ಬಿಸಿ ಬಿಸಿ ಸುದ್ದಿ

ಬಸವಗಿರಿಯ ಅಕ್ಕ ಅನ್ನಪೂರ್ಣ ತಾಯಿ ನಿಧನಕ್ಕೆ ಕಲಬುರಗಿಯಲ್ಲಿ ದಿವ್ಯ ಶ್ರದ್ಧಾಂಜಲಿ

ಕಲಬುರಗಿ: ಅಪ್ಪಟ ಬಸವತತ್ವದ ಅನುಯಾಯಿ ಹಾಗೂ ತಮ್ಮ ಪ್ರವಚನಗಳ ಮೂಲಕ ನಾಡಿನಾದ್ಯಂತ ಬಸವತತ್ವದ ಪರಿಮಳ ಪಸರಿಸಿದ್ದ ಅಕ್ಕ ಅನ್ನಪೂರ್ಣತಾಯಿಯವರ ಅಗಲಿಕೆ ಬಸವ ಪರಂಪರೆಯ ವಿಸ್ತರಣೆಗೆ ಬಲವಾದ ಪೆಟ್ಟು ಬಿದ್ದಂತಾಗಿದೆ ಎಂದು ಬಸವ ಸೇವಾ ಪ್ರತಿಷ್ಠಾನದ ಕಲಬುರಗಿ ಜಿಲ್ಲಾಧ್ಯಕ್ಷ ರಾಜಶೇಖರ ಯಂಕಂಚಿ ಅಭಿಪ್ರಾಯಪಟ್ಟರು.

ಅಕ್ಕ ಅನ್ನಪೂರ್ಣ ತಾಯಿಯವರ ನಿಧನ ಪ್ರಯುಕ್ತ ನಗರದ ಬಸವೇಶ್ವರ ವೃತ್ತದಲ್ಲಿ ಗುರುವಾರ ಸಂಜೆ ಬಸವಪರ ಸಂಘಟನೆಗಳ ಪರವಾಗಿ ಹಮ್ಮಿಕೊಂಡಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಲಬುರಗಿಯಲ್ಲಿ ನಡೆದ ಪ್ರವಚನ ಕಾರ್ಯಕ್ರಮದ ಮೂಲಕ ಬಸವತತ್ವ ಗಟ್ಟಿಗೊಳಿಸಿದ್ದರು. ಅವರ ಅಗಲಿಕೆ ಬಸವತತ್ವಾನುಯಾಯಿಗಳಿಗೆ ತುಂಬಲಾರದ ನಷ್ಟವಾಗಿದೆ ಎಂದರು.

ಎಪಿಎಂಸಿ ಮಾಜಿ ಉಪಾಧ್ಯಕ್ಷ ರಾಜಕುಮಾರ ಕೋಟಿ ಮಾತನಾಡಿ, ಅಕ್ಕ ಅವರ ಅಗಲಿಕೆಯಿಂದ ಇಡೀ ನಾಡಿಗೆ ದುಃಖ ಮಡುಗಟ್ಟಿದಂತಾಗಿದೆ. ಅವರ ಬಸವ ಸೇವೆ ಸ್ಮರಣೀಯ ಎಂದು ಹೇಳಿದರು.

ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಅರುಣಕುಮಾರ ಪಾಟೀಲ, ರವೀಂದ್ರ ಶಾಬಾದಿ, ಆರ್.ಜಿ. ಶೆಟಗಾರ, ಕಲ್ಯಾಣಪ್ಪ ಪಾಟೀಲ, ಜಗನ್ನಾಥ ರಾಚಟ್ಟೆ, ಶಿವಶರಣಪ್ಪ ದೇಗಾಂವ, ಮಲ್ಲಿಕಾರ್ಜುನ ವಡ್ಡನಕೇರಿ, ಜಗದೀಶ ಪಾಟೀಲ, ಜ್ಯೋತಿ ಯಂಕಂಚಿ, ವಿಜಯಲಕ್ಷ್ಮೀ ಗೊಬ್ಬೂರ, ನಿರ್ಮಲಾ ಕೋಟಿ, ನೀಲಾಂಬಿಕಾ, ಗಂಗಾಂಬಿಕಾ ಕೋಟೆ, ಶೋಭಾ ಡಂಬಳ, ರವಿ ಸಜ್ಜನ, ಅಪ್ಪು ಕಣಕಿ ಇತರರಿದ್ದರು.

