ಸುರಪುರ: ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಕೃಷ್ಣಾ ನದಿ ಪ್ರವಾಹದಿಂದ ಮನೆಗಳು ಹಾಳಾಗಿವೆ,ಸಾವಿರಾರು ಎಕರೆ ಬೆಳೆ ನಾಶವಾಗಿದೆ.ಸಂತ್ರಸ್ತ ಕುಟುಂಬಗಳ ಜನರು ಬದುಕ; ಉ ಯಾವುದೆ ಆಶ್ರಯ ಇಲ್ಲವಾಗಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಂತ್ರಸ್ತರನ್ನು ನಿರ್ಲಕ್ಷಿಸಿ ಬಿಡಿಗಾಸಿನ ಪರಿಹಾರವನ್ನು ನೀಡದೆ ಬಡವರ ಬದುಕು ದುಸ್ಥರಗೊಳಿಸಿವೆ.ಆದ್ದರಿಂದ ಮಾಜಿ ಪ್ರಧಾನಿಗಳಾದ ತಾವು ನಮ್ಮ ಸುರಪುರ ತಾಲ್ಲೂಕಿನ ಅನೇಕ ಗ್ರಾಮಗಳ ಜನತೆ ನೆರೆಗೆ ಸಿಕ್ಕು ಬದುಕು ಕಳೆದುಕೊಂಡವರಿಗೆ ಪ್ರಧಾನ ಮಂತ್ರಿಗಳು ಕೂಡಲೆ ಪರಿಹಾರಧನ ಬಿಡುಗಡೆ ಮಾಡಲು ಒತ್ತಾಯಿಸುವಂತೆ ಸುರಪುರ ತಾಲ್ಲೂಕು ಜಾತ್ಯಾತೀತ ಜನತಾದಳ ದಿಂದ ಮಾಜಿ ಪ್ರಧಾನಿ ಹಾಗು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಹೆಚ್.ಡಿ.ದೇವೆಗೌಡರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಜೆಡಿಎಸ್ ಮುಖಂಡ ವೆಂಕೋಬ ದೊರೆ ಮಾಹಿತಿ ನೀಡಿ,ಜೆಡಿಎಸ್ ಪಕ್ಷದ ಸಭೆಯಲ್ಲಿದ್ದ ಮಾಜಿ ಪ್ರಧಾನಿ ಹಾಗು ನಮ್ಮ ರಾಅಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಹೆಚ್.ಡಿ.ದೇವೆಗೌಡಜಿ ಅವರಿಗೆ ಮನವಿ ಸಲ್ಲಿಸಿ,ಸುರಪುರ ತಾಲ್ಲೂಕಿನ ಎಲ್ಲಾ ನೆರೆ ಸಂತ್ರಸ್ತರಿಗೆ ಕೂಡಲೆ ಪರಿಹಾರ ಬಿಡುಗಡೆಗೊಳಿಸಲು ಹಾಗು ಮನೆಗಳನ್ನು ಕಳೆದುಕೊಂಡವರಿಗೆ ಮನೆ ನೀಡಲು ಮತ್ತು ಬೆಳೆ ಹಾಳಾದ ರೈತರಿಗೆ ಎಕರೆಗೆ ಕನಿಷ್ಠ ಇಪ್ಪತ್ತೈದು ಸಾವಿರ ಪರಿಹಾರ ಧನ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಒತ್ತಾಯಿಸಲು ಮನವಿ ಮಾಡಿದ್ದು,ದೇವೆಗೌಡರು ಶೀಘ್ರದಲ್ಲಿಯೇ ಪ್ರಧಾನಮಂತ್ರಿಯವರನ್ನು ಭೇಟಿ ಮಾಡಿ ಪರಿಹಾರ ಬಿಡುಗಡೆಗೊಳಿಸಲು ಒತ್ತಾಯಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.ಜೆಡಿಎಸ್ ರಾಜ್ಯ ಸಂಘಟನಾ ಕಾರ್ಯದರ್ಶಿ ಉಸ್ತಾದ ವಜಾಹತ್ ಹುಸೇನ ಇತರರು ಜೊತೆಯಿದ್ದರು.
ಕಲಬುರಗಿ: ಇಲ್ಲಿನ ಪ್ರಸಿದ್ಧಿ ಸೂಫಿ ಸಂತ ಹಜರತ್ ಖಾಜಾ ಶೇಖ ಮಗದೂಮ್ ಅಲ್ಲಾವುದ್ದೀನ್ ಅನ್ಸಾರಿ ಚಿಸ್ತಿ ಲಾಡ್ಲೆ ಮಶಾಕ ಅನ್ಸಾರಿ…
ಕಲಬುರಗಿ: ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ'ದ ನಿವೃತ್ತ ಕಾರ್ಯನಿರ್ವಾಹಕ ಸಂಪಾದಕ ಶ್ರೀಕಾಂತಾಚಾರ್ಯ ಆರ್. ಮಣೂರ ಅವರಿಗೆ ಬುಧವಾರ ಸಂಜೆ ಬೆಂಗಳೂರಿನಲ್ಲಿ…
ಕಲಬುರಗಿ; ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಮತ್ತು ಭಾವಸರ್ ಕ್ಷತ್ರಿಯ…
ಕಲಬುರಗಿ: ನಗರದ ಕುವೆಂಪು ಕಾಲೋನಿ ಹಾಗೂ ಕಲ್ಯಾಣ ನಗರದದಲ್ಲಿ ಶ್ರೀ ಭವಾನಿ 1ನೇ ದಿನದ ಪುರಾಣ ಕಾರ್ಯಕ್ರಮ ಹಾಗೂ ದೇವಿಯ…
ಶಹಾಬಾದ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆಯನ್ನು ಕೊಡಬೇಕು ಎಂದು ಹೇಳಲು ಬಿಜೆಪಿಗರಿಗೆ ಯಾವ ನೈತಿಕತೆ ಇಲ್ಲ.ಸಿದ್ದರಾಮಯ್ಯನವರು ರಾಜೀನಾಮೆ ನೀಡುವ…
ಶಹಾಬಾದ: ಇಡಿ ವಿಶ್ವವವು ಗಾಂಧಿಜೀ ಅವರ ಸತ್ಯ ಮತ್ತು ಅಹಿಂಸೆಯ ದಾರಿಯಲ್ಲಿ ನಡೆದಾಗ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವೆಂದು…