ಬಿಸಿ ಬಿಸಿ ಸುದ್ದಿ

ಪ್ರೀತಿಯ ಪ್ರವಾಹ ಹರಿಸಿದ ಸಂಕಲನಗಳು: ಡಾ.ಅಂಬುಜಾ ಮಳಖೇಡಕರ್ ರಚಿತ ಐದು ಪುಸ್ತಕಗಳ ಲೋಕಾರ್ಪಣೆ

ಕಲಬುರಗಿ : ಕಾರಣಾಂತರಗಳಿಂದ ಪ್ರೀತಿಸುವ ಮನಸುಗಳಿಗಿಂತ ಮನುಷ್ಯತ್ವದ ಹಿನ್ನೆಲೆಯ ಪ್ರೀತಿ ದೊಡ್ಡದು ಎಂದು ಧಾರವಾಡದ ಹಿರಿಯ ಕಲಾವಿದ ಡಾ.ಶಶಿಧರ ನರೇಂದ್ರ ಹೇಳಿದರು.

ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಸಭಾಂ ಗಣದಲ್ಲಿ ಭಾನುವಾರ ಸೇಡಂನ ಸಂಸ್ಕೃತಿ ಪ್ರಕಾಶನ ಆಯೋಜಿಸಿದ್ದ ಸಮಾರಂಭದಲ್ಲಿ ಡಾ. ಅಂಬುಜಾ ಮಳಖೇಡಕರ್ ರಚಿಸಿದ ಐದು ಪುಸ್ತಕಗಳನ್ನು ಲೋಕಾರ್ಪಣೆ ಮಾಡಿ, ಅವರು ಮಾತನಾಡಿದರು.

ಕೇವಲ ಪದಗಳ ಜೋಡಣೆ ಕಾವ್ಯ ವಾಗಲಾರದು. ಬದಲಿಗೆ ಧ್ವನಿಪೂರ್ಣವಾದ ಮಾತುಗಳೇ ಕಾವ್ಯವಾಗುತ್ತದೆ. ಡಾ.ಅಂಬುಜಾ ಅವರ ಎಲ್ಲ ಕವನಗಳಲ್ಲಿ ಈ ರೀತಿಯ ಸಾಲುಗಳು ಹೇರಳವಾಗಿವೆ ಎಂದರು.

ಡಾ.ಅಂಬುಜಾ ಮಳಖೇಡಕರ್ ರಚಿಸಿದ ‘ ಗೊಂಬೆಯ ಜೀವನ, ಕೃತಿಯನ್ನು ಕನ್ನಡ ಉಪನ್ಯಾಸಕಿ ಡಾ.ವಿದ್ಯಾವತಿ ಪಾಟೀಲ ಪರಿಚಯಿಸಿದರು.

ಮನ ಹರಿ ಧ್ಯಾನ ಮಂದಿರ, ದಡ ಸೇರಿಸೆನ್ನ ಹರಿಯೇ ಕೃತಿಗಳನ್ನು ಕವಯತ್ರಿ ಕಾವ್ಯಶ್ರೀ ಮಹಾಗಾಂವ ಪರಿಚಯಿಸಿದರು.

ಪ್ರೇಮ ಪದನಿಸ ಕೃತಿಯನ್ನು ಉಪನ್ಯಾಸಕ ಡಾ.ಎಂ.ಬಿ.ಕಟ್ಟಿ ಪರಿಚಯಿದರು. ರಾಜನ ನಂಟು ಕನ್ನಡಿಯ ಗಂಟು ಕೃತಿಯನ್ನು ಪತ್ರಕರ್ತ ಮಹಿಪಾಲರೆಡ್ಡಿ ಮುನ್ನೂರ ಪರಿಚಯಿಸಿದರು.

ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ರಾಜೇಂದ್ರ ಬಿ.ಕೊಂಡ ಅಧ್ಯಕ್ಷತೆ ವಹಿಸಿದ್ದರು.

ಪುಸ್ತಕಗಳನ್ನು ಪ್ರಕಟಿಸಿದ ಸೇಡಂನ ಸಂಸ್ಕೃತಿ ಪ್ರಕಾಶನದ ಸಂಚಾಲಕ ಪ್ರಭಾಕರ ಜೋಶಿ ಮಾತನಾಡಿ, ತಾಲೂಕು ಕೇಂದ್ರವೊಂದರಲ್ಲಿದ್ದುಕೊಂಡು ನೂರಾರು ಕೃತಿಗಳನ್ನು ಪ್ರಕಟಿಸುವ ಮೂಲಕ ಹಲವಾರು ಯುವ ಲೇಖಕರಿಗೆ ವೇದಿಕೆಯನ್ನು ಒದಗಿಸಿದೆ ಎಂದರು.

ಕವಯತ್ರಿ ಡಾ.ಅಂಬುಜಾ ಮಳಖೇಡಕರ್ ಅನಿಸಿಕೆಗಳನ್ನು ವ್ಯಕ್ತಪಡಿಸಿದರು. ಆರ್.ಜೆ.ಮಂಜು ನಿರೂಪಿಸಿದರು.

