ಕಲಬುರಗಿ: ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಅಧಿನಯಮ-2009 ಉಲ್ಲಂಘನೆ ಹಿನ್ನೆಲೆಯಲ್ಲಿ ಜಿಲ್ಲೆಯ 48 ಆಸ್ಪತ್ರೆ ಮತ್ತು ವೈದ್ಯರಿಗೆ ಒಟ್ಟು 21.35 ಲಕ್ಷ ರೂ. ದಂಡ ವಿಧಿಸಲು ಬುಧವಾರ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ನಡೆದ ಕೆ.ಪಿ.ಎಂ.ಇ ಜಿಲ್ಲಾ ಮಟ್ಟದ ನೋಂದಣಿ ಮತ್ತು ಕುಂದುಕೊರತೆ ಪ್ರಾಧಿಕಾರ ಸಭೆಯಲ್ಲಿ ನಿರ್ಧರಿಸಲಾಗಿದೆ.
ಕೆ.ಪಿ.ಎಂ.ಇ. ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ 6 ಜನರಿಗೆ ತಲಾ 1 ಲಕ್ಷ ರೂ., 28 ಜನರಿಗೆ ತಲಾ 50 ಸಾವಿರ ರೂ., 13 ಜನರಿಗೆ ತಲಾ 10 ಸಾವಿರ ರೂ. ಓರ್ವನಿಗೆ 5 ಸಾವಿರ ರೂ. ದಂಡ ವಿಧಿಸಿ ಒಂದು ವಾರದೊಳಗೆ ದಂಡ ಕಟ್ಟಲು ಆದೇಶಿಸಿಲಾಗಿದೆ. ಉಳೀದಂತೆ ಓರ್ವ ವೈದ್ಯನಿಗೆ ಎಚ್ಚರಿಕೆ ನೀಡಲಾಗಿದೆ. ದಂಡ ಕಟ್ಟಲು ತಪ್ಪಿದಲ್ಲಿ ನ್ಯಾಯಾಲಯದಲ್ಲಿ ಮೊಕದೊಮ್ಮೆ ಹೂಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಡಿ.ಸಿ. ಅವರು ಎಚ್ಚರಿಕೆ ನೀಡಿದ್ದಾರೆ.
ಕಳೆದ ಡಿಸೆಂಬರ್ ದಿಂದ ಫೆಬ್ರವರಿ ಮಾಹೆ ವರೆಗೆ ಆರೋಗ್ಯ ಇಲಾಖೆಯಿಂದ ನಿಯಮಿತ ದಾಳಿ ನಡೆಸಿ ಒಟ್ಟು 49 ಆಸ್ಪತ್ರೆ ಮತ್ತು ವೈದ್ಯರ ಮೇಲೆ ಕೆ.ಪಿ.ಎಂ.ಇ. ಕಾಯ್ದೆ ಉಲ್ಲಂಘನೆ ಹಿನ್ನೆಲೆಯಲ್ಲಿ ಇಲಾಖಾ ಎಫ್.ಐ.ಆರ್. ದಾಖಲಿಸಲಾಗಿತ್ತು. ಬುಧವಾರ ನಡೆದ ಸಭೆಗೆ ಸದರಿ ಆಸ್ಪತ್ರೆ, ವೈದ್ಯರ ಅಹವಾಲು ಆಲಿಸಲು ಆಹ್ವಾನಿಸಲಾಗಿತ್ತು. ಈ ಪೈಕಿ ಸುಮಾರು 33 ಜನ ಹಾಜರಾಗಿದ್ದರು.
ಸಭೆಯಲ್ಲಿ ಡಿ.ಎಚ್.ಓ. ಡಾ.ರತಿಕಾಂತ ಸ್ವಾಮಿ, ಐ.ಎಂ.ಎ. ಅಧ್ಯಕ್ಷ ಡಾ. ಗುರುಲಿಂಗಪ್ಪ, ಜಿಲ್ಲಾ ಆಯೂಷ್ ಅಧಿಕಾರಿ ಡಾ.ಗಿರಿಜಾ ನಿಗ್ಗುಡಗಿ ಸೇರಿದಂತೆ ಇನ್ನಿತರ ಇದ್ದರು.
ಸುರಪುರ; ಜೀವನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಶಕ್ತಿ ಜಾನಪದ ಸಾಹಿತ್ಯ, ಕಲೆಗೆ ಇದ್ದು, ಜಾನಪದ ಸಾರ್ವಕಾಲಿಕ ಸತ್ಯವಾಗಿದೆ ಎಂದು ಲಕ್ಷ್ಮೀಪುರ…
ಸುರಪುರ: ತಿಮ್ಮಾಪುರದ ಮುಖ್ಯ ರಸ್ತೆಯಲ್ಲಿ ನಿರ್ಮಾಣವಾದ ನೂತನ ಮರಗಮ್ಮ ದೇವಿಯ ದೇವಸ್ಥಾನ ಲೋಕಾರ್ಪಣೆ , ಮರಗಮ್ಮ ದೇವಿಯ ರಜತ ಮೂರ್ತಿಯ…
ಕಲಬುರಗಿ: ನಗರದ ಪ್ರತಿಷ್ಠಿತ ಸುಬೇದಾರ ಕೇರ್ ಹಾಸ್ಪಿಟಲ್ ವತಿಯಿಂದ ಕಾಳಗಿ ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಜುಲೈ 8 ರಂದು…
ವಾಡಿ: ಪಟ್ಟಣದ ಬಸ್ ನಿಲ್ದಾಣದ ಹತ್ತಿರದ ಹನುಮಾನ ಮಂದಿರದ ಮುಂಭಾಗದಲ್ಲಿ ಬಿಜೆಪಿ ಮುಖಂಡರು ಸಾರ್ವಜನಿಕರಿಗೆ ಸಸಿಗಳನ್ನು ವಿತರಿಸುವ ಮೂಲಕ"ತಾಯಿ ಹೆಸರಲ್ಲಿ…
ವಾಡಿ: ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಳಿಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್…
ವಾಡಿ: ಸಂಚಲನ ಸಾಹಿತ್ಯ ಮತ್ತು ಸಾಂಸ್ಕøತಿಕ ವೇದಿಕೆ ವತಿಯಿಂದ ಜುಲೈ ಇಂದು ಬೆಳಿಗ್ಗೆ 10:00 ಗಂಟೆಗೆ ಪಟ್ಟಣದ ಡಾ. ಅಂಬೇಡ್ಕರ್…