ಬಿಸಿ ಬಿಸಿ ಸುದ್ದಿ

ಕಲಬುರಗಿ: ಸೂಫಿ ಸಂತ ಹಜರತ್ ಖ್ವಾಜಾ ಬಂದಾ ನವಾಜ್ (ರ.ಅ) 620ನೇ ಉರುಸ್ ಮೇ 24 ರಿಂದ ಆರಂಭ

ಕಲಬುರಗಿ: ಪ್ರಸಿದ್ಧ ಸೂಫಿ ಸಂತ ಸೌಹಾರ್ದತೆ ಮತ್ತು ಭಾವೈಕ್ಯತೆಯ ಸಂಕೇತವಾಗಿರುವ ಹಜರತ್ ಖ್ವಾಜಾ ಬಂದಾ ನವಾಜ್ ಗೇಸುದರಾಜ್ (ರ.ಅ) ಅವರ 620ನೇ ಉರುಸ್ ಇದೇ ಮೇ 24, 25 ಮತ್ತು 26ರವೆಗೆ ಜರುಗಲಿದೆ ಎಂದು ದರ್ಗಾದ ಪೀಠಾಧಿಪತಿಗಳಾದ ಹಜರತ್ ಸೈಯದ್ ಶಾ ಖುಸ್ರೋ ಹುಸೈನಿ ತಿಳಿಸಿದ್ದಾರೆ.

ಶುಕ್ರವಾರ 24ದಂದು ಸಂಜೆ ಹೊತ್ತಿಗೆ ನಗರದ ಮಹೆಬೂಬ್ ಗುಲಶನ್ ಗಾರ್ಡನ್ ನಿಂದ ಗಂಧದ ಮೆರವಣಿಗೆ ಮೂಲಕ ಸೂಪರ್ ಮಾರ್ಕೆಟ್ ಮಾರ್ಗವಾಗಿ ರಾತ್ರಿ ವೇಳೆ ದರ್ಗಾಕ್ಕೆ ಗಂಧದ ಲೇಪನ ಸಂಪ್ರದಾಯ ಪೂರ್ಣಗೊಳಲಿದೆ.

25 ರಂದು ರಾತ್ರಿ ದರ್ಗಾದ ಆವರಣದಲ್ಲಿ ಸರ್ವ ಭಕ್ತರಿಂದ ಸಾಂಪ್ರದಾಯಿಕ ದೀಪಲಂಕಾರ (ಮಹಫಿಲ್ ಎ ಚಿರಾಗ್) ಕಾರ್ಯಕ್ರಮ ಜರುಗಲಿದ್ದು, ಭಾನುವಾರ 26 ರಂದು ಮಹಫಿಲ್ ಎ ಖುಲ್ ದರ್ಗಾದ ಝೀಯಾರತ್ (ದರ್ಶನ) ಕಾರ್ಯಕ್ರಮ ನಡೆಯಲಿದೆ ಎಂದು ದರ್ಗಾದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರತಿ ವರ್ಷದದಂತೆ ಈ ವರ್ಷವು 23ರ ಸಂಜೆ 7.30 ಕ್ಕೆ ದರ್ಗಾದ ಖಾಜಾ ಬಜಾರನಲ್ಲಿ, ಕೈಗಾರಿಕಾವಸ್ತು ಪ್ರದರ್ಶನ ನಡೆಯಲಿದ್ದು, ದೇಶ, ವಿದೇಶದಿಂದ ಹಾಗೂ ರಾಜ್ಯದ ಮೂಲೆ ಮೂಲೆಯಿಂದ ಆಗಮಿಸುವ ಅಪಾರ ಭಕ್ತಾದಿಗಳಿಗೆ ದರ್ಗಾ ಕಮಿಟಿ ಮತ್ತು ಜಿಲ್ಲಾಡಳಿತದ ವತಿಯಿಂದ ಸಂಪೂರ್ಣ ವ್ಯವಸ್ಥೆ ಮಾಡಲಾಗಿದೆ ಎಂದು ಪೀಠಾಧಿಪತಿಗಳು ತಿಳಿಸಿದ್ದಾರೆ.

