Monday, July 15, 2024
ಮನೆಬಿಸಿ ಬಿಸಿ ಸುದ್ದಿಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಗಮನದಲ್ಲಿಟ್ಟು ಪಕ್ಷಕ್ಕೆ ಬೆಂಬಲಿಸಿ: ಮೋತಕಪಲ್ಲಿ

ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳನ್ನು ಗಮನದಲ್ಲಿಟ್ಟು ಪಕ್ಷಕ್ಕೆ ಬೆಂಬಲಿಸಿ: ಮೋತಕಪಲ್ಲಿ

ಕಲಬುರಗಿ: ಈಶಾನ್ಯ ಪದವಿಧರರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಹಾಲಿ ಪರಿಷತ್ ಸದಸ್ಯ ಡಾ. ಚಂದ್ರಶೇಖರ ಪಾಟೀಲ್ ಅವರನ್ನು ಬರುವ ಜೂನ್ 3 ರಂದು ನಡೆಯಲಿರುವ ಚುನಾವಣೆಯಲ್ಲಿ ಚಿಂಚೋಳಿ ವಿಧಾನ ಸಭಾ ಮತಕ್ಷೇತ್ರದ ಮತದಾರರು ಬೆಂಬಲಿಸುವ ಮೂಲಕ ಪ್ರಚಂಡ ಬಹುಮತದಿಂದ ಆರಿಸಿ ತರಲು ಚಿಂಚೋಳಿ ಬ್ಲಾಕ್ ಕಾಂಗ್ರೆಸ್ ಸಮಿತಿ ವಕ್ತಾರರಾದ ಶರಣು ಪಾಟೀಲ ಮೋತಕಪಲ್ಲಿ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಕರ್ನಾಟಕ ರಾಜ್ಯದಲ್ಲಿ ನುಡಿದಂತೆ ನಡೆದು ಪದವಿ ಮುಗಿಸಿದ ನಿರುದ್ಯೋಗಿ ಯುವಕರಿಗೆ ಮಾಸಿಕ ಮೂರು ಸಾವಿರ ರೂಪಾಯಿಗಳ ಸಹಾಯ ಧನವನ್ನು ನೀಡುತ್ತಿದೆ. ಡಾ.ಚಂದ್ರಶೇಖರ ಪಾಟೀಲ್ ಅವರನ್ನು ಈ ಪರಿಷತ್ ಚುನಾವಣೆಯಲ್ಲಿ ಆರಿಸಿ ತಂದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವೇ ಅಧಿಕಾರದಲ್ಲಿ ಇರುವುದರಿಂದ ಪದವೀಧರರ ಅವಶ್ಯಕತೆಗಳನ್ನು ಪೂರೈಸಲು, ಹೊಸ ಉದ್ಯೋಗ ಸೃಷ್ಟಿಸಲು ಸಾಧ್ಯ ಅಲ್ಲದೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾವಂತ ಯುವ ಜನತೆಯ ಮುಂದಿರುವ ಸವಾಲುಗಳನ್ನು ಎದುರಿಸುವ ಇಚ್ಛಾಶಕ್ತಿಯೊಂದಿಗೆ ಸದಾ ಜನಪರವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಡಾ. ಚಂದ್ರಶೇಖರ ಪಾಟೀಲ್ ಹುಮನಾಬಾದ ಇವರು ಸ್ವಯಂ ಪದವಿಧರರಾಗಿದ್ದು ತಾಲೂಕು ಕೇಂದ್ರವಾದ ಹುಮನಾಬಾದ ಅಂತಹ ಸಣ್ಣ ನಗರದಲ್ಲಿ ಅನೇಕ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನೇ ಮಾಡಿದ್ದಾರೆ.

ಪರಿಷತ್ ಸದಸ್ಯರಾದ ನಂತರ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿ ಕೊಂಡಿದ್ದು ಅನೇಕ ಜನಪರ ಕಾರ್ಯಗಳನ್ನು ಮಾಡಿದ್ದಾರೆ. ಹೀಗಾಗಿ ಮತ್ತೊಂದು ಅವಧಿಗೆ ಅವರನ್ನು ಆರಿಸಿ ತರುವ ಮೂಲಕ ಇನ್ನೂ ಹೆಚ್ಚಿನ ಸೇವೆಯನ್ನು ಮಾಡಲು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular