ಛಾಯಾಚಿತ್ರ ಗ್ರಾಹಕರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಸುರಪುರ: ಬೆಂಗಳೂರಲ್ಲಿ ಮದುವೆ ಕಾರ್ಯಕ್ರಮದಲ್ಲಿ ಫೋಟೊ ತೆಗೆಯುತ್ತಿದ್ದ ಫೋಟೊಗ್ರಾಫರ್ ಮೇಲೆ ಹಲ್ಲೆ ಮಾಡಿರುವ ಘಟನೆ ಖಂಡಿಸಿ ನಗರದಲ್ಲಿ ತಾಲೂಕು ಛಾಯಾಚಿತ್ರ ಗ್ರಾಹಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸಂಘದ ತಾಲೂಕು ಅಧ್ಯಕ್ಷ ನಾಗರಾಜ ಆಲದರ್ತಿ ನೇತೃತ್ವದಲ್ಲಿ ನಗರದ ಮಹಾತ್ಮ ಗಾಂಧಿ ವೃತ್ತ ದಿಂದ ತಹಸಿಲ್ದಾರ್ ಕಚೇರಿ ವರೆಗೆ ಪ್ರತಿಭಟನೆ ಅಂಗವಾಗಿ ಬೈಕ್ ರ್ಯಾಲಿ ನಡೆಸಿ,ನಂತರ ತಹಸಿಲ್ದಾರ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮಾತನಾಡಿ,ಬೆಂಗಳೂರಿನ ಶಿವಾಜಿನಗರದ ಶ್ಯಾಮ್ಸ್ ಕಲ್ಯಾಣ ಮಂಟಪದಲ್ಲಿ ನಡೆದ ಮದುವೆ ಕಾರ್ಯಕ್ರಮದಲ್ಲಿ ನಮ್ಮ ಛಾಯಾಚಿತ್ರ ಗ್ರಾಹಕರು ಮದುವೆ ಕಾರ್ಯದ ಫೋಟೊ ತೆಗೆಯುವ ಸಂದರ್ಭದಲ್ಲಿ ಅಲ್ಲಿರುವ ಕೆಲವು ಜನ ಕಿಡಿಗೇಡಿಗಳು ಫೋಟೊ ಗ್ರಾಫರ್ ತಮ್ಮ ಫೋಟೊ ತೆಗೆದರು ಎನ್ನುವ ಆರೋಪದ ಮೇಲೆ ಅವರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯವಾಗಿದೆ.ಕೂಡಲೇ ಸರಕಾರ ಹಲ್ಲೆ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ರಾಜ್ಯದಲ್ಲಿ ಮತ್ತೆ ಛಾಯಾಚಿತ್ರ ಗ್ರಾಹಕರ ಮೇಲೆ ಈ ರೀತಿಯ ಹಲ್ಲೆ ನಡೆಯದಂತೆ ಕ್ರಮ ಕೈಗೊಳ್ಳುವ ಜೊತೆಗೆ ಫೋಟೊ ಗ್ರಾಫರ್‍ಗಳಿಗೆ ಭದ್ರತೆ ನೀಡಬೇಕು ಎಂದು ಆಗ್ರಹಿಸಿದರು.

ನಂತರ ಮುಖ್ಯಮಂತ್ರಿಗೆ ಬರೆದ ಮನವಿಯನ್ನು ತಹಸಿಲ್ದಾರ್ ಕಚೇರಿ ಸಿರಸ್ತೆದಾರ ಮೂಲಕ ಸಲ್ಲಿಸಿದರು.ಪ್ರತಿಭಟನೆಯಲ್ಲಿ ಸಂಘದ ತಾ.ಪ್ರ.ಕಾರ್ಯದರ್ಶಿ ಅಂಬರೇಶ ಬಿರಾದಾರ,ಶ್ರೀಕಾಂತ ತೋಟದ,ಲಕ್ಷ್ಮಣ ತೋಟದ,ಝಮೀರ,ಸಚ್ಚಿ ಕರ್ನಾಳ,ಪ್ರಕಾಶ ಬಡಿಗೇರ,ಪ್ರದೀಪ ಬಿರಾದಾರ,ಮಿರ್ಜಾ ಅಬುಬಕರ್,ಸುಭಾನ ಅನ್ಸಾರಿ,ಅವಿನಾಶ ಎಲಿಗಾರ,ಶೇಖ್ ಅಹ್ಮದ್,ಇಸ್ಮಾಯಿಲ್,ಗೌತಮ್,ಸಾಲಾರ ಮಸೂದ್,ರಂಗನಾಥ,ಅರುಣಕುಮಾರ,ಸುಧಾಕರ,ವಿರೇಶ ಅಸಗಳ್ಳಿ,ಮರುಳಿಧರ ಅಂಬುರೆ ಸೇರಿದಂತೆ ಅನೇಕರಿದ್ದರು.

emedialine

Recent Posts

ಮಣಿಕಂಠ ರಾಠೋಡ ಆರೋಪ ಸತ್ಯಕ್ಕೆ ದೂರ | ಅಕ್ರಮ‌ವಾಗಿ ಅಕ್ಕಿ ಸಾಗಾಟವಾಗಿಲ್ಲ: ಆಹಾರ ಇಲಾಖೆ ಸ್ಪಷ್ಟನೆ

ಕಲಬುರಗಿ: ಕಳೆದ‌ ಅಕ್ಟೋಬರ್ 2 ರಂದು‌ ನಗರದ ಹೊರವಲಯದ ನಂದೂರ ಕೈಗಾರಿಕಾ ಪ್ರದೇಶದ ದಾಲ್ ಮಿಲ್ ವೊಂದರಲ್ಲಿ ಅಕ್ರಮ ಅಕ್ಕಿ…

10 hours ago

ರುಕ್ಮಾಪುರ: ಶ್ರೀ ದೇವಿ ಪಾರಾಯಣ ನಾಳೆಯಿಂದ

ಸುರಪುರ: ತಾಲೂಕಿನ ರುಕ್ಮಾಪುರ ಗ್ರಾಮದ ಬಣಗಾರ ಮನೆಯಲ್ಲಿ ಬನ್ನಿಮಹಾಂಕಾಳಿ ನವರಾತ್ರಿ ಉತ್ಸವದ ಅಂಗವಾಗಿ ೪೪ನೇ ವರ್ಷದ ಶ್ರೀ ದೇವಿ ಪಾರಾಯಣ…

13 hours ago

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

17 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

18 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

20 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

1 day ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420