ವಂಚನೆಯ ಆರೋಪ: ಕಾಂಗ್ರೆಸ್ ಶಾಸಕ ಡಾ.ಅಜಯಸಿಂಗ್ ಮಾಜಿ ಆಪ್ತ ಸಹಾಯಕನ ಬಂಧನ

ಕಲಬುರಗಿ: ಸರಕಾರಿ ನೌಕರಿ ಹಾಗೂ ಕಾಮಗಾರಿಗಳನ್ನು ಕೊಡಿಸುತ್ತೇನೆಂದು ಹೇಳಿ ವಂಚಿಸಿದ ಕೆಕೆಆರ್ಡಿಬಿ ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್ ಧರ್ಮಸಿಂಗ್ ಅವರ ಮಾಜಿ ಆಪ್ತ ಸಹಾಯಕ ಪರಶುರಾಮ ಪಾಟೀಲ ವಿರುದ್ಧ ಮೋಸˌ ವಂಚನೆ ಮತ್ತು ನಂಬಿಕೆಯ ಉಲ್ಲಂಘನೆ (420, 406)ಕುರಿತು ಪ್ರಕರಣ ದಾಖಲಾಗಿದೆ.

2020ರಿಂದ 2024 ರವರೆಗೆ ಡಾ.ಅಜಯ್ ಧರ್ಮಸಿಂಗ್ ಅವರ ಬಳಿ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಪರಶುರಾಮ ಪಾಟೀಲ ನೆಲೋಗಿ ಇವರು ಸರಕಾರಿ ನೌಕರಿ ಹಾಗೂ ಕಾಮಗಾರಿಗಳನ್ನ ಕೊಡಿಸುವುದಾಗಿ ಹಣ ಪಡೆದು 32 ಜನ ಕಾಂಗ್ರೆಸ್ ಕಾರ್ಯಕರ್ತರಿಗೆ ವಂಚಿಸಿದ್ದಾನೆ ಎಂದು ಜೇವರ್ಗಿ ಪೊಲೀಸ್ ಠಾಣೆಗೆ ಬಂದು ವಂಚಿತರು ದೂರು ನೀಡಿದ್ದರು.

ಈ ರೀತಿಯಾಗಿ ಮೋಸಕ್ಕೊಳಗಾದ ಜನರು ಶಾಸಕರ ಬಳಿ ದೂರು ಹೇಳಿದ್ದರು. ಹಲವರ ಹಣವನ್ನು ಕೊಡಿಸುವಲ್ಲಿ ಶಾಸಕರು ಕೂಡ ಸಹಾಯ ಮಾಡಿದ್ದರು. ನಂತರ ಮಾಹಿತಿ ಪಡೆದು ಡಾ.ಅಜಯಸಿಂಗ್ ಅವರು ವರ್ಷದ ಹಿಂದೆಯೆ ಪರಶುರಾಮ ಅವರನ್ನು ಆಪ್ತ ಸಹಾಯಕ ಸ್ಥಾನದಿಂದ ತೆಗೆದುಹಾಕಿದ್ದರು.

ಮೋಸ ಹೋದವರಲ್ಲಿ ಬೀದರˌ ಕಲಬುರಗಿˌ ಸುರಪುರˌ ಜೇವರ್ಗಿ ಮತ್ತು ಯಡ್ರಾಮಿಗೆ ಸೇರಿದ ಕಾಂಗ್ರೆಸ್ ಮುಖಂಡರಿದ್ದಾರೆ. ಪೊಲೀಸರು ಪರಶುರಾಮ ಅವರನ್ನು ಬಂದಿಸಿದ್ದು ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

emedialine

Recent Posts

ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ 117 ನೇ ಜನ್ಮದಿನೋತ್ಸವ

ರಾಯಚೂರು: ಭಾರತದ ಕ್ರಾಂತಿಕಾರಿ ಶಹೀದ್ ಭಗತ್ ಸಿಂಗ್ ಅವರ 117 ನೇ ಜನ್ಮದಿನೋತ್ಸವವನ್ನು ಅಖಿಲಭಾರತ ಕ್ರಾಂತಿಕಾರಿ ವಿದ್ಯಾರ್ಥಿ ಸಂಘಟನೆ-ಎಐಆರ್ ಎಸ್…

3 hours ago

ಶಿವರಾಜ್ ಪಾಟೀಲ್ ಗೋಣಿಗಿಗೆ ಪ್ರಶಸ್ತಿ ಪ್ರದಾನ: ಸನ್ಮಾನ

ಕಲಬುರಗಿ: ರಾಜ್ಯಮಟ್ಟದ ಪ್ರಶಸ್ತಿ ಪುರಸ್ಕೃತ ಶಿವರಾಜ್ ಪಾಟೀಲ್ ಗೋಣಿಗಿ ಅವರಿಗೆ ನಗರ ರಂಗ ಮಂದಿರದಲ್ಲಿ ಶನಿವಾರ ಪೂಜ್ಯ ಹಾರಕೂಡ ಶ್ರೀಗಳು…

4 hours ago

ಕಲಬುರಗಿ: ಶ್ರೀರೇವಣಸಿದ್ದೇಶ್ವರ ಹುಂಡಿಯಲ್ಲಿ ಚಿನ್ನ, ಬೆಳ್ಳಿ 37.94 ಲಕ್ಷ ರೂ. ನಗದು ಸಂಗ್ರಹ

ಕಲಬುರಗಿ: ಇಲ್ಲಿನ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ತಾಪ್ತಿಯ ಸುಪ್ರಸಿದ್ಧ ದೇವಸ್ಥಾನದಲ್ಲಿ ಒಂದಾಗಿರುವ ರೇವಗ್ಗಿ ರಟಕಲ್ ಶ್ರೀರೇವಣಸಿದ್ದೇಶ್ವರ ದೇವಸ್ಥಾನದ ಸುಮಾರು…

6 hours ago

ಸಂಗೀತದಿಂದ ಮಾನಸಿಕ ಆರೋಗ್ಯ ಮತ್ತು ಸ್ಮರಣ ಶಕ್ತಿ ವೃದ್ಧಿ

ಕಲಬುರಗಿ: ನಗರದ ಸರ್ವಜ್ಞ ಪದವಿ ಪೂರ್ವ ವಿಜ್ಞಾನ ಮಹಾವಿದ್ಯಾಲಯ ಮತ್ತು ಬಸವ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ಯುವ ವಿದ್ಯಾರ್ಥಿಗಳಿಗೆ ಏಕಾಗ್ರತೆ…

20 hours ago

ಕಲಬುರಗಿ: ದಾರಿದೀಪ ಕಂಬಗಳು ಲೋಕಾರ್ಪಣೆ

ಕಲಬುರಗಿ : ಮಹಾನಗರ ಪಾಲಿಕೆ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆಯಡಿಯಲ್ಲಿ ಕೈಗೊಂಡ ಕಾಮಗಾರಿ ಮೋಹನ್ ಲಾಡ್ಜ ವೃತ್ತದಿಂದ ರಾಮಮಂದಿರ…

20 hours ago

ಮೂಲಭೂತ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ ಎಸ್.ಯು.ಸಿ.ಐ(ಸಿ) ಮನವಿ

ಶಹಾಬಾದ: ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು ಆಗ್ರಹಿಸಿ ಗುರುವಾರ ನಗರದ ಎಸ್.ಯು.ಸಿ.ಐ(ಸಿ)ಸ್ಥಳೀಯ ಸಮಿತಿಯ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ.ಕೆ.ಮಾನೆ ಅವರ ನೇತೃತ್ವದ…

20 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420