ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ: ಮತದಾನಕ್ಕೆ 60 ತಂಡ ರಚನೆ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ ಇದೇ ಜೂನ್ 3 ರಂದು ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆ ವರೆಗೆ ಮತದಾನ ನಡೆಯಲಿದ್ದು, ಶಾಂತಿಯುತ ಮತದಾನಕ್ಕೆ ಜಿಲ್ಲೆಯಾದ್ಯಂತ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮತದಾನಕ್ಕೆ ಪ್ರತಿ ಮತಗಟ್ಟೆಗೆ 6 ಜನರ ತಂಡದಂತೆ ಒಟ್ಟು 60 ತಂಡ ರಚಿಸಲಾಗಿದೆ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಮತ್ತು ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಹೇಳಿದರು.

ಶನಿವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರತಿ ಮತಗಟ್ಟೆಗೆ ಓರ್ವ ಪಿ.ಆರ್.ಓ, ಓರ್ವ ಎ.ಪಿ.ಆರ್.ಓ, ಇಬ್ಬರು ಪಿ.ಓ., ಮೈಕ್ರೋ ವೀಕ್ಷಕರು ಒಬ್ಬರು, ಓರ್ವ ಗ್ರೂಪ್ ‘ಡಿ’ ಸಿಬ್ಬಂದಿ ಸೇರಿ ಪ್ರತಿ ಮಗತಟ್ಟೆಗೆ 6 ಜನ ಸಿಬ್ಬಂದಿ ಇರಲಿದ್ದಾರೆ. 60 ತಂಡದಲ್ಲಿ 13 ಮೀಸಲು ತಂಡಗಳಾಗಿವೆ. ಇನ್ನು ಪ್ರತಿ ಮತಗಟ್ಟೆಯಲ್ಲಿ ಓರ್ವ ಪೊಲೀಸ್ ಸಿಬ್ಬಂದಿ ಸಹ ಭದ್ರತೆಗೆ ಇರಲಿದ್ದಾರೆ. ಪ್ರತಿ ಮತಗಟ್ಟೆಯಲ್ಲಿ ಕನಿಷ್ಠ ಮೂಲಸೌಕರ್ಯ ಕಲ್ಪಿಸಿದೆ. ಇನ್ನು ಮಸ್ಟ್ರಿಂಗ್ ಕಾರ್ಯ ಆಯಾ ತಾಲೂಕಾ ಕೇಂದ್ರದಲ್ಲಿ ರವಿವಾರ ನಡೆಯಲಿದ್ದು, ಸಂಜೆ ಹೊತ್ತಿಗೆ ಮತಗಟ್ಟೆಗೆ ಸಿಬ್ಬಂದಿಗಳು ತಲುಪಲಿದ್ದಾರೆ ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ತಿಳಿಸಿದರು.

ಜಿಲ್ಲೆಯಲ್ಲಿ 22,688 ಪುರುಷರು, 15,826 ಮಹಿಳೆಯರು, ಇತರೆ 5 ಸೇರಿ ಒಟ್ಟು 38,519 ಜನ ಮತದಾರರು ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ. ಜಿಲ್ಲೆಯಾದ್ಯಂತ 41 ಮುಖ್ಯ, 6 ಹೆಚ್ಚುವರಿ ಸೇರಿ 47 ಮತಗಟ್ಟೆಗಳು ಸ್ಥಾಪಿಸಿದೆ. ತಾಲೂಕುವಾರು ಮತಗಟ್ಟೆ ನೋಡಿದಾಗ, ಅಫಜಲಪೂರ-4, ಆಳಂದ-5, ಚಿಂಚೋಳಿ, ಚಿತ್ತಾಪುರ ಹಾಗೂ ಜೇವರ್ಗಿ ತಲಾ 3, ಶಹಾಬಾದ, ಕಾಳಗಿ ಹಾಗೂ ಯಡ್ರಾಮಿ ತಲಾ 1, ಕಲಬುರಗಿ ನಗರ-18, ಕಲಬುರಗಿ ಗ್ರಾಮೀಣ ಮತ್ತು ಕಮಲಾಪುರ ತಲಾ 2 ಹಾಗೂ ಸೇಡಂ ತಾಲೂಕಿನಲ್ಲಿ 4 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದರು.

