ಕಲಬುರಗಿ: ಇಂದಿನ ಯುವ ಸಮುದಾಯ ಕೇವಲ ಓದಿಗೆ ಅಷ್ಟೆ ತಮ್ಮ ಜೀವನ ಮುಡುಪಾಗಿಟ್ಟಿರುವುದಲ್ಲದೇ, ಸಮಾಜ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ನೊಂದವರ ಬಾಳಿಗೆ ಬೆಳಕಾಗಬೇಕಾಗಿದೆ. ಅಭ್ಯಾಸದ ಜೊತೆ ಜೊತೆಗೆ ಪ್ರಸ್ತುತ ಸಮಯದಲ್ಲಿ ಯುವಕರು ಸಮಾಜಮುಖಿಯಾಗಿ, ಕೆಲಸ ಮಾಡಬೇಕೆಂದು ವಿ.ಟಿ.ಯುವಿನ ನಿರ್ದೇಶಕರಾದ ಡಾ. ಬಸವರಾಜ ಗಾದಗೆ ಹೇಳಿದರು.
ಅವರು, ಮೇ 23 ರಂದು ನಗರದ ವಿಶ್ವೇಶ್ವರಯ್ಯ ತಾಂತ್ರಿಕ ಮಹಾ ವಿದ್ಯಾಲಯ ಪ್ರಾದೇಶಿಕ ಕಚೇರಿಯ ಸಭಾಂಗಣದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಲಬುರಗಿ ಜಿಲ್ಲಾ ಶಾಖೆಯು ಹಮ್ಮಿಕೊಂಡ “ವಿಶ್ವ ರೆಡ್ ಕ್ರಾಸ್ ದಿನಾಚರಣೆವನ್ನು ಉದ್ಘಾಟಿಸಿ ಮಾತನಾಡಿದರು.
ಸಮಾರಂಭದಲ್ಲಿ ರೆಡ್ ಕ್ರಾಸ್ ಸಂಸ್ಥೆ ಕುರಿತು ವಿಶೇಷ ಉಪನ್ಯಾಸ ನೀಡಿರುವ ಡಾ. ಶೀವಲಿಲಾ ಚಟ್ನಳ್ಳಿಯವರು, ಅತಿವೃಷ್ಟಿ ಅನಾವೃಷ್ಟಿ ಮತ್ತು ಅನೇಕ ಭಯಾನಕ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯು “ಸಂಜೀವಿನ”ಯಾಗಿ ಕೆಲಸಮಾಡುತ್ತಿದೆ. ಸಮೃದ್ಧ ಸಮಾಜ ನಿರ್ಮಾಣಕ್ಕಾಗಿ ಇಂದಿನ ಯುವಕರು ಸಮಾಜ ಸೇವೆಯಲ್ಲಿ ಪಾಲ್ಗೋಂಡು ಸ್ವಯಂ ಪ್ರೇರಿತವಾಗಿ ಸಮಾಜ ಕಾರ್ಯ ಮಾಡಬೇಕೆಂದು ಹೇಳಿದರು.
ಇದೇ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯುಲ್ಲಿ ಸಭಾಪತಿಗಳಾಗಿ ಬಹಳ ಶೇವೆ ಸಲ್ಲಿಸಿದ ನಿಕಟಪೂರ್ವ ಸಭಾಪತಿ ಅಪ್ಪಾರಾವ ಅಕ್ಕೋಣೆ ಹಾಗೂ ರೆಡ್ ಕ್ರಾಸ್ ಸಂಸ್ಥೆಯ ಹೆಚ್ಚಿನ ಕಾರ್ಯ ಚಟುವಿಟಿಕೆಗಳನ್ನು ಮಾಡಿರುವುದಕ್ಕೆ ಡಾ. ನಾಗೇಂದ್ರಪ್ಪ ಬಡಿಗೇರ, ಶರದ್ ಎಮ್. ರೇಷ್ಮೀ ಹಾಗೂ ಡಾ. ಪ್ರಕಾಶ ಮೊರೆಗೆ ಅವರಿಗೆ ವಿಶ್ವ ರೆಡ್ ಕ್ರಾಸ್ ದಿನಾಚರಣೆಯ ಪ್ರಯುಕ್ತ ಸನ್ಮಾನಿಸಲಾಯಿತ್ತು.
ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಜಂಟಿ ಕಾರ್ಯದರ್ಶಿ ಸುರೇಶ ಬಡಿಗೇರ ಅವರು ಸರ್ವರನ್ನು ಸ್ವಾಗತ್ತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು ಹಾಗೂ ವಿ.ಟಿ.ಯು ಮಹಾ ವಿದ್ಯಾಲಯ ಪ್ರಾಧ್ಯಾಪಕರಾದ ಡಾ. ಕೆ. ಶಿವರಾಮನ ಗೌಡ ಅವರು ನಿರೂಪಿಸಿದರು.
ಕಾರ್ಯಕ್ರಮದ ವೇದಿಕೆ ಮೇಲೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಗೌ. ಕಾರ್ಯದರ್ಶಿ ರವೀಂದ್ರ ಶಾಬಾದಿ, ವಿ.ಟಿ.ಯು ಪ್ರಾಧ್ಯಾಪಕರಾದ ಡಾ. ಶಂಬುಲಿಂಗಪ್ಪ ಬಿ. ಕಾರ್ಯಕ್ರಮ ಅಧಿಕಾರಿ ಡಾ. ಶರಣಗೌಡ ಬಿರಾದಾರ, ರೆಡ್ ಕ್ರಾಸ್ ಸಂಸ್ಥೆಯ ಪದಾಧಿಕಾರಿಗಳಾದ ರಾಜೇ ಶೀವಶರಣಪ್ಪ, ಡಾ. ಪದ್ಮಣಾ ರಾಸಣಗಿ, ಡಾ. ಶಂಕರಪ್ಪ ಹತ್ತಿ, ಡಾ. ಪರಮೇಶ್ವರ ಶೆಟಗಾರ, ವಿಶ್ವನಾಥ ಕೋರವಾರ, ಹಾಗೂ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಕಲಬುರಗಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು) ಕಲಬುರಗಿ ಪ್ರಾದೇಶಿಕ ಕೇಂದ್ರದ ನಿರ್ದೇಶಕ ಪ್ರೊ.ಬಸವರಾಜ ಗಾದಗೆ ಅವರು ಭಾರತೀಯ ತಾಂತ್ರಿಕ ಶಿಕ್ಷಣ…
ಜೇವರ್ಗಿ: ದಲಿತ ಸೇನೆ ರಾಜ್ಯಾಧ್ಯಾಕ್ಷರಾದ ಶ್ರೀ ಹಣಮಂತ ಯಳಸಂಗಿ ಅವರ ಆದೇಶದ ಮೇರೆಗೆ ಇಂದು ಜೇವರ್ಗಿಯ ಐಬಿ ಯಲ್ಲಿ ಕರೆದ…
ಕಲಬುರಗಿ: ರಾಜ್ಯ ಮಟ್ಟದ ಮಡಿವಾಳರ ವಧು-ವರರ ಅನ್ವೇಷಣೆಯನ್ನು ಕರ್ನಾಟಕ ರಾಜ್ಯ ಮಡಿವಾಳರ ಸಂಘ ಹಾಗೂ ಜಿಲ್ಲಾ ಮಡಿವಾಳರ ಸಂಘದ ಸಹಯೋಗದೊಂದಿಗೆ…
ಕಲಬುರಗಿ: ನಗರದ ಶಾಹಬಜಾರ್ನಲ್ಲಿರುವ ಶುಕ್ಲಾ ಪೂರ್ವ ಪ್ರಾಥಮಿಕ ಮತ್ತು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಶಾಲೆಯ…
ಸುರಪುರ: ತಾಲೂಕಿನ ಚಿಗರಿಹಾಳ ಗ್ರಾಮದಲ್ಲಿ ಶಾಸಕ ದಿ.ರಾಜಾ ವೆಂಕಟಪ್ಪ ನಾಯಕ ಅವರ ವೃತ್ತ ಉದ್ಘಾಟನೆ ಕಾರ್ಯಕ್ರಮ ನಡೆಸಲಾಗಿದೆ. ಗ್ರಾಮದಲ್ಲಿ ನೂತನವಾಗಿ…
ಸುರಪುರ: ತಾಲ್ಲೂಕಿನ ಹುಣಸಿಹೊಳೆ ಗ್ರಾಮದ ಕಣ್ವಮಠದಲ್ಲಿ ಶ್ರೀಮಠದ ಪೀಠಾಧಿಪತಿಗಳಾಗಿದ್ದ ವಿದ್ಯಾತಪೋನಿಧಿ ತೀರ್ಥರ ಆರಾಧನೆ ಕಾರ್ಯಕ್ರಮ ನಡೆಸಲಾಯಿತು. ಈ ಸಂದರ್ಭದಲ್ಲಿ ಕಣ್ವಮಠದ…