ಬಿಸಿ ಬಿಸಿ ಸುದ್ದಿ

ಜಗತ್ತಿಗೆ ಮಾನವತೆಯನ್ನು ತೋರಿಸಿಕೊಟ್ಟಿದ್ದೇ ಬೌದ್ಧ ಧರ್ಮ

ಶಹಾಬಾದ: ಜಗತ್ತಿಗೆ ಅಂತಃಕರಣ, ಪ್ರೀತಿ, ಮಾನವತೆಯನ್ನು ತೋರಿಸಿಕೊಟ್ಟಿದ್ದೇ ಬೌದ್ಧ ಧರ್ಮ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಮರಿಯಪ್ಪ ಹಳ್ಳಿ ಹೇಳಿದರು.
ಅವರು ಗುರುವಾರ ಗೋಳಾ(ಕೆ) ಗ್ರಾಮದ ಬುದ್ಧ ನಗರದ ಬೋಧಿಜ್ಞಾನ ಬುದ್ಧ ವಿಹಾರ ಧಾಮದಲ್ಲಿ ಬುದ್ಧ ಪೂರ್ಣಿಮೆ ನಿಮಿತ್ತ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮನುಷ್ಯನನ್ನು ಮನುಷ್ಯನನ್ನಾಗಿ ಕಾಣುವ, ಜೀವಂತವಾಗಿರುವಾಗಲೇ ಜಯಿಸುವಂತೆ ಮಾಡುವ, ಕಲುಷಿತವಾದ ಮನಸ್ಸುಗಳನ್ನು ಪವಿತ್ರವಾಗುವಂತೆ ಮಾಡುವ ಧರ್ಮ. ಈ ಧರ್ಮದ ತತ್ವಗಳು ಅತ್ಯಂತ ಪ್ರಾಯೋಗಿಕವಾಗಿವೆ. ಪರಿಶೀಲಿಸಿ, ಪರೀಕ್ಷಿಸಿ, ವಿವೇಚಿಸಿ ಮನಃ ಪರಿವರ್ತನೆ ಮಾಡುವ ಸಾಮಥ್ರ್ಯ ಹೊಂದಿದೆ. ಬುದ್ಧ ಜಗತ್ತಿಗೆ ಬೆಳಕು ನೀಡಿದ್ದಾರೆ.

ಕರ್ನಾಟಕದ ಸಾಕಷ್ಟು ಪ್ರದೇಶಗಳಲ್ಲಿ ಹಾಗೂ ಪ್ರಪಂಚದ ನಾನಾ ದೇಶಗಳಲ್ಲಿ ಬೌದ್ಧ ಧರ್ಮ ಪ್ರಚಲಿತದಲ್ಲಿದೆ. ಬುದ್ಧನು ಬೋಧಿಸಿದ ಪಂಚಶೀಲ ತತ್ವಗಳು ಮತ್ತು ಅμÁ್ಟಂಗ ಮಾರ್ಗಗಳು ವೈಜ್ಞಾನಿಕ ತಳಹದಿಯನ್ನು ಹೊಂದಿದ್ದು, ಅಳವಡಿಸಿಕೊಳ್ಳಲು ಅತ್ಯಂತ ಸೂಕ್ತವಾಗಿವೆ.ಆದ್ದರಿಂದ ಬುದ್ಧನ ತತ್ವಾದರ್ಶಗಳು ಜಗತ್ತನ್ನೇ ಸೆಳೆದಿವೆ. ಬುದ್ಧ ಹೇಳಿಕೊಟ್ಟ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅಭಿವೃದ್ಧಿ ಸಾಧಿಸಬೇಕು ಎಂದು ಹೇಳಿದರು.

ಮುಖಂಡರಾದ ಮಲ್ಕಪ್ಪ ಮುದ್ದಾ,ಮಲ್ಲಿಕಾರ್ಜುನ ಪೊಲೀಸ್ ಪಾಟೀಲ,ಹರಿಶ್ಚಂದ್ರ ಕೋಬಾಳಕರ್,ಶರಣಪ್ಪ ಕಣಮೇಶ್ವರ,ಮಲ್ಲಿಕಾರ್ಜುನ ಕಟ್ಟಿ ವೇದಿಕೆಯ ಮೇಲಿದ್ದರು.
ಬಸವರಾಜ ಮಯೂರ, ಪಿ.ಎಸ್.ಮೇತ್ರೆ, ಶಿವಶಾಲಕುಮಾರ ಪಟ್ಟಣಕರ್,ಅಲ್ಲಂಪ್ರಭು ಮಸ್ಕಿ, ಮಲ್ಲಿಕಾರ್ಜುನ ಹಳ್ಳಿ,ನರಸಿಂಹಲೂ ರಾಯಚೂರಕರ್, ಮಲ್ಲಣ್ಣ ಹೊನಗುಂಟಾ, ಹಣಮಂತ ತರನಳ್ಳಿ, ಪ್ರದೀಪ ಕೋಬಾಳಕರ್, ಗುರುಕಿರಣ ಗುಜ್ಜನ್,ಮಲ್ಲಿಕಾರ್ಜುನ ತರನಳ್ಳಿ,ಭೀಮರಾಯ ನೆಲೋಗಿ,ಸುನೀಳ ಹಿರೇನೂರ್ ಸೇರಿದಂತೆ ಅನೇಕರು ಇದ್ದರು.