ಮತ ಅಮಾನ್ಯವಾಗದಂತೆ ಎಚ್ಚರ ವಹಿಸಿ: ಈ ಬಾರಿ ಕಳೆದ ಬಾರಿಕ್ಕಿಂತ ಹೆಚ್ಚಿನ ಮತದಾರರು ಜಿಲ್ಲೆಯಲ್ಲಿ ನೊಂದಾಯಿಸಿಕೊಂಡಿದ್ದಾರೆ. ಈ ಚುನಾವಣೆಯಲ್ಲಿ ಪೋಸ್ಟಲ್ ಬ್ಯಾಲೆಟ್ ಮೂಲಕ ಪ್ರಾಶಸ್ತ್ಯದ ಮತ ನೀಡಲು ಅವಕಾಶವಿದ್ದು, ಸಾಮಾನ್ಯ ಚುನಾವಣೆಗ್ಗಿಂತ ಇದು ಭಿನ್ನವಾಗಿದೆ. ಮತದಾನ ಕೇಂದ್ರದಲ್ಲಿ ಚುನಾವಣಾ ಆಯೋಗವು ನೀಡುವ ನೇರಳೆ ಬಣ್ಣದ ಸ್ಕೆಚ್ ಪೆನ್ನಿನಿಂದ ಮಾತ್ರ ಆದ್ಯತಾ ಮತ ನಮೂದಿಸಬೇಕು. ಆದ್ಯತಾ ಸಂಖ್ಯೆ ನಮೂದಿಸುವಾಗ ಒಂದೇ ಭಾಷೆ ಬಳಸಬೇಕು. ಸ್ಕೆಚ್ ಪೆನ್ ಹೊರತುಪಡಿಸಿ ಇತರೆ ಪೆನ್ ಬಳಸಿ ಮತ ಚಲಾಯಿಸಿದಲ್ಲಿ ಅಂತಹ ಮತಗಳು ಅಸಿಂಧುಗೊಳ್ಳಲಿದೆ ಎಂದ ಅವರು ಮತದಾನ ಸರಿಯಾದ ಕ್ರಮ ಕುರಿತು ಮಾಹಿತಿ ನೀಡಲು ಪ್ರತಿ ಮತಗಟ್ಟೆಗೆ ಓರ್ವ ಅಧಿಕಾರಿಗಳನ್ನು ಸಹ ನಿಯೋಜಿಸಲಾಗುತ್ತದೆ ಎಂದು ಡಿ.ಸಿ. ಬಿ.ಫೌಜಿಯಾ ತರನ್ನುಮ್ ತಿಳಿಸಿದರು.

144 ಜಾರಿ,ಮದ್ಯ ಮಾರಾಟ ನಿಷೇಧ: ಮತದಾನ ದಿನದಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತಗಟ್ಟೆಯಿಂದ 200 ಮೀಟರ್ ವ್ಯಾಪ್ತಿಯಲ್ಲಿ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ-1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಅಲ್ಲದೆ ಜೂನ್ 1ರ ಸಂಜೆ 4 ರಿಂದ ಜೂನ್ 3ರ ಮಧ್ಯರಾತ್ರಿ ವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದರು.

