ವಿವಿಧ ಬೇಡಿಕೆಗಳ ಈಡೇರಿಕೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ (ಬಣ) ಆಗ್ರಹಿಸಿ ಪ್ರತಿಭಟನೆ

0
25

ಚಿತ್ತಾಪುರ : ರೈತರ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ನೀಡಬೇಕು, ಹಾಗೂ ಪ್ರತಿಯೊಂದು ಗ್ರಾಮ ಪಂಚಾಯತಿಯಲ್ಲಿ ಖರೀದಿ ಕೇಂದ್ರಗಳು ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ (ಬಣ) ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ (ಬಣ) ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಪಟ್ಟಣದ ಪ್ರಮುಖ ಬೀದಿಗಳಿಂದ ಕರವೇ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ಸಂಚಾರಿಸಿ ತಹಸೀಲ್ ಕಾರ್ಯಾಲಯಕ್ಕೆ ತಲುಪಿ ತಹಸೀಲ್ದಾರ ಮೂಲಕ ಮನವಿ ಪತ್ರ ಸಲ್ಲಿಸಿದರು.ನಂತರ ಕರವೇ ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನ ಅಲ್ಲೂರಕರ್ ಮಾತನಾಡಿ ಇಷ್ಟು ವರ್ಷದ ಬಳಿಕವೂ ರೈತರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಲ್ಲಿ ಸರ್ಕಾರಗಳು ಹಾಗೂ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ, ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು ರೈತಾಪಿ ಜನ ಸಂಕಷ್ಟದಲ್ಲಿ ಸಿಲುಕಿದ್ದಾರೆ ಹಾಗೂ ವೈಯಕ್ತಿಕ ಸಮಸ್ಯೆಗಳಿಂದ ಕೂಡಿದ್ದು ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಇದನ್ನು ತಪ್ಪಿಸಲು ಸರಕಾರವು ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ಖರೀದಿ ಕೇಂದ್ರಗಳನ್ನು ಸ್ಥಾಪನೆ ಮಾಡಬೇಕು ಮತ್ತು ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಂಬಲ ಬೆಲೆ ನೀಡಬೇಕು ಎಂದು ಆಗ್ರಹಿಸಿದರು.

Contact Your\'s Advertisement; 9902492681

ಸಂದರ್ಭದಲ್ಲಿ ತಾಲೂಕು ಘಟಕದ ಕಾರ್ಯದರ್ಶಿ ಪರಮೇಶ್ವರಿ ಜಳಕಿ, ದಂಡೋತಿ ಗ್ರಾಮ ಘಟಕದ ಅಧ್ಯಕ್ಷ ಸಂತೋಷ್, ಪ್ರಧಾನ ಕಾರ್ಯದರ್ಶಿ ಮಹಾದೇವ ತೆಲುಗುರ, ಶಿವಕುಮಾರ್ ಸುಣಗಾರ , ವೀರೇಂದ್ರ ವಿಶ್ವಕರ್ಮ, ಲಿಂಗ ಬಸವ ಟೆಂಗಳಿ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here