ಮುಂಗಾರು ಪೂರ್ವ ಮಳೆಗೆ ವಿವಿಧ ಕಡೆಗಳಲ್ಲಿ ಅಪಾರ ನಷ್ಟ;ಮುಖಂಡರ ಭೆಟಿ

ಸುರಪುರ: ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿದ ಬಿರುಗಾಳಿ ಸಹಿತ ಮುಂಗಾರು ಪೂರ್ವ ಮಳೆಗೆ ವಿವಿಧ ಗ್ರಾಮಗಳಲ್ಲಿ ದೊಡ್ಡ ಮಟ್ಟದಲ್ಲಿ ಹಾನಿಯುಂಟಾಗಿ ಜನರು ಹೈರಾಣಾಗಿದ್ದಾರೆ.

ತಾಲೂಕಿನ ದೇವಾಪುರ ಗ್ರಾಮದಲ್ಲಿ ಬುಧವಾರ ಸಂಜೆ ನೋಡ ನೋಡುತ್ತಿದ್ದಂತೆ ಬಿರುಗಾಳಿ ಮಳೆ ಆರಂಭವಾಗಿದ್ದು,ಗ್ರಾಮದಲ್ಲಿನ ಅನೇಕ ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ.ಅಲ್ಲದೆ ಗ್ರಾಮದಲ್ಲಿ ಅನೇಕ ಮರಗಳು ಮುರಿದು ಬಿದ್ದು ದೊಡ್ಡ ಆವಾಂತರ ಸೃಷ್ಟಿಸಿದೆ.ಅಲ್ಲದೆ ಗ್ರಾಮದ ಬಳಿಯ ಬೀದರ-ಬೆಂಗಳೂರು ರಾಜ್ಯ ಹೆದ್ದಾರಿಯ ಮೇಲೆ ಬೃಹತ್ ಗಾತ್ರದ ಮರಗಳು ಮುರಿದು ಬಿದ್ದ ಪರಿಣಾಮ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಬಂದಾಗಿ ವಾಹನ ಸವಾರರು ಹೈರಾಣಾದರು.

ಗ್ರಾಮದಲ್ಲಿನ ಅನೇಕ ಮನೆಗಳಿಗೆ ಮೇಲ್ಛಾವಣಿಗೆ ಹಾಕಲಾಗಿದ್ದ ತಗಡುಗಳು ಹಾರಿ ಹೋಗಿದ್ದು ಮನೆಯಲ್ಲಿ ದಿನ ಬಳಕೆ ವಸ್ತುಗಳು,ಟಿ.ವಿ,ಫ್ರಿಜ್ ಸೇರಿದಂತೆ ಎಲೆಕ್ಟ್ರಿಕಲ್ ವಸ್ತುಗಳು ಹಾಳಾಗಿ ಲಕ್ಷಾಂತರ ರೂಪಾಯಿ ನಷ್ಟವುಂಟಾಗಿದೆ.ಅಲ್ಲದೆ ವಿದ್ಯುತ್ ಕಂಬಗಳು ಮುರಿದು ಬಿದ್ದಿದ್ದರಿಂದ ಗ್ರಾಮದಲ್ಲಿ ವಿದ್ಯುತ್ ಇಲ್ಲದೆ ಜನರು ಕುಡಿಯುವ ನೀರಿಗೂ ಪರದಾಡಿ ರಾತ್ರಿಯಿಡೀ ಜನರು ನಿದ್ದೆ ಇಲ್ಲದೆ ಹೈರಾಣಾಗುವಂತಾಗಿದೆ.

ಗ್ರಾಮದಲ್ಲಿ ಮಳೆ ಆವಾಂತರ ತಿಳಿಯುತ್ತಿದ್ದಂತೆ ಗುರುವಾರ ಬೆಳಿಗ್ಗೆ ಸುರಪುರ ವಿಧಾನಸಭೆ ಉಪ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಹಾಗೂ ಕಂದಾಯ ಇಲಾಖೆ,ಜೆಸ್ಕಾಂ ಇಲಾಖೆ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ನಷ್ಟದ ಕುರಿತು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಮಲ್ಲಣ್ಣ ಸಾಹುಕಾರ,ಬಸನಗೌಡ ಪಾಟೀಲ್, ನಂದನಗೌಡ ಪಾಟೀಲ್,ಕಾಂಗ್ರೆಸ್ ಕಿಸಾನ ಘಟಕದ ತಾಲೂಕು ಅಧ್ಯಕ್ಷ ಚನ್ನಪ್ಪಗೌಡ ಜಕ್ಕನಗೌಡ್ರು ಸೇರಿದಂತೆ ಅನೇಕ ಮುಖಂಡರುಗಳಿದ್ದರು.

