ಕಲಬುರಗಿ: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಕರ್ನಾಟಕ ಸರಕಾರ ಇದರಲ್ಲಿ ತನಿಖೆಗಿಂತ ಹೆಚ್ಚು ರಾಜಕಾರಣ ಮಾಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಲ್ಲಾದ್ ಜೋಶಿ ಹೇಳಿದರು.
ಗುರುವಾರ ನಗರದಲ್ಲಿ ಈಶಾನ್ಯ ಪದವಿಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಅವರ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲು ಆಗಿಸಿದ ವೇಳೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಗೆ ಎರಡನೇ ಬಾರಿ ಪತ್ರ ಬರೆದಿರುವ ಕುರಿತು ಪ್ರತಿಕ್ರಿಯೆ ನೀಡಿದ ಅವರು ಪತ್ರ ಬರೆದ ತಕ್ಷಣ ಪಾಸ್ ಪೋರ್ಟ್ ರದ್ದು ಆಗಬೇಕು ಅಂತ್ತೇನೂ ಇಲ್ಲ. ಇದನ್ನು ಬಿಜೆಪಿ ಮೇಲೆ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.
ಪ್ರಜ್ವಲ್ ರೇವಣ್ಣ ಕ್ಲಿಪಿಂಗ್ ಪೆನ್ ಡ್ರೈವ್ ಹೊರಬಂದಿದ್ದು ಏಪ್ರಿಲ್ 21 ರಂದು, ಆದರೆ ಪ್ರಜ್ವಲ್ ಹೋಗಿದ್ದು ಏ.27ಕ್ಕೆ ಹಾಗಾದ್ರೆ ಅಲ್ಲಿಯವರೆಗೆ ಇವರೇನು ಕತ್ತೆ ಕಾಯ್ತಿದ್ರಾ ? ಎಂದು ನಾನು ಕೇಳುವ ಪ್ರಶ್ನೆಗೆ ಸಿದ್ರಾಮಯ್ಯ, ಡಿಕೆ ಶಿವಕುಮಾರ, ಪರಮೇಶ್ವರ ಅವರಿಗೆ ಇದುವರೆಗೂ ಉತ್ತರ ಕೊಡಲು ಆಗುತ್ತಿಲ್ಲ ಎಂದರು.
ಇದು ಅತ್ಯಂತ ಗಂಭೀರ ಪ್ರಕರಣ ಪ್ರಜ್ವಲ್ ವಿಚಾರಣೆ ಎದುರಿಸಲೇಬೇಕು. ಅವರು ತಪ್ಪು ಮಾಡಿದ್ದೆ ಆಗಿದ್ರೆ ಕಠಿಣ ಕ್ರಮ ಆಗಲೇಬೇಕು. ಇದರಲ್ಲಿ ಯಾವುದೇ ಅನುಕಂಪ ಇಲ್ಲವೇ ಇಲ್ಲ. ಹೊರ ದೇಶಕ್ಕೆ ಹೋದವರನ್ನು ತರುವುದಕ್ಕೆ ಅದರದೇ ಆದ ಪ್ರೊಸೆಸ್ ಇದೆ. ಪಾಸ್ ಪೋರ್ಟ ರದ್ದುಪಡಿಸಲು ಅದರದೇ ಆದ ಪ್ರಕ್ರಿಯೆಗಳಿವೆ ಡಿಪ್ಲೋಮ್ಯಾಟ್ ಪಾಸ್ ಪೋರ್ಟ ರದ್ದತಿಗೆ ನ್ಯಾಯಾಲಯದಲ್ಲಿ ಫೈಲ್ ಮಾಡಲಾಗಿದೆ. ಭಾರತ ಸರಕಾರ ಕಾನೂನು ಪ್ರಕಾರ ಏನು ಮಾಡಬೇಕೋ ಮಾಡುತ್ತಿದೆ. ರಾಜ್ಯ ಸರಕಾರಕ್ಕೆ ಸಹಕಾರ ನೀಡಲು ತಯಾರಿದೆ ಎಂದರು.