emedialine

Recent Posts

ವಾಡಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್ ಮಹೇಶ್ ಅವರಿಗೆ ಸನ್ಮಾನ

ವಾಡಿ: ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯ ಉಪಾಧ್ಯಕ್ಷರು,ಮಾಜಿ ಶಿಕ್ಷಣ ಸಚಿವರು ಹಾಗು ಕೊಳ್ಳೇಗಾಲದ ಮಾಜಿ ಶಾಸಕರಾದ…

7 hours ago

ಕಲಬುರಗಿ ಡಿ.ಸಿ. ವಿರುದ್ಧ ಸುಳ್ಳು ಆರೋಪ: ಕಾನೂನು ಕ್ರಮಕ್ಕೆ‌ ಒತ್ತಾಯಿಸಿದ ಭೀಮ್ ಅರ್ಮಿ ಮನವಿ

ಕಲಬುರಗಿ: ದಕ್ಷ ಮಹಿಳಾ ಅಧಿಕಾರಿಯಾಗಿರುವ ಕಲಬುರಗಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರ ವಿರುದ್ಧ ಇತ್ತೀಚೆಗೆ ಕೆಲವರು ಇಲ್ಲಸಲ್ಲದ ಆರೋಪ…

9 hours ago

ಜನರ ಬದುಕಿನೊಂದಿಗೆ ಚೆಲ್ಲಾಟವಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ: ಪ್ರೀತಿ ಹೊನ್ನಗುಡಿ

ಬೆಂಗಳೂರು: ಹಾಲು ಉತ್ಪಾದಕರಿಗೆ ಹಾಲಾಹಲ ನೀಡಿದ್ದ ಕರ್ನಾಟಕ ಕಾಂಗ್ರೆಸ್‌ ಸರ್ಕಾರ ಈಗ ಗ್ರಾಹಕರಿಗೆ ಅಕ್ಷರಶಃ ಬೆಲೆಯೇರಿಕೆಯ ವಿಷವುಣಿಸುತ್ತಿದೆ. ಹಾಲು ಉತ್ಪಾದಕರಿಗೆ…

9 hours ago

ಬಗರ್ ಹುಕುಂ ಅರ್ಜಿ ಕೂಡಲೆ ಇತ್ಯರ್ಥಪಡಿಸಿ; ತಹಶೀಲ್ದಾರರಿಗೆ ಬಿ.ಫೌಜಿಯಾ ತರನ್ನುಮ್ ಸೂಚನೆ

ಕಲಬುರಗಿ: ಜಿಲ್ಲೆಯಲ್ಲಿ ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸುವ ನಮೂನೆ 50, 53 ಹಾಗೂ 57 ಬಗರ್ ಹುಕುಂ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ…

9 hours ago

ಮಹಿಳೆಯರು ಶಿಕ್ಷಿತರಾಗಿ ಸಿಕ್ಕ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳಿ; ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಕರೆ

ಗೊಬ್ಬೂರನಲ್ಲಿ ಮಹಿಳಾ ಅರೋಗ್ಯ ತಪಾಸಣಾ‌ ಶಿಬಿರ ಉದ್ಘಾಟನೆ ಕಲಬುರಗಿ; ಮಹಿಳೆಯರು ಶಿಕ್ಷಿತರಾಗಿ ತಮ್ಮ ಹಕ್ಕುಗಳ ಪಡೆಯಬೇಕು. ಜೊತೆಗೆ ಪರುಷ ಪ್ರಧಾನವಾದ…

10 hours ago

ಬಲಿಷ್ಠ ರಾಷ್ಟ್ರ ಕಟ್ಟಲು ಗುಣಮಟ್ಟದ ಶಿಕ್ಷಣ ಅಗತ್ಯ; ಸರಡಗಿ ಶ್ರೀಗಳು

ಕಲಬುರಗಿ; ಗುಣಮಟ್ಟದ ಶಿಕ್ಷಣ ಸಂಸ್ಥೆಗಳು ಬಲಿಷ್ಠ ರಾಷ್ಟ್ರ ಕಟ್ಟಲು ಸಹಕಾರಿಗುತ್ತದೆ ಎಂದು ಶ್ರೀನಿವಾಸ ಸರಡಗಿ ಪೂಜ್ಯರಾದ ಡಾ. ರೇವಣಸಿದ್ದ ಶಿವಾಚಾರ್ಯರು…

10 hours ago