣಿಗೆ ಮಾಡುವ ಮೂಲಕ ಸಡಗರ ಸಂಭ್ರಮದಿಂದ ಜಯಂತೋತ್ಸವ ಆಚರಣೆ ಮಾಡಿದರು.

ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಸಮಿತಿಯ ಮುಖಂಡ ಅಯ್ಯಣ್ಣಗೌಡ ಬಿ ಪಾಟೀಲ್ ಮಾತನಾಡಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಸವಣ್ಣನವರ ಜಯಂತಿಯನ್ನು ಸರ್ವ ಜನಾಂಗದವರು ಒಟ್ಟಿಗೆ ಸೇರಿ ಆಚರಣೆ ಮಾಡುತ್ತಿರುವುದು ಗ್ರಾಮದ ಹಿರಿಮೆ ಹೆಚ್ಚಿಸಿದಂತಾಗಿದ್ದು ಸಮಾಜದ ಎಲ್ಲಾ ಯುವಕರು 12ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಾಮಾಜಿಕ ಕಳಕಳಿ ಹುಟ್ಟಿಸಿದ ಬಸವಣ್ಣನವರ ತತ್ವ ಸಿದ್ದಾಂತಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು,ಅಲ್ಲದೆ ಬಸವಣ್ಣನವರು ಕಾಯಕವೇ ಕೈಲಾಸ ಎಂದು ಹೇಳಿದಂತೆ ನಾವೇಲ್ಲರೂ ಕಾಯಕಯೋಗಿ ಗಳಾಗಬೇಕು ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ಶಶಿಧರ ದೇಶಮುಖ್,ಮಾಂತಗೌಡ ಸಂಗನ್ ಪಾಟೀಲ್,ಗುರನಾಥ ಹಿರೆಗೌಡ, ವೀರೇಶ ಭಂಕೂರ್,ಚಂದ್ರರೆಡ್ಡಿ ಬಿ ಕೋಟ್ರಕಿ, ರಾಚಯ್ಯ ಸ್ವಾಮಿ,ಬಸಣ್ಣ ರಾಮತೀರ್ಥ,ಭೀಮು ದಂಡೋತಿ,ನೀಲಕಂಠ ಮಲಕೂಡ್,ಶಂಕ್ರಯ್ಯ ಸ್ವಾಮಿ ಪತ್ರಿ, ಹಣಮಂತ ಗುತ್ತೆದಾರ,ಸಂಗಣ್ಣ ಇಂಗಳಗಿ,ಶರಣಗೌಡ ಅಲ್ಲೂರ,ಮಲ್ಲಪ್ಪ ಕೋಟ್ರಕಿ,ಸಿದ್ದಣ್ಣ ಕೋಟ್ರಕಿ,ರಾಜಣ್ಣ ಕರದಾಳ,ನರಸಣ್ಣ ಬಾನರ್,ಶಂಬುಲಿಂಗ ವಿಶ್ವಕರ್ಮ, ಸದಾಶಿವ,ಚಂದ್ರಾಮಪ್ಪ ಮಾಕಪ್,ರಾಜಣ್ಣ ಕರದಾಳ ಸೇರಿದಂತೆ ಅನೇಕ ಮುಖಂಡರು ಇದ್ದರು.

emedialine

Recent Posts

ಜಾನಪದ ಜೀವನ ಮೌಲ್ಯಗಳ ಪ್ರತೀಕ

ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…

6 hours ago

ಸುರಪುರ:ನೂತನ ಮರಗಮ್ಮ ದೇವಿ ರಜತ ಮೂರ್ತಿ ಪ್ರತಿಷ್ಠಾಪನೆ

ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…

6 hours ago

ಜುಲೈ 8 ರಂದು ಕಾಳಗಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…

8 hours ago

ವಾಡಿ: “ತಾಯಿ ಹೆಸರಲ್ಲಿ ಒಂದು ಸಸಿ” ಅಭಿಯಾನ

ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…

8 hours ago

ವಾಡಿ: ಶ್ಯಾಮ್‌ ಪ್ರಸಾದ್ ಮುಖರ್ಜಿ ಜಯಂತಿ, ಬಾಬು ಜಗಜೀವನ್ ರಾಮ್ ಪುಣ್ಯಸ್ಮರಣೆ

ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…

8 hours ago

ನಾಳೆ ವಾಡಿಯಲ್ಲಿ ಕವಿಗೋಷ್ಠಿ

ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…

9 hours ago