ದೇವತ್ಕಲ್ ಗ್ರಾಮ: ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಗುರುವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆಗೆ ಗ್ರಾಮದಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ,ಅಲ್ಲದೆ ವಿದ್ಯುತ್ ಪರಿವರ್ತಕವೂ ನೆಲಕ್ಕುರುಳಿದೆ,ಕೆಲ ರೈತರು ಜಮೀನುಗಳಲ್ಲಿ ಬೆಳೆದಿದ್ದ ಪಪ್ಪಾಯ,ದಾಳಿಂಬೆ ಬೆಳೆ ನಷ್ಟವಾಗಿದೆ.ಅಲ್ಲದೆ ಗ್ರಾಮದಲ್ಲಿನ ಅನೇಕ ಮನೆಗಳ ಮೇಲ್ಛಾವಣಿಯ ತಗಡುಗಳು ಹಾರಿಹೋಗಿ ಮನೆಗಳಲ್ಲಿನ ಎಲ್ಲಾ ವಸ್ತುಗಳು ಸಂಪೂರ್ಣ ಹಾಳಾಗಿವೆ.ಅಲ್ಲದೆ ಮನೆಗಳ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದು ಅಪಾರ ನಷ್ಟವುಂಟು ಮಾಡಿದೆ.ಅನೇಕ ಅಂಗಡಿಗಳ ಮೇಲೆ ಹಾಕಲಾಗಿದ್ದ ತಗಡುಗಳು ಹಾರಿ ಹೋಗಿದ್ದರಿಂದ ಅಂಗಡಿಯಲ್ಲಿನ ಎಲ್ಲಾ ವಸ್ತುಗಳು ಹಾಳಾಗಿವೆ.ಅನೇಕ ಮರಗಳು ಮುರಿದು ಬಿದ್ದಿವೆ.ಟ್ರ್ಯಾಕ್ಟರ್ ಒಂದರ ಮೇಲೆ ಮರ ಮುರಿದು ಬಿದ್ದ ಪರಿಣಾಮ ಟ್ರ್ಯಾಕ್ಟರ್ ಸಂಪೂರ್ಣ ಜಖಂ ಆಗಿದೆ.

ಶುಕ್ರವಾರ ಬೆಳಿಗ್ಗೆ ಗ್ರಾಮಕ್ಕೆ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜಾ ಕುಮಾರ ನಾಯಕ ಭೇಟಿ ನೀಡಿದ್ದಾರೆ,ಈ ಸಂದರ್ಭದಲ್ಲಿ ಗ್ರಾಮದ ಮನೆ ಹಾನಿಗೊಳಗಾದ ಮಹಿಳೆಯರು ತಮಗೆ ಪರಿಹಾರ ಕೊಡಿಸುವಂತೆ ಕಣ್ಣೀರು ಸುರಿಸುತ್ತಾ ಮನವಿ ಮಾಡಿಕೊಂಡರು.ಈ ಸಂದರ್ಭದಲ್ಲಿ ಹಾನಿ ಸ್ಥಳಕ್ಕೆ ಭೇಟಿ ನೀಡಿದ ರಾಜಾ ಕುಮಾರ ನಾಯಕ,ಜಿಲ್ಲಾಧಿಕಾರಿಗಳಿಗೆ ಮತ್ತು ಸರಕಾರಕ್ಕೆ ಪರಿಹಾರ ನೀಡುವಂತೆ ಮನವಿ ಮಾಡುವುದಾಗಿ ತಿಳಿಸಿದರು.ಮುಖಂಡ ಭೀಮರಾಯ ಮೂಲಿಮನಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಗ್ರಾಮಕ್ಕೆ ಕಂದಾಯ ಇಲಾಖೆ ಹಾಗೂ ಜೆಸ್ಕಾಂ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮಳೆಯಿಂದ ಉಂಟಾದ ನಷ್ಟದ ಕುರಿತು ಜನರಿಂದ ಮಾಹಿತಿ ಪಡೆದುಕೊಂಡರು.

emedialine

Recent Posts

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

5 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

7 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

7 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

8 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

8 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

8 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420