ಅಲ್ಪಸಂಖ್ಯಾತರ ಸರಕಾರಿ ನೌಕರರ ಮಕ್ಕಳಿಗೆ ಸನ್ಮಾನ

ಕಲಬುರಗಿ: ನಗರದ ಕನ್ನಡ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ಅಲ್ಪಸಂಖ್ಯಾತರ ನೌಕರರ ಸಂಘದವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅಲ್ಪಸಂಖ್ಯಾತರ ಸರಕಾರಿ ನೌಕರರ ಮಕ್ಕಳಿಗೆ 10ನೇ ತರಗತಿ ಹಾಗೂ ಪಿಯುಸಿಯಲ್ಲಿ ಹೆಚ್ಚಿನ ಅಂಕಪಡೆದು ಉತ್ತೀರ್ಣರಾದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸನ್ಮಾನಿಸಲಾಯಿತು.

ಸದರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಸೈಯ್ಯದ ನಜೀರೊದ್ದಿನ ಮುತವಲ್ಲಿರವರು ವಹಿಸಿಕೊಂಡಿದ್ದರು ಮುಖ್ಯ ಅತಿಥಿಗಳಾಗಿ ಡಾ: ಸದಾನಂದ ಪರ್ಲಾ ಅಕಾಶವಾಣಿ ನಿವೃತ್ತ ಕಾರ್ಯಕ್ರಮ ನಿರ್ವಾಹಣ ಅಧಿಕಾರಿಗಳು ಮತ್ತು ಅಲಾವೊದ್ದಿನ್ ಸಾಗರ ನಿವೃತ್ತ ಪ್ರಾಂಶುಪಾಲರು ಜೇವರ್ಗಿ ಪಿ.ಯು.ಕಾಲೇಜು ರವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಸಂಘದ ಹಿರಿಯ ಉಪಾಧ್ಯಕ್ಷರಾದ ಡಾ| ಅಸ್ಲಮ ಸಯೀದ್, ಸಂಘದ ಗೌರವ ಅಧ್ಯಕ್ಷರಾದ ಡಾ? ಎಂ.ಎಂ.ಬೇಗ್, ಹಾಗೂ ಸಂಘದ ಕಾರ್ಯಕಾರಿ ಅಧ್ಯಕ್ಷ ಅಸದ ಆಲಿ ಆನ್ಸಾರಿ ರವರು ವಹಿಸಿಕೊಂಡಿದ್ದರು.

ಕಾರ್ಯಕ್ರಮವನ್ನು ನಾತ ಹಾಗೂ ಖಿರಾತ ಪ್ರಾರ್ಥನೆಯೊಂದಿಗೆ ಅಸದ್ ಆಲಿ ಅನ್ಸಾರಿ ಹಾಗೂ ಮಹುಮ್ಮದ ಬಾಜಾ ಗೇಸುದರಾಜ ರವರು ಪಠಣದೊಂದಿಗೆ ಪ್ರಾರಂಭಿಸಿದರು. ಮುಖ್ಯ ಅತಿಥಿಯಾದ ಸದಾನಂದ ಪರ್ಲಾರವರು ನಿವೃತ್ತ ಅಲ್ಪಸಂಖ್ಯಾತರ ನೌಕರರ ಸಂಘದವರಿಗೆ ಹಾಗೂ 10ನೇ ಮತ್ತು ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮತ್ತು ಕುಟುಂಬದವರಿಗೆ ಅಭಿನಂದನೆಗಳು ಸಲ್ಲಿಸುತ್ತ ಕಲಬುರಗಿ ಜಿಲ್ಲೆಯಲ್ಲಿಯಾ ಫಲಿತಾಂಶದ ಹಿನ್ನಡೆ ಬಗ್ಗೆ ಶಿಕ್ಷಕರು, ಪಾಲಕರು ಮತ್ತು ಸ್ವಯಂ ಸೇವಾ ಸಂಘದವರು ಜಂಟಿ ಆಗಿ ಚಿಂತನೆ ಮಾಡಿ ಫಲಿತಾಂಶ ಹೆಚ್ಚಿಸುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಭೆಟ್ಟಿ ಮಾಡಿ ಚರ್ಚಿಸಿ ಮಾರ್ಗೋಪಾಯ ಕಂಡುಕೊಳ್ಳಬೇಕು ಇದು ಅತ್ಯಂತ ಅಗತ್ಯವಾದ ಕೆಲಸ ಎಂದು ಹೇಳಿದರು.

ಅಲವೊದ್ದೀನ್ ಸಾಗರ ಇವರು ಪ್ರತಿಭಾವಂತ ವಿದ್ಯಾರ್ಥಿಗಳ ಜೊತೆ ಕಡಿಮೆ ಅಂಕಪಡೆದವರ ಬಗ್ಗೆ ಕೂಡ ಗಮನ ಕೊಡಬೇಕೆಂದು ಮನವಿ ಮಾಡಿ ಮುಂದಿನದಿನಗಳಲ್ಲಿ ಈ ವಿದ್ಯಾರ್ಥಿಗಳು ತಮ್ಮ ಭವಿಷ್ಯ ಉತ್ತಮವಾಗಿ ಕಂಡುಕೊಳ್ಳಬೇಕು ಪ್ರತಿಭಾವಂತ ವಿದ್ಯಾರ್ಥಿಗಳನ್ನು ರೂಪಿಸಲು ಅಧ್ಯಾಪಕರು ನಿರಂತರ ಜ್ಞಾನವೃದ್ಧಿಗೆ ಆಸಕ್ತಿವಹಿಸಬೇಕೆಂದು ಹೇಳಿದ್ದರು.

ಇಂಜಿನಿಯರ ಹಾಗೂ ವೈದ್ಯರಷ್ಟೆ ಆಗುವ ಕನಸು ಬಿಟ್ಟು ಆಡಳಿತರಂಗ ಸೇರಿದಂತೆ ಇತರೆ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಪ್ರವೇಶ ಮಾಡಬೇಕು ಸಂಘದ ಉಪಾಧ್ಯಕ್ಷರಾದ ಡಾ| ಅಸ್ಲಂ ಸೈಯಿದ್ ರವರು ಹೇಳಿದರು.

ಸಂಘದ ಅಧ್ಯಕ್ಷರಾದ ಸೈಯ್ಯದ ನಜೀರೊದ್ದಿನ ಮುತವಲ್ಲಿ ರವರು ಅಲ್ಪಸಂಖ್ಯಾತರ ಸರ್ಕಾರಿ ನೌಕರರ ಮಕ್ಕಳಿಗೆ ಪ್ರತಿವರ್ಷದಂತೆ ಈ ವರ್ಷವೂ ಕೂಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಮಾಡಿ 10ನೇ ತರಗತಿಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಮುಂದೆ ಪಿಯುಸಿಯಲ್ಲಿ ಕೂಡ ಹೆಚ್ಚಿನ ಅಂಕಪಡೆದು ಮತ್ತೆ ಮುಂದಿನ ದಿನಗಳಲ್ಲಿ ನಮ್ಮ ಸಂಘದವತಿಯಿಂದ ನಡೆಯುವ ಸನ್ಮಾನ ಕಾರ್ಯರಕ್ರದಮಲ್ಲಿ ಭಾಗವಹಿಸಬೇಕೆಂದು ವಿದ್ಯಾರ್ಥಿಗಳಿಗೆ ಕೀವಿ ಮಾತು ಹೇಳಿದ್ದರು.

10ನೇ ತರಗತಿಯಲ್ಲಿ ಉತ್ತೀರ್ಣರಾದ 22 ಪ್ರತಿಭಾ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಮತ್ತು ಪಿಯುಸಿ ಯಲ್ಲಿ ಉತ್ತೀರ್ಣರಾದ 11 ಜನ ಎರಡು ಸೇರಿ 33 ವಿದ್ಯಾರ್ಥಿಗಳಿಗೆ ಪುರಸ್ಕಾರ ಪ್ರಶಸ್ತಿಯೊಂದಿಗೆ ಸನ್ಮಾನಿಸಲಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಅತ್ಯಂತ ಸೊಗಸಾಗಿ ನವಾಬಖಾನ್ ಕಾರ್ಯದರ್ಶಿ ರವರು ನಡೆಯಿಸಿಕೊಟ್ಟರು ಮತ್ತು ಸಂಘದ ಹಿರಿಯ ಉಪಾಧ್ಯಕ್ಷ ಮಹುಮ್ಮದ ಮಿನಹಾಡೊದ್ದಿನ ಹಾಗೂ ಜಂಟಿ ಕಾರ್ಯದರ್ಶಿಯಾದ ಅಬ್ದುಲ ಖದೀರ ಹಾಗೂ ಖಜಾಂಜಿ ಎಸ್.ಎಂ.ಖಾದ್ರಿ ಮತ್ತು ಖಾಯಂ ಸದಸ್ಯರಾದ ಮಹುಮ್ಮದ ಇಸ್ಮಾಯಿಲ್ ಇನಾಮಾರ ಮತ್ತು ಖಾಜಾ ಮೈನೋದ್ದಿನ್ ನಿವೃತ್ತ ಆಡಿಟ ಆಫಿಸರ್ ಹಾಗೂ ಸಮಸ್ಥ ಪದಾಧಿಕಾರಿಗಳು ಹಾಜರಿದ್ದರು.

emedialine

Recent Posts

ಸ್ಲಂ ಜನರಿಗೆ ಹಕ್ಕು ಪತ್ರ ನೀಡುವಂತೆ ರೇಣುಕಾ ಸರಡಗಿ ಸಿಎಂಗೆ ಮನವಿ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ. ಯಾದಗಿರಿ. ಬೀದರ್. ಕೊಪ್ಪಳ. ಬಳ್ಳಾರಿ, ರಾಯಚೂರು ಜಿಲ್ಲೆಗಳಲ್ಲಿ ಸ್ಲಂ ನಿವಾಸಿಗಳ ಕುಟುಂಬ 1ಲಕ್ಷ…

47 mins ago

ಶರಣಬಸವ ವಿಶ್ವವಿದ್ಯಾಲಯದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದಲ್ಲಿ ಮಂಗಳವಾರದಂದು, ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ವಿವಿಯ ಧ್ವಜಸ್ಥಂಭದಲ್ಲಿ ಉಪಕುಲಪತಿ ಪ್ರೊ. ಅನಿಲಕುಮಾರ ಬಿಡವೆ ಧ್ವಜಾರೋಹಣ…

1 hour ago

ವಕ್ಫ್ ಬೋರ್ಡ್ ನಿಂದ 15 ಜಿಲ್ಲೆಗಳಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಸಂಪುಟ ಅಸ್ತು: ಸಚಿವ ಜಮೀರ್ ಅಹಮದ್ ಖಾನ್

ಕಲಬುರಗಿ : ಐತಿಹಾಸಿಕ ವಿಶೇಷ ಸಂಪುಟ ಸಭೆ ಯಲ್ಲಿ ಕರ್ನಾಟಕ ವಖ್ಫ್ ಬೋರ್ಡ್ ವತಿಯಿಂದ ರಾಜ್ಯದ ಹದಿನೈದು ಜಿಲ್ಲೆಗಳಲ್ಲಿ ಮಹಿಳಾ…

3 hours ago

ಸೆ.22 ರಂದು ತುಂಗಭದ್ರೆಗೆ ಬಾಗಿನ ಅರ್ಪಣೆ: ಡಿ.ಕೆ ಶಿವಕುಮಾರ್

ಕಲಬುರಗಿ: ಬರುವ ಸೆಪ್ಟೆಂಬರ್ 22 ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಚಿವ ಸಂಪುಟದ ಸಹೊದ್ಯೋಗಿಗಳೊಂದಿಗೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಅರ್ಪಿಸಲಾಗುವುದು…

3 hours ago

ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ: ಡಿಕೆ ಶಿವುಕುಮಾರ್

ಕಲಬುರಗಿ: ಅಮೇರಿಕಾದ ಪ್ರವಾಸದಲ್ಲಿ ತಾವು ಯಾರನ್ನೂ ಭೇಟಿಯಾಗಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು. ಸಚಿವ ಸಂಪುಟದ ಸಭೆಯಲ್ಲಿ ಪಾಲ್ಗೊಳ್ಳಲು…

3 hours ago

ನಾಗಮಂಗಲ ಘಟನೆ: ತನಿಖೆ ನಂತರ ಇನ್ನಷ್ಟು ಕ್ರಮ: ಗೃಹ ಸಚಿವ ಪರಮೇಶ್ವರ

ಕಲಬುರಗಿ: ನಾಗಮಂಗಲದ ಅಹಿತರ ಘಟನೆ ಎಲ್ಲ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದ್ದು, ತನಿಖಾ ವರದಿ ನಂತರ ಮುಂದಿನ ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು…

3 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420