ಬಿಸಿ ಬಿಸಿ ಸುದ್ದಿ

ಸಜ್ಜನ ರಾಜಕಾರಣಿ ಸರಡಗಿ ಆಗಲುವಿಕೆಗೆ ಸಂಸದ ಡಾ. ಉಮೇಶ್ ಜಾಧವ್ ಸಂತಾಪ

ಕಲಬುರಗಿ: ಸಜ್ಜನ ರಾಜಕಾರಣಿ ಎಂದೇ ಖ್ಯಾತರಾದ ಮಾಜಿ ಲೋಕಸಭಾ ಸದಸ್ಯರು ಹಾಗೂ ವಿಧಾನ ಪರಿಷತ್ ಸದಸ್ಯರಾಗಿದ್ದ ಇಕ್ಬಾಲ ಅಹಮದ್ ಸರಡಗಿ ಯವರ ಅಗಲವಿಕೆ ಕಲ್ಬುರ್ಗಿ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಭಾರಿ ನಷ್ಟ ಎಂದು ಸಂಸದರಾದ ಡಾ. ಉಮೇಶ್ ಜಾಧವ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಕಲ್ಬುರ್ಗಿಯ ರಾಜಕಾರಣದ ಇತಿಹಾಸದಲ್ಲಿ ಅತ್ಯಂತ ಸರಳ ಸಜ್ಜನಿಕೆಯಿಂದ ಪ್ರಾಮಾಣಿಕವಾಗಿ ರಾಜಕಾರಣವನ್ನು ಮಾಡಿ ಜನರಿಗಾಗಿ ಸ್ಪಂದಿಸಿದ ಸರಡಗಿಯವರ ಅಗಲುವಿಕೆಯಿಂದ ಕಲ್ಯಾಣ ಕರ್ನಾಟಕ ಭಾಗಕ್ಕೆ ದೊಡ್ಡ ಆಘಾತ ಮತ್ತು ನಷ್ಟ ಉಂಟಾಗಿದೆ. ಎರಡು ಬಾರಿ ಲೋಕಸಭೆಯಲ್ಲಿ ಕಲಬುರ್ಗಿಯನ್ನು ಪ್ರತಿನಿಧಿಸಿ ಈ ಭಾಗದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದರು. ಜೊತೆಗೆ ವಿಧಾನಪರಿಷತ್ ಸದಸ್ಯರಾಗಿ ಈ ಭಾಗದ ಸಮಸ್ಯೆಗಳ ಬಗ್ಗೆ ಗಮನಸೆಳೆದು ನಿಸ್ಪೃಹ ಸೇವೆಗೈ ದು ಜನಪ್ರಿಯರಾಗಿದ್ದರು.

ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಈ ಭಾಗದಲ್ಲಿ ಉನ್ನತ ಶಿಕ್ಷಣದ ಅವಕಾಶವನ್ನು ಪಡೆಯುವಂತೆ ಮಾಡಿದ ಒಬ್ಬ ಶಿಕ್ಷಣ ತಜ್ಞರಾಗಿ ಗುರುತಿಸಿಕೊಂಡವರು. ವೈಯಕ್ತಿಕವಾಗಿ ತುಂಬಾ ಆತ್ಮೀಯರಾಗಿದ್ದ ಸರಡಗಿಯವರ ಅಗಲುವಿಕೆ ನನಗೆ ತೀವ್ರ ದುಃಖವನ್ನುಂಟು ಮಾಡಿದೆ. ಈ ಭಾಗದ ರಾಜಕಾರಣದ ಹಿರಿಯ ಕೊಂಡಿಯೊಂದು ಕಳಸಚಿದಂತಾಗಿದ್ದು ಅವರ ಆದರ್ಶ ನಮಗೆಲ್ಲ ಪ್ರೇರಣೆಯಾಗಲಿ.