ಸಮಾರಂಭದಲ್ಲಿ ಹಿರಿಯ ಕವಿಗಳಾದ ಎ.ಕೆ.ರಾಮೇಶ್ವರ, ಡಾ.ನಾಗೇಂದ್ರ ಮಸೂತಿ, ಡಾ.ಚಿ.ಸಿ.ನಿಂಗಣ್ಣ, ಬಿ.ಎಚ್. ನಿರಗುಡಿ, ಅಂಬಾರಾಯ ಕೋಣಿನ್, ಸತಾಳಕರ್, ಸಂಜೀವ ಸಿರನೂರಕರ್, ರವೀಂದ್ರ ಇಂಜಳ್ಳೀಕರ್, ಸಿದ್ದಪ್ಪ ತಳ್ಳಳ್ಳಿ, ಮಳಖೇಡಕರ್ ಪರಿವಾರದ ಸದಸ್ಯರು ಭಾಗವಹಿಸಿದ್ದರು.

emedialine

Recent Posts

ಕಲಬುರಗಿ ಕೆಬಿಎನ್ ಆಸ್ಪತ್ರೆಯಲ್ಲಿ ವಿಶೇಷ ಉಪನ್ಯಾಸ

ಕಲಬುರಗಿ : ಸ್ಥಳೀಯ ಕೆಬಿಎನ್ ಆಸ್ಪತ್ರೆಯಲ್ಲಿ ಸ್ತ್ರೀ ರೋಗ ವಿಭಾಗದಿಂದ 'ಸ್ತ್ರೀರೋಗ ಶಾಸ್ತ್ರದ ಆಂಕೊಲಾಜಿಯಲ್ಲಿ ರೋಬೋಟಿಕ್ ಶಸ್ತ್ರಚಿಕಿತ್ಸೆಯ' ಪಾತ್ರ ಎಂಬ…

20 mins ago

ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ವೈದ್ಯರ ಸಲಹೆ ಅವಶ್ಯಕ: ಡಾ.ಪಿ.ಎಸ್.ಶಂಕರ್

ಕಲಬುರಗಿ:  ಸಮಾಜದಲ್ಲಿ ಪ್ರತಿಯೊಬ್ಬರೂ ಆರೋಗ್ಯವಂತರಾಗಿ ಜೀವನ ಸಾಗಿಸಲು ವೈದ್ಯರ ಸಲಹೆ ಮತ್ತು ಉಪಚಾರ ಪಡೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಖ್ಯಾತ ವೈದ್ಯಸಂಶೋಧಕ…

23 mins ago

ವಿಕಲಚೇತನರು, ಹಿರಿಯ ನಾಗರಿಕರ ಹೆಸರಲ್ಲಿ ಅಕ್ರಮ: ಕ್ರಮಕ್ಕೆ ಆಗ್ರಹ

ಕಲಬುರಗಿ: ಜಿಲ್ಲೆಯ ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ವ್ಯಾಪಕ ಅಕ್ರಮಗಳು ನಡೆದಿದ್ದು ಈ ಕುರಿತು ಕೂಡಲೇ ತನಿಖೆ…

26 mins ago

ಕಾಳಗಿ; ರಟಕಲ್ ಗ್ರಾಮದಲ್ಲಿ ಬಸವಾದಿ ಶರಣರ ವಚನ ಸಂಗಮಕ್ಕೆ ಅದ್ಧೂರಿ ಚಾಲನೆ

ಕಾಳಗಿ: ಬದುಕು ಹೇಗೆ ನಡೆಸಬೇಕೆಂದು ಹೇಳಿಕೊಟ್ಟ ಬಸವಾದಿ ಶರಣರ ವಚನದಲ್ಲಿ ಅಪಾರ ಶಕ್ತಿ ಇದೆ. 12 ನೇ ಶತಮಾನದಲ್ಲಿ ಮೊದಲ…

1 hour ago

ಕೃಷ್ಣ ಮಂದಿರದಲ್ಲಿ ಪಲಿಮಾರು ಮಠದ ಸಂಸ್ಥಾನ ಪೂಜೆ

ಕಲಬುರಗಿ; ಅಖಿಲ ಭಾರತ ಮಾಧ್ವ ಮಹಾಮಂಡಲ,ಶ್ರೀ ಜಯತೀರ್ಥ ವಿದ್ಯಾರ್ಥಿ ನಿಲಯ, ಶ್ರೀ ಕೃಷ್ಣ ಮಂದಿರ ಹಾಗು ಹನುಮ ಭೀಮ ಮಧ್ವರ…

2 hours ago

ಚಿಂಚೋಳಿ: ವೈದ್ಯಕೀಯ ದ್ರವ ಆಮ್ಲಜನಕ ಸೋರಿಕೆ ಬಗ್ಗೆ ಡಿ.ಎಚ್.ಓ ಸ್ಪಷ್ಟನೆ

ಕಲಬುರಗಿ: ಚಿಂಚೋಳಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ದ್ರವ ಆಮ್ಲಜನಕ ಟ್ಯಾಂಕ್ ಸ್ಪೋಟವಾಗಿದೆ ಎಂದು ಸುಳ್ಳು ಸುದ್ದಿ ಬಿತ್ತರವಾಗುತ್ತಿದ್ದು, ಇದಕ್ಕೆ…

5 hours ago