emedialine

Recent Posts

ಮಹಿಳಾ ಅಸ್ಮಿತೆ ಸಾರಿದ ಡಾ.ಕಮಲಾ ಹಂಪನಾ

ಸೇಡಂ: ಕನ್ನಡ ಸಾಹಿತ್ಯ ಲೋಕಕ್ಕೆ ಸೃಜನ ಶೀಲ ಬರಹದ ಮೂಲಕ ಮಹಿಳಾ ಅಸ್ಮಿತೆ ಸಾರಿದ ಕೀರ್ತಿ ಹಿರಿಯ ಸಾಹಿತಿ ಡಾ.ಕಮಲಾ…

2 hours ago

ರಾಜ್ಯದಲ್ಲಿ 82 ಲಕ್ಷ‌ ಹೆಕ್ಟೇರ್ ಬಿತ್ತನೆ ಗುರಿ; 2025 ಅಂತ್ಯಕ್ಕೆ ಕಂದಾಯ ಇಲಾಖೆ ಡಿಜಿಟಲೀಕರಣ | ಸಚಿವ ಕೃಷ್ಣ ಬೈರೇಗೌಡ

2025 ಅಂತ್ಯಕ್ಕೆ ಕಂದಾಯ ಇಲಾಖೆ ಡಿಜಿಟಲೀಕರಣ: ಕಂದಾಯ ಇಲಾಖೆಯು ಎಲ್ಲಾ ಆಯಾಮದಿಂದ ಡಿಜಿಟಲಿಕರಣಕ್ಕೆ ಮುಂದಾಗಿದೆ. ಈಗಾಗಲೆ ಇ-ಕಚೇರಿ ಅನುಷ್ಠಾನದಲ್ಲಿ ಶೇ.80ರಷ್ಟು…

13 hours ago

ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಧಾಕೃಷ್ಣ ದೊಡ್ಡಮನಿಗೆ ಮಜರ್ ಆಲಂ ಖಾನ್ ಸನ್ಮಾನ

ಕಲಬುರಗಿ: ರಾಧಾಕೃಷ್ಣ ದೊಡ್ಡಮನಿ ಅವರು ಸಂಸದರಾಗಿ ಪ್ರಮಾಣ ವಚನ ಸ್ವಿಕರಿಸಿದ ನಂತರ ಅವರನ್ನು ಕುಡಾ ಅಧ್ಯಕ್ಷ ಮಜರ್ ಆಲಂ ಖಾನ್…

15 hours ago

ಕಮಲಾಪುರದಲ್ಲಿ ಚಾತುರ್ಮಾಸ್ಯ ವೃತಾನುಷ್ಠಾನ ಕೈಗೊಳ್ಳುವೆ: ವಿದ್ಯಾ ಕಣ್ವವಿರಾಜ ತೀರ್ಥ

ಸುರಪುರ: ಭಕ್ತರ ಆಪೇಕ್ಷೆ ಮತ್ತು ಅಭಿಮಾನದ ಮೇರೆಗೆ ಈ ಬಾರಿಯ ತಮ್ಮ ಪಂಚಮ ವರ್ಷದ ಚಾತುರ್ಮಾಸ್ಯ ವೃತಾನುಷ್ಠಾನವನ್ನು ವಿಜಯಪುರ ಜಿಲ್ಲೆಯ…

16 hours ago

ಕಬಾಬ್ ತಯಾರಿಕೆಯಲ್ಲಿ ಕೃತಕ ಬಣ್ಣಗಳ ನಿಷೇಧ

ಬೆಂಗಳೂರು; ಕಬಾಬ್‍ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ The Food Safety and Standards Act, 2006  ರ…

18 hours ago

17 ನೂತನ ಶಾಸಕರಿಂದ ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು; ಕರ್ನಾಟಕ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಆಯ್ಕೆಯಾದ 17 ವಿಧಾನ ಪರಿಷತ್ ಸದಸ್ಯರಾಗಿ  ಪ್ರಮಾಣ ವಚನ ಸ್ವೀಕರಿಸಿದರು. ಭಾರತೀಯ ರಾಷ್ಟ್ರೀಯ…

18 hours ago