ಬಲಗೈ ತೋರು ಬೆರಳಿಗೆ ಶಾಹಿ: ಮತ ಚಲಾಯಿಸುವ ಮತದಾರರಿಗೆ ಅಳಿಸಲಾಗದ ಶಾಹಿಯನ್ನು (Indelible Ink)ನ್ನು ಬಲಗೈ ತೋರು ಬೆರಳಿಗೆ ಹಚ್ಚಲಾಗುತ್ತದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸುಮಿತ್ ಪಾಟೀಲ, ಪ್ರೊಬೇಷನರ್ ಐ.ಎ.ಎಸ್. ಅಧಿಕಾರಿ ಮೀನಾಕ್ಷಿ ಆರ್ಯ ಇದ್ದರು.

emedialine

Recent Posts

ಸಮಾಜದ ಅಭಿವೃದ್ಧಿಯಲ್ಲಿ ಸಂಘ ಸಂಸ್ಥೆಗಳ ಕೊಡುಗೆ ಅಪಾರ

ಸುರಪುರ: ನಾಡಿನ ಅಭಿವೃದ್ಧಿಗಾಗಿ ಹಿಂದಿನ ಕಾಲದಿಂದಲೂ ಸಂಘ ಸಂಸ್ಥಗಳು ಸಮಾಜಮುಖಿ ಕೆಲಸದಲ್ಲಿ ತಮ್ಮನ್ನು ತೊಡಗಿಸಿಕೊಳ್ಳುತ್ತಾ ಬಂದಿವೆ ಸಮಾಜದ ಅಭಿವೃದ್ಧಿಗೆ ಸಂಘ…

3 hours ago

ದಲಿತ ಸಂಘರ್ಷ ಸಮಿತಿ ಮೂಲಕ ನೊಂದವರಿಗೆ ನ್ಯಾಯ ಕೊಡಿಸೋಣ

ಸುರಪುರ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಗೆ ಈಗ 50 ವರ್ಷಗಳಾಗಿದ್ದು ನಮ್ಮ ನಾಯಕರಾದ ಮಾವಳ್ಳಿ ಶಂಕರ ಅವರಿಗೆ ನಾವೆಲ್ಲರು…

3 hours ago

ಬಿಜೆಪಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯ್‌ ಧರ್ಮಸಿಂಗ್‌ ಟಾಂಗ್‌

ಆರೋಪ ಇರೋರೆಲ್ಲಾ ರಾಜೀನಾಮೆ ಕೊಟ್ರೆ ಕೇಂದ್ರದ ಅರ್ಧ ಕ್ಯಾಬಿನೆಟ್‌ ಖಾಲಿ ಆಗ್ತದೆ ಎಂದು ಲೇವಡಿ ಹಿಂದೆ ಗೋದ್ರಾ ಪ್ರಕರಣದಲ್ಲಿ ಎಫ್‌ಐಆರ್‌…

3 hours ago

ಲಲಿತಾ ಜಮಾದಾರ್‌ಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

ಕಲಬುರಗಿ: ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಕೊಡ ಮಾಡುವ ಅತ್ಯುತ್ತುಮ ಶಿಕ್ಷಕಿ ವಾರ್ಷಿಕ ಪ್ರಶಸ್ತಿಗೆ ದೇವಾಂಗ ಶಿಕ್ಷಣ…

4 hours ago

ಪೌರಕಾರ್ಮಿಕರ ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ

ಕಲಬುರಗಿ: ಪೌರಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಪಾಲಿಕೆ ನೌಕರು ನಡೆಸುತ್ತಿರುವ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡ ಭಾರತ ಕಮ್ಯುನಿಷ್ಟ ಪಕ್ಷ…

4 hours ago

ನಿರ್ಗತಿಕರಿಗೆ ಬಟ್ಟೆ, ಆಟದ ಸಾಮಾನು ವಿತರಣೆ

ಕಲಬುರಗಿ: ಇನ್ನರ್‍ವ್ಹಿಲ್ ಕ್ಲಬ್ ಆಫ್ ಗುಲಬರ್ಗಾ ಸನ್‍ಸಿಟಿ ವತಿಯಿಂದ ನಗರದ ರಾಮತೀರ್ಥ ಮಂದಿರ ಹತ್ತಿರ ನಿರ್ಗತಿಕ ಹಾಗೂ ಕಡುಬಡುವ ಜನರಿಗೆ…

4 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420