ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಿ: ಬೀರಪ್ಪ ಅಂಡಗಿ ಚಿಲವಾಡಗಿ

0
208

ಕೊಪ್ಪಳ: ಪ್ರಸ್ತುತ ದಿನಮಾನಗಳಲ್ಲಿ ಮಾನವೀಯ ಮೌಲ್ಯಗಳು ಮರೆಯಾಗಿತ್ತಿದ್ದು,ಪ್ರತಿಯೊಬ್ಬರು ಕೂಡಾ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಹೇಳಿದರು.

ಅವರು ತಾಲೂಕಿನ ಹೊಸಗೊಂಡಬಾಳ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಬಹದ್ದೂರಬಂಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಪ್ರಸ್ತುತ ದಿನಮಾನಗಳಲ್ಲಿ ಮಾನವೀಯ ಮೌಲ್ಯಗಳು ಕಡಿಮೆಯಾಗಿರುವುದರಿಂದ ಸಮಾಜದಲ್ಲಿ ಅನೇಕ ಅಹಿತಕರ ಘಟನೆಗಳು ಜರುಗುತ್ತಿವೆ. ಪ್ರತಿಯೊಬ್ಬ ನಾಗರಿಕನು ಮಾನವೀಯ ಮೌಲ್ಯಗಳನ್ನು ತನ್ನಲ್ಲಿ ಅಳವಡಿಸಿಕೊಳ್ಳಬೇಕು. ಅಂದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯವಾಗುತ್ತದೆ. ಅಲ್ಲದೇ ವಿವಿಧ ಕ್ಷೇತ್ರದಲ್ಲಿ ಸ್ಪರ್ಧೇಯು ಹೆಚ್ಚಾಗಿದೆ. ಸ್ಪರ್ಧೇಗೆ ತಕ್ಕಂತೆ ಶಿಕ್ಷಣ ನೀಡಬೇಕು ಹಾಗೂ ಮಕ್ಕಳು ಕೂಡಾ ಸ್ಪರ್ಧೇಗೆ ಪೈಪೋಟಿ ನೀಡಬೇಕಾದರೇ ಅದರಂತೆ ತರಬೇತಿ ಪಡೆಯಬೇಕು ಅಂದಾಗ ಮಾತ್ರ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

Contact Your\'s Advertisement; 9902492681

ಮುನಿರಾಬಾದ ಡಯಟ್ ನ ಉಪನ್ಯಾಸಕರಾದ ಪ್ರಾಣೇಶ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಉಂಟಾಗುವ ಬದಲಾವಣೆಗೆ ತಕ್ಕಂತೆ ಬೋಧನೆ ಮಾಡುವ ನಿಟ್ಟಿನಲ್ಲಿ ಶಿಕ್ಷಕರಿಗೆ ರಜೆಯ ಅವಧಿಯಲ್ಲಿ ತರಬೇತಿಯನ್ನು ಕೊಡಲಾಗುತ್ತಿದ್ದು, ತರಬೇತಿಯಲ್ಲಿ ನೀಡಿದ ವಿಷಯಗಳನ್ನು ಶಿಕ್ಷಕರು ತರಗತಿಯ ಕೊಠಡಿಯಲ್ಲಿ ಪರಿಣಾಮಕಾರಿಯಾಗಿ ಅಳವಡಿಸಿಕೊಂಡಾಗ ಮಾತ್ರ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಯನ್ನು ತರಲು ಸಾಧ್ಯ ಎಂದು ಹೇಳಿದರು.

ಬಹದ್ದೂರಬಂಡಿ ಕ್ಲಸ್ಟರ್ ಸಿ.ಆರ್.ಪಿ.ಹನುಮಂತಪ್ಪ ಕುರಿ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಾಥಮಿಕ ಹಂತದಲ್ಲಿ ಮಕ್ಕಳಿಗೆ ನೀಡುವ ಶಿಕ್ಷಣ ಬಹಳ ಮಹತ್ವದಾಗಿದೆ. ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸಲು ಪ್ರತಿಭಾ ಕಾರಂಜಿ ಸಹಾಯಕವಾಗಿದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯರಾದ ಬಸವರಾಜ ತಮ್ಮಣ್ಣನವರ ವಹಿಸಿದ್ದರು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಲಕ್ಷ್ಮೀ ಸಿದ್ದಪ್ಪ ಕಲಾಲ ಉದ್ಘಾಟಿಸಿದರು. ವರ್ಗಾವಣೆಗೊಂಡ ಮತ್ತು ನಿವೃತ್ತಿ ಹೊಂದಿದ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಯಟ್‍ನ ಹಿರಿಯ ಉಪನ್ಯಾಸಕರಾದ ಕಂಠ್ಯೇಪ್ಪ ಕಟ್ಟಿಮನಿ, ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ಎಂ.ಅಳಗವಾಡಿ, ಕುಣಿಕೇರಿ ಕ್ಲಸ್ಟರ್ ಸಿ.ಆರ್.ಪಿ.ಹನುಮಂತಪ್ಪ, ಪ್ರಾಥಮಿಕ ಪತ್ತಿನ ಸಹಕಾರ ಸಂಘದ ಉಪಾಧ್ಯಕ್ಷರಾದ ಬಾಲನಾಗಮ್ಮ, ಖಜಾಂಚಿ ಗುರುರಾಜ ಕುಲಕರ್ಣಿ, ನಿರ್ದೇಶಕರಾದ ರವಿಕುಮಾರ, ಶೈಲಾನಿಬಾಷಾ, ಬೇವಿನಹಳ್ಳಿ ಶಾಲೆಯ ಮುಖ್ಯೋಪಾಧ್ಯಾಯರಾದ ವಿಜಯಲಕ್ಷ್ಮೀ ಮಠದ, ಶಿಕ್ಷಕರಾದ ಸಂಗನಗೌಡ, ಪ್ರದೀಪ ನವಲೆ, ಸತ್ಯನಾರಾಯಣ ಸಿದ್ದಾಂತಿ, ಗ್ರಾ.ಪಂ.ಸದಸ್ಯರಾದ ಶರಣಪ್ಪ ಭಾವಿಕಟ್ಟಿ, ಖಾಜಾಬೀ ಮುಂತಾದವರು ಹಾಜರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here