emedialine

Recent Posts

371 (ಜೆ) ವಿಧಿಯ ನಿಬಂಧನೆಗಳ ಪರಿಣಾಮಕಾರಿ ಅನುμÁ್ಠನಕ್ಕೆ ಒತ್ತಾಯ

ಕಲಬುರಗಿ: ಹೈದ್ರಾಬಾದ್ ಕರ್ನಾಟಕ ಹೋರಾಟ ಸಮಿತಿಯು, ಬೆಂಗಳೂರಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಚುನಾಯಿತ ಪ್ರತಿನಿಧಿಗಳು ಮತ್ತು ಸಚಿವರ ಸಭೆ ನಡೆಸಿ,…

1 hour ago

ಮರಗಮ್ಮ ದೇವಿ ಮೂರ್ತಿ ಗಂಗಾಸ್ನಾನ | ಎಂಟು ಗಂಟೆಗಳ ಕಾಲ ಮೆರವಣಿಗೆ

ಸುರಪುರ: ಇಲ್ಲಿಯ ರಂಗಂಪೇಟೆ-ತಿಮ್ಮಾಪುರದ ಆರಾಧ್ಯ ದೇವತೆ ಮರಗಮ್ಮ ದೇವಿಯ ನೂತನ ಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ದೇವಿಯ ಬೆಳ್ಳಿಯ ಮೂರ್ತಿ ಗಂಗಾಸ್ನಾನ…

1 hour ago

ಒತ್ತಡ ನಿಭಾಯಿಸಲು ಪರಿಹಾರ ಒದಗಿಸುವುದು ಯುವ ಸ್ಪಂದನೆ ಉದ್ದೇಶ

ಸುರಪುರ: ಯುವ ಸಬಲೀಕರಣ, ಅರೋಗ್ಯ ಜೀವನಶೈಲಿ,ಲೈಂಗಿಕತೆ ಮತ್ತು ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ನಿಭಾಯಿಸುತ್ತಿರುವ ಸವಾಲುಗಳು, ಭಾವನಾತ್ಮಕ ಸಮಸ್ಯೆಗಳು ಭಾವನೆಗಳ ನಿಭಾಯಿಸುವಿಕೆ,ನೆನಪಿನ…

1 hour ago

ಶಹಾಬಾದ: ಸಂಪೂರ್ಣತಾ ಅಭಿಯಾನ ಉತ್ಸವಕ್ಕೆ ಚಾಲನೆ

ಶಹಾಬಾದ: ನೀತಿ ಆಯೋಗವು ಮಾನವ ಅಭಿವೃದ್ಧಿ ಸೂಚಕಗಳಲ್ಲಿ ಹಿಂದುಳಿದ ತಾಲೂಕಗಳಿಗೆ ಆರೋಗ್ಯ, ಪೆÇೀಷಣೆ, ಕೃಷಿ ಮೇಲೆ ಕೇಂದ್ರೀಕರಿಸಿದ ಸಂಪೂರ್ಣತಾ ಅಭಿಯಾನ…

1 hour ago

ಗಿಡ-ಮರಗಳ ಸಂರಕ್ಷಣೆ ಮಾಡದಿದ್ದರೇ ಪ್ರಕೃತಿಗೆ ಗಂಡಾಂತರ ತಪ್ಪಿದ್ದಲ್ಲ

ಶಹಾಬಾದ: ಕೇವಲ ಒಂದು ದಿನ ವನಮಹೋತ್ಸವ ಪರಿಸರ ದಿನಾಚರಣೆಯಂತಹ ಕಾರ್ಯಕ್ರಮ ಮಾಡಿದರೆ ಸಾಲದು, ಬದಲಾಗಿ ಗಿಡ-ಮರಗಳ ಸಂರಕ್ಷಣೆ ಮಾಡುವುದು ಅವಶ್ಯವಾಗಿದೆ.…

1 hour ago

ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮ

ಶಹಾಬಾದ: ತುಳಿತಕ್ಕೆ ಒಳಗಾದವರ ಹಾಗೂ ಬಡವರ ಪರವಾಗಿ ಕೆಲಸ ಮಾಡಿದ ದೀಮಂತ ನಾಯಕ ಬಾಬು ಜಗಜೀವನರಾಮರಾಗಿದ್ದರು ಎಂದು ಕಾರ್ಮಿಕ ಪ್ರಧಾನ…

1 hour ago