ರೈತನ ತಾಳ್ಮೆ, ಸೈನಿಕರ ತ್ಯಾಗ ಸಮೃದ್ಧ ರಾಷ್ಟ್ರದ ಬುನಾದಿಯಾಗಿದೆ

ಕಲಬುರಗಿ: ದೇಶಕ್ಕೆ ಅನ್ನ ನೀಡುವ ರೈತನ ತಾಳ್ಮೆ, ಗಡಿ ಕಾಯುವ ಸೈನಿಕರ ತ್ಯಾಗದ ಮನೋಭಾವವೇ ಸಮೃದ್ಧ ರಾಷ್ಟ್ರದ ಬುನಾದಿಯಾಗಿದೆ ಎಂದು ಮಾಜಿ ಸೈನಿಕರಾದ ಶಾಂತಯ್ಯ ಸ್ವಾಮಿ ಗೊಬ್ಬುರ ಹೇಳಿದರು.

ನಗರದ ಭವಾನಿ ನಗರದ ಬಬಲಾದ ಮಠದಲ್ಲಿ 211ನೇ ಶಿವಾನುಭವಗೋಷ್ಠಿ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುತ್ತಾ ಆತುರದಿಂದ ಏನನ್ನು ಸಾದಿಸಲಾಗದು, ಅದೇ ರೀತಿ ಒತ್ತಾಯದಿಂದ ಏನನ್ನು ಪಡೆಯಲಾಗದು ಜೀವನದಲ್ಲಿ ತಾಳ್ಮೆ ಸಹನೆಯಿಂದ ಜೀವನ ಸಾಗಿಸಿದರೆ ಪರರಿಗೆ ಆದರ್ಶವಾಗುವ ಜೀವನ ನಮ್ಮದಾಗುತ್ತದೆ ಎಂದು ಮಾರ್ಮಿಕವಾಗಿ ನುಡಿದರು.

ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತರಾದ ಸಿದ್ದಣಗೌಡ ಮಾಲಿ ಪಾಟೀಲ ಕಣ್ಣಿ ಮಾತನಾಡುತ್ತಾ ಸಂವಿಧಾನದ ನಾಲ್ಕನೇ ಅಂಗವಾದ ಪತ್ರಿಕಾ ರಂಗವೂ ದೇಶದ ಸ್ವಾತಂತ್ರ್ಯ ಪಡೆಯಲು ಬಹು ಮುಖ್ಯವಾದ ಪಾತ್ರವಹಿಸಿದೆ, ಅದೇ ರೀತಿ ಇಂದಿನ ಸಂದರ್ಭದಲ್ಲಿ ಸ್ವಾತಂತ್ರ್ಯ ಉಳಿಸಿಕೊಳ್ಳಲು, ಜೊತೆಗೆ ಸರ್ವರಿಗೂ ಸಮಾನವಾದ ಸ್ವಾತಂತ್ರ್ಯ ಸಿಗುವುದಕ್ಕಾಗಿ ಪತ್ರಕರ್ತರ ಕಾರ್ಯ ಬಹು ಮುಖ್ಯವಾಗಿದೆ. ಸಮಾಜದ ನಿಜವಾದ ಸ್ಥಿತಿ ಬರವಣಿಗೆಯ ಮೂಲಕ ಜನರಿಗೆ ಪ್ರಾಮಾಣಿಕವಾಗಿ ಮುಟ್ಟಿಸುವ ಕಾರ್ಯ ಪತ್ರಕರ್ತರಿಂದ ಆಗಲೆಂದು ಹೇಳಿದರು.

ಶ್ರೀಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಗುರುಪಾದಲಿಂಗ ಮಹಾಸ್ವಾಮಿಗಳು ಸಾನಿಧ್ಯ ವಹಿಸಿದರು. ಕು. ಶ್ರೇಯಾ ಹಾಗೂ ಸ್ನೇಹಾ ವಿಶ್ವಕರ್ಮ ಪ್ರಾರ್ಥಿಸಿದರು. ನ್ಯಾಯವಾದಿ ಹಣಮಂತರಾಯ ಅಟ್ಟೂರ ಸ್ವಾಗತಿಸಿದರು.

ಸಂಗಮೇಶ ಹೂಗಾರ ನಿರೂಪಿಸಿ, ವಂದಿಸಿದರು. ಕಾರ್ಯಕ್ರಮದಲ್ಲಿ ವಿಠಲರಾವ ಮಾಸ್ಟರ ಗೋಗಿ, ರೇವಣಸಿದ್ದಯ್ಯ ಶಾಸ್ತ್ರಿ, ಓಂ ಹಿರೇಮಠ, ಶಾಂತಲಿಂಗ ಕಲಬುರಗಿ, ಶರಣು ವರನಾಳ, ನಿರ್ಮಲಾ ಮಠಪತಿ, ಈರಮ್ಮ ಮಠಪತಿ, ಭಾಗ್ಯಶ್ರೀ ಡೊಂಗರಗಾಂವ, ಲಕ್ಷ್ಮೀಬಾಯಿ ಪೂಜಾರಿ, ಪಾರ್ವತಿ ಕುರಕೋಟಿ, ನೀಲಮ್ಮ ಸುತಾರ, ಮಾಣಿಕ ಗುತ್ತೇದಾರ, ಗುರುರಾಜ ಹಸರಗುಂಡಗಿ,ಪರಮೇಶ್ವರ ಕಣಮುಸ, ಶ್ರೀಕಾಂತ ಪಾಟೀಲ ಸೇರಿದಂತೆ ಅನೇಕ ಜನ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪತ್ರಕರ್ತರಿಗೂ ಮಾಜಿ ಸೈನಿಕರಿಗೂ ಶ್ರೀಮಠದ ವತಿಯಿಂದ ಗೌರವಿಸಲಾಯಿತು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

1 hour ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

1 hour ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

1 hour ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

1 hour ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

1 hour ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

1 hour ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420