ಸರಡಗಿಯವರ ಆತ್ಮಕ್ಕೆ ದೇವರು ಚಿರಶಾಂತಿ ಕರುಣಿಸಲಿ ಹಾಗೂ ಅವರ ಅಗಲುವಿಕೆಯಿಂದ ಕುಟುಂಬಕ್ಕಾದ ನೋವನ್ನು ಸಹಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ಸಂಸದ ಡಾ. ಉಮೇಶ್ ಜಾಧವ್ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಕಾರಣಾಂತರದಿಂದ ದೆಹಲಿಯಲ್ಲಿ ಇರುವುದರಿಂದ ಭೇಟಿ ನೀಡಲು ಅಸಾಧ್ಯ ವಾದುದಕ್ಕೆ ಕುಟುಂಬದವರಕ್ಷಮೆ ಕೋರುತ್ತೇನೆ ಎಂದು ತಿಳಿಸಿದ್ದಾರೆ.

emedialine

Recent Posts

ಉತ್ತಮ ಕೆಲಸಕ್ಕೆ ಸಹಕರಿಸಲು ಮನವಿ: ಸಾಬೇರಾಬೇಗಂ

ಶಹಾಬಾದ: ನಗರಸಭೆಯ ವಾರ್ಡ ನಂ.17ರಲ್ಲಿ ಸೇಂಟ್ ಥಾಮಸ್ ಶಾಲೆಯ ಮುಂಭಾಗದಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕಾಗಿ ರಸ್ತೆ ಅಗೆಯಲಾಗಿದ್ದು, ಇನ್ನೂ ಹದಿನೈದು…

3 hours ago

ಯೋಗ ಜೀವನದ ಅಂಗವಾದಲ್ಲಿ ಆರೋಗ್ಯ ಸದೃಡವಾಗಲಿದೆ: ಘಂಟ್ಲಿ

ಶಹಾಬಾದ: ಬುದ್ದಿ, ದೇಹ, ಮನಸ್ಸ್ಸು ಎಲ್ಲವನ್ನು ನಿಯಂತ್ರಿಸಿ ಆರೋಗ್ಯ ಕೊಡುವ ಶಕ್ತಿ ಯೋಗದಲ್ಲಿದೆ. ಯೋಗ ಜೀವನದ ಅಂಗವಾದಲ್ಲಿ ನಮ್ಮ ಆರೋಗ್ಯ…

3 hours ago

ರಾವೂರಿನ ಶ್ರೀ ಸಿದ್ಧಲಿಂಗೇಶ್ವರ ಸಂಸ್ಥಾನದಲ್ಲಿ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ರಾವೂರು: ಇಲ್ಲಿನ ಶ್ರೀ ಸಿದ್ಧಲಿಂಗೇಶ್ವರ ವಿದ್ಯಾಭಿವೃದ್ದಿ ಸಂಸ್ಥೆಯಲ್ಲಿ ಹತ್ತನೇ ವಿಶ್ವ ಯೋಗ ದಿನಾಚರಣೆ ಆಚರಿಸಲಾಯಿತು. ದಿನಾಚರಣೆಯ ದಿವ್ಯ ಸಾನಿಧ್ಯ ವಹಿಸಿದ…

4 hours ago

ಶ್ರೀ ಶೈಲ ಮಲ್ಲಿಕಾರ್ಜುನ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

ವಾಡಿ: ಪಟ್ಟಣದ ಶ್ರೀ ಶೈಲ ಮಲ್ಲಿಕಾರ್ಜುನ ವಿದ್ಯಾವರ್ಧಕ ಶಾಲೆ ಯಲ್ಲಿ ಹತ್ತನೆಯ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಈ ವೇಳೆ…

4 hours ago

ವಾಡಿಯಲ್ಲಿ ವಿಶ್ವ ಯೋಗ ದಿನಾಚರಣೆ

ವಾಡಿ: ಪಟ್ಟಣದ ರೆಸ್ಟ್ ಕ್ಯಾಂಪ್ ತಾಂಡದ ಉದ್ಯಾನವನ ವನದಲ್ಲಿ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಯನ್ನು ಪಟ್ಟಣದ ಜನರು ಯೋಗಾಭ್ಯಾಸ…

4 hours ago

ಆಧಾರ್ ಸೀಡಿಂಗ್ ಮಾಡಿಸುವಂತೆ ರೈತರಲ್ಲಿ ಮನವಿ

ಕಲಬುರಗಿ: ಸರ್ಕಾರದ ವಿವಿಧ ಸೌಲಭ್ಯ ರೈತ ಬಾಂಧವರಿಗೆ ನೇರವಾಗಿ ಒದಗಿಸಲು ಮತ್ತು ಡಿ.ಬಿ.ಟಿ. ಮೂಲಕ ಸಹಾಯಧನ ಪಾವತಿ ನಿಟ್ಟಿನಲ್ಲಿ ಶಹಾಬಾದ…

